“ಆರೋಗ್ಯದಾಯಕ ಪರಿಸರ ಪಸರಿಸಲಿ” – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ
ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಸಂಪ್ರದಾಯದAತೆ ವಾರ್ಷಿಕ ರಥಯಾತ್ರಾ ಮಹೋತ್ಸವದ ಅಂಗವಾಗಿ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಜಿನಾಗಮ ಪೂರ್ವ ಪದ್ಧತಿಯಂತೆ ವಿಶೇಷ ಪೂಜಾವಿಧಿ ನೆರವೇರಿತು.
ಪೂಜ್ಯ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪೂಜಾ ವಿಧಿ-ವಿಧಾನ, ಕಲಿಕುಂಡ ಯಂತ್ರಾರಾಧನೆ ಸಾನಿಧ್ಯ ನೀಡಿದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹೊಂಬುಜ ಶ್ರೀಕ್ಷೇತ್ರದ ಮಠದ ಜಿನಮಂದಿರದ ಶ್ರೀ ನೇಮಿನಾಥ ಸ್ವಾಮಿ, ಮಕ್ಕಳ ಬಸದಿಯ ಶ್ರೀ ಪಾರ್ಶ್ವನಾಥ ಸ್ವಾಮಿ, ನಗರ ಜಿನಾಲಯದ ಶ್ರೀ ಆದಿನಾಥ ಸ್ವಾಮಿ ಮತ್ತು ಬೋಗಾರ ಬಸದಿಯ ತೀರ್ಥಂಕರ ಸನ್ನಿಧಿಯಲ್ಲಿ ಕ್ರಮವಾಗಿ ಗಣಧರವಲಯ ಆರಾಧನೆ, ಕಲ್ಯಾಣ ಮಂದಿರ ಆರಾಧನೆ, ಭಕ್ತಾಮರ ಆರಾಧನೆ, ಚೌಷಟ್ ಋದ್ಧಿ ವಿಧಾನ ನೆರವೇರಿಸಿದರು.
ದ್ವಿತೀಯ ದಿನದಂದು ಸಿಂಹವಾಹನೋತ್ಸವವು ಭಕ್ತಾದಿಗಳ ಜಯಘೋಷದೊಂದಿಗೆ ನಗರ ಪ್ರದಕ್ಷಿಣೆಯನ್ನು ಶಾಸ್ತçಬದ್ಧವಾಗಿ ಜರುಗಿಸಲಾಯಿತು.
ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಪ್ರಕೃತಿಯ ಆರಾಧನೆಯ ಅಂಗವಾಗಿ ಮೃಗರಾಜ ಸಿಂಹ ಸಾಂಕೇತಿಕವಾಗಿ, ಶ್ರೀ ದೇವರ ಯಾತ್ರೆಯನ್ನು ಸಿಂಹವಾಹನೋತ್ಸವದಲ್ಲಿ ನೆರವೇರಿಸಲಾಗುವುದು. ನಾಗವಾಹನೋತ್ಸವವು ಪ್ರಥ್ವಿಯ ಜಲನಿಧಿಯ ಸಂಕೇತವಾಗಿದ್ದು, ಶ್ರೀಕ್ಷೇತ್ರ ಹೊಂಬುಜದ ರಥಯಾತ್ರೆಯು ಪ್ರಕೃತಿಯ ಜೀವರಾಶಿಯ ಆರಾಧನೆಯೇ ಆಗಿದೆ ಎಂಬ ಸಂದೇಶ ನೀಡಿದರು. ಪರಿಸರ ಸಂರಕ್ಷಣೆ, ಅನ್ಯೋನ್ಯ ಬಾಂಧವ್ಯದ ಅನುಕರಣೆ ಮಾಡುವುದು ಆರೋಗ್ಯದಾಯಕ ಸಮಾಜ ನಿರ್ಮಾಣದ ಬುನಾದಿ ಎಂದು ಭಕ್ತರನ್ನು ಹರಸಿದರು.
ಪವನ್ ಕುಮಾರ್ ರಾರಾ ಸಹೋದರಿಯರು ತೀನ್ಸುಕಿಯಾ (ಅಸ್ಸಾಂ) ಅವರು ಸೇವಾಕರ್ತರಗಿದ್ದು ಪೂಜ್ಯ ಸ್ವಾಮೀಜಿಯವರು ಆಶೀರ್ವದಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್