ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News

ಬಲೂನ್ ಗೆ ಗಾಳಿ ತುಂಬಿದರೆ ಹೇಗೆ ಊದಿಕೊಳ್ಳುತ್ತೆ ನೋಡಿದ್ದೀರಲ್ವಾ? ಅದೇ ರೀತಿ ಮನುಷ್ಯರಿಗೆ ಗಾಳಿ ತುಂಬಿದ್ರೆ ಹೇಗೆ ಕಾಣ್ತೀವಿ.? ಕಾರ್ಟೂನ್‌ ಚಿತ್ರಗಳ ನೆನಪಾಗುತ್ತೆ. ಅಲ್ವಾ..? ಆದರೆ ಇಲ್ಲೊಬ್ಬ ಸ್ನೇಹಿತನೊಂದಿಗೆ ತಮಾಷೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಬೈಕ್‌ ಸರ್ವೀಸ್‌ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದವನು ಅರೆಸ್ಟ್‌ ಆಗುವಂತ ಕೆಲಸ ಏನಪ್ಪ ಮಾಡಿದ್ದು ಅನ್ನೋದನ್ನು ನೋಡೋದಾದರೆ, ಈ ಫೋಟೋದಲ್ಲಿ ಕಾಣ್ತಿದ್ದಾನಲ್ಲ ಈತನ ಹೆಸರು ಯೋಗೇಶ್‌. ದೇವನಹಳ್ಳಿ ಬಳಿಯ ವಿಜಯಪುರದ ಈತ 4 ವರ್ಷದಿಂದ ನಾಗವಾರದ ಅಜ್ಜಿ ಮನೆಯಲ್ಲಿ ಇದ್ಕೊಂಡು ಸ್ವಿಗ್ಗಿ, ಜೊಮ್ಯಾಟೋದಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡ್ತಿದ್ದ. ಆದರೆ ವಿಧಿಯಾಟಕ್ಕೆ ಬಲಿಯಾಗಿದ್ದಾನೆ.

ಅಚ್ಚರಿ ಅನ್ನಿಸಿದರೂ ಇದು ಸತ್ಯ. ಮಾರ್ಚ್‌ 25ರಂದು ಸಂಪಿಗೆಹಳ್ಳಿಯ ಮೃತ ಯುವಕ ಯೋಗೇಶ್‌ ಬೈಕ್‌ ಸರ್ವೀಸ್‌ಗೆ ಅಂತಾ CNS ಬೈಕ್‌ ಸರ್ವೀಸ್‌ ಸೆಂಟರ್‌ಗೆ ಹೋಗಿದ್ದ. ಆದರೆ ಬೈಕ್‌ ಸರ್ವೀಸ್‌ ಮಾಡ್ತಿದ್ದ ಸ್ನೇಹಿತ ಮುರಳಿ, ಯೋಗೇಶ್‌ ಕಡೆಗೆ ಏರ್‌ ಪ್ರೆಶರ್‌ನಿಂದ ಗಾಳಿ ಬಿಟ್ಟಿದ್ದ. ಗಾಳಿ ಒತ್ತಡ ತಾಳಲಾರದ ಹಿಂದಕ್ಕೆ ತಿರುಗಿದಾಗ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದಾನೆ. ಕೂಡಲೇ ಹೊಟ್ಟೆ ಉಬ್ಬರ ಶುರುವಾಗಿ ಕುಸಿ ಬಿದ್ದಿದ್ದಾನೆ. ಕುರುಳು ಬ್ಲಾಸ್ಟ್‌ ಆಗಿ ಸತ್ತೇ ಹೋಗಿದ್ದಾನೆ.

CNS ಸರ್ವೀಸ್‌ ಸೆಂಟರ್‌ನಲ್ಲಿ ಸ್ನೇಹಿತ ಇದ್ದಾನೆ ಅನ್ನೋ ಕಾರಣಕ್ಕೆ ಅಲ್ಲಿಗೆ ಹೋಗಿದ್ದ ಯೋಗೇಶ್‌ ಸಾವನ್ನಪ್ಪಿದ್ದಾನೆ. ಸಂಪಿಗೆಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಾವಿಗೆ ಕಾರಣವಾದ ಮುರಳಿಯನ್ನು ಬಂಧಿಸಿದ್ದಾರೆ. ಕೊಲೆ‌ ಮಾಡೋ ಉದ್ದೇಶ ಇರಲಿಲ್ಲ. ತಮಾಷೆ ಮಾಡಲು ಹೋಗಿ ಹೀಗಾಯ್ತು ಅಂತಾ ಕಣ್ಣೀರು ಹಾಕಿದ್ದಾ‌ನೆ ಎನ್ನಲಾಗಿದೆ.

ಈ ಸ್ಟೋರಿಯಿಂದ ಗೊತ್ತಾದ ಸಂಗತಿ ಏನಪ್ಪ ಅಂದರೆ ಎಲ್ಲಾ ವಿಚಾರದಲ್ಲೂ ತಮಾಷೆ ಸರಿಯಲ್ಲ ಅನ್ನೋದು. ಬರ್ತ್‌ ಡೇ ಬಂಪ್ಸ್‌ ಅಂತಾ ಇತ್ತೀಚಿಗೆ ಓರ್ವ ಯುವಕನ ಕೊಲೆ ನಡೆದಿತ್ತು. ಇದೀಗ ಮತ್ತೊಂದು ತಮಾಷೆ ಮರ್ಡರ್‌, ಇತ್ತ ಕುಟುಂಬಕ್ಕೆ ಆಧಾರವಾಗಿದ್ದ 24 ವರ್ಷದ ಮಗನನ್ನು‌ ಕಳೆದುಕೊಂಡು ಇಡೀ ಕುಟುಂಬ ಕಣ್ಣೀರು ಹಾಕುವಂತಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

2 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

6 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

6 hours ago

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ Private bus loses control and…

7 hours ago

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ – 19 ವರ್ಷದ ಯುವಕ ಸ್ಥಳದಲ್ಲೇ ಸಾವು

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ - 19 ವರ್ಷದ ಯುವಕ ಸ್ಥಳದಲ್ಲೇ ಸಾವು 19-year-old Arjun…

8 hours ago

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

1 day ago