Headlines

Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು

Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು 


ಬೊಲೆರೋ ಮತ್ತು ಸ್ಕೂಟಿ ಮಧ್ಯೆ ಒಂದು ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಜ್ಜಂಪುರ ತಾಲ್ಲೂಕಿನ ಹಿರೇಕಾನವಂಗಲ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ತಾಲ್ಲೂಕಿನ ಸಿದ್ಧಾಪುರ ಗ್ರಾಮದ
ಅರ್ಜುನ್ ಹಾಗೂ ಶ್ವೇತಾ ಮೃತಪಟ್ಟ ದುರ್ದೈವಿ ದಂಪತಿಗಳು ಎಂದು ತಿಳಿದು ಬಂದಿದೆ.

ಊರಿನಿಂದ ಅಜ್ಜಂಪುರಕ್ಕೆ ಸಂಬಂಧಿಕರ ಮನೆಗೆ ದಂಪತಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಬೊಲೆರೋ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ.


ಪ್ರತ್ಯಕ್ಷದರ್ಶಿಗಳ ಪ್ರಕಾರ ಸ್ಕೂಟಿ ಸವಾರಿ ಮಾಡುತ್ತಿದ್ದ ಅರ್ಜುನ್ ಹೆಲ್ಮೆಟ್ ಧರಿಸಿರಲಿಲ್ಲ ಹಾಗೂ ಕಾರು ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಬೊಲೆರೋ ಚಾಲಕ ದಾವಣಗೆರೆ ಮೂಲದವನು ಎನ್ನಲಾಗುತ್ತಿದ್ದು, ಚಾಲಕನನ್ನು ಬಂಧಿಸಿರುವ ಅಜ್ಜಂಪುರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ದಂಪತಿಗಳು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಆಸ್ಪತ್ರೆ ಬಳಿ ಜನರು ಜಮಾಯಿಸಿದ ಕಾರಣ ಮುಖ್ಯ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *