5,8,9ನೇ ತರಗತಿ ಬೋರ್ಡ್ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ
5,8,9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆನಡೆಸಲು ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಮಾರ್ಚ್ 25 ರಿಂದಲೇ ಆರಂಭಗೊಳ್ಳಲಿದೆ.
5 ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 25 ರ ಸೋಮವಾರದಂದು ಪರೀಕ್ಷೆ ಆರಂಭಗೊಳ್ಳಲಿದೆ. ಮಾರ್ಚ್ 25 ರಂದು ಪರಿಸರ ಅಧ್ಯಯನ ಹಾಗೂ ಮಾರ್ಚ್ 26 ರಂದು ಗಣತಿ ಪರೀಕ್ಷೆ ನಡೆಯಲಿದೆ. ಇನ್ನು 8 ನೇ ತರಗತಿ ಮಾರ್ಚ್ 25 ರಂದು ತೃತೀಯ ಭಾಷೆ, ಮಾರ್ಚ್ 26 ರಂದು ಗಣಿತ, ಮಾರ್ಚ್ 27 ರಂದು ವಿಜ್ಞಾನ ಹಾಗೂ ಮಾರ್ಚ್ 28 ರಂದು ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.
ಇನ್ನು 9 ನೇ ತರಗತಿಗೆ ಕೂಡ ಮಾರ್ಚ್ 25 ರ ಸೋಮವಾರದಂದೇ ಪರೀಕ್ಷೆಗಳು ಪುನರರಾರಂಭಗೊಳ್ಳಲಿದೆ. ಮಾರ್ಚ್ 25 ರಂದು ತೃತೀಯ ಭಾಷೆ, ಮಾರ್ಚ್ 26 ರಂದು ಗಣತಿ, ಮಾರ್ಚ್ 27 ರಂದು ವಿಜ್ಞಾನ ಹಾಗೂ ಮಾರ್ಚ್ 28 ರಂದು ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಬೋರ್ಡ್ ಪರೀಕ್ಷೆ ಆರಂಭಗೊಂಡ ಬೆನ್ನಲ್ಲೇ ರುಪ್ಸಾ ಹೈಕೋರ್ಟ್ ಮೆಟ್ಟಿಲೇರಿ ಪರೀಕ್ಷೆಗೆ ತಡೆಯನ್ನು ತಂದಿತ್ತು.
ಆದರೆ ಶಿಕ್ಷಣ ಇಲಾಖೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮತ್ತೆ ಪರೀಕ್ಷೆ ನಡೆಸಲು ಅನುಮತಿಯನ್ನು ಪಡೆದುಕೊಂಡಿತ್ತು. ಆದರೆ ರುಪ್ಸಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಪರೀಕ್ಷೆಗೆ ತಡೆ ತಂದಿತ್ತು. ಆದ್ರೀಗ ಮತ್ತೆ ಹೈಕೋರ್ಟ್ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲೀಗ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ನಿತ್ಯವೂ ಒಂದೊಂದು ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.
ಎರಡು ಬಾರಿ ಪರೀಕ್ಷೆ ರದ್ದಾಗಿದ್ದು, ಇದೀಗ ಎಲ್ಲಾ ಗೊಂದಲಗಳ ನಡುವಲ್ಲೇ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರೀಕ್ಷೆಗೆ ಸಜ್ಜಾಗಬೇಕಾಗಿದೆ. ಸೋಮವಾರದಿಂದಲೇ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಸತತವಾಗಿ ಪರೀಕ್ಷೆಗಳು ನಡೆಯಲಿದೆ. ರುಪ್ಸಾ ಹಾಗೂ ಶಿಕ್ಷಣ ಇಲಾಖೆಯ ತಿಕ್ಕಾಟಕ್ಕೆ ಈ ಬಾರಿ ವಿದ್ಯಾರ್ಥಿಗಳು ಗೊಂದಲದಲ್ಲಿಯೇ ಪರೀಕ್ಷೆ ಬರೆಯುವ ಸ್ಥಿತಿ ಬಂದೊದಗಿತ್ತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್