Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ


ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಾಗಿದ್ದು ನಾನು ಮಾಡಿದ ಕಾರ್ಯಗಳು ಮತದಾರರ ಮನಮುಟ್ಟಿವೆ ಎಲ್ಲಾ ಸಮುದಾಯದವರು ಮತದಾರರು ನನಗೆ ಮತ್ತು ಕೇಂದ್ರದ ಮೋದಿಜಿಯವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆಂದು ಸಂಸದ ಶಿವಮೊಗ್ಗ ಲೋಕಸಭಾ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.

ಸಮೀಪದ ಕೋಣಂದೂರಿನ ಶ್ರೀಶಿವಲಿಂಗೇಶ್ವರ ಬೃಹನ್ಮಠಕ್ಕೆ ಭೇಟಿ ನೀಡಿ ಶಿವಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಅಶೀರ್ವಾದ ಪಡೆದು ಮಾತನಾಡಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ ಪುತ್ರನಿಗೆ ಹಾವೇರಿ ಕ್ಷೇತ್ರದಲ್ಲಿ ಟಿಕೇಟ್ ಸಿಗದೆ ಯಡಿಯೂರಪ್ಪ ಮತ್ತು ವಿಜೇಂದ್ರ ವಿರುದ್ದ ಸಲ್ಲದ ಮಾತುಗಳನ್ನಾಡುತ್ತಿರುವ ಈಶ್ವರಪ್ಪನವರು ಹಿರಿಯರು ಅವರ ಬಗ್ಗೆ ನಮಗೆ ಗೌರವವಿದೆ ಕೇಂದ್ರ ಸಮಿತಿಯಲ್ಲಿ ಅಯ್ಕೆ ಪ್ರಕ್ರಿಯೆ ನಡೆದಿದ್ದು ಇದರಲ್ಲಿ ನಮ್ಮ ತಂದೆ ಆಥವಾ ರಾಜ್ಯಧ್ಯಕ್ಷರ ಪಾತ್ರ ಏನು ಇಲ್ಲ ಎಂದು ಹೇಳಿ ಮುಂದಿನ ದಿನಗಳಲ್ಲಿ ಈಶ್ವರಪ್ಪನವರಿಗೆ ಎಲ್ಲವೂ ಆರ್ಥವಾಗುವುದೆಂದು ಹೇಳಿ ಪಶ್ಚಾತ್ತಾಪ ಪಡಬೇಕಾದ ದಿನಗಳು ದೂರವಿಲ್ಲ ಚುನಾವಣೆಯೇ ಉತ್ತರಿಸಲಿದೆ ಎಂದರು.


ಕಾಂಗ್ರೆಸ್ ಮತ್ತು ಪಕ್ಷೇತರ ಆಭ್ಯರ್ಥಿಗಳಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಸಮರ್ಥವಾಗಿ ಎದುರಿಸುವುದರೊಂದಿಗೆ ಕಳೆದ ಭಾರಿಗಿಂತ ಆಧಿಕ ಮತಗಳ ಅಂತರದಲ್ಲಿ ಗೆಲುವ ಬಗ್ಗೆ ವಾತವರಣ ಚನ್ನಾಗಿದೆ ಎಂಬುದಕ್ಕೆ ನಾನು ಹೋದಕಡೆಯಲ್ಲಿ ಸಣ್ಣ ಸಮುದಾಯದವರಿಂದ
ಹಿಡಿದು ಇತರ ಎಲ್ಲ ಸಮುದಾಯದವರು ಹೆಚ್ಚು ಬೆಂಬಲಿಸುತ್ತಿದ್ದಾರೆಂದು ಹೇಳುವುದರೊಂದಿಗೆ ಈ ಭಾರಿ ಚುನಾವಣೆಯನ್ನು ಸವಾಲಾಗಿ ಸ್ವಿಕರಿಸಿ ಈಜಿ ದಂಡ ಸೇರಿಸುವ ಕಾರ್ಯದಲ್ಲಿ ಕಾರ್ಯಕರ್ತರ ತಂಡ ಸಿದ್ದವಾಗಿದೆ ಎಂದರು.

ಈ ಸಂದರ್ಭದಲ್ಲಿ  ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು,ಶಾಸಕ ಆರಗಜ್ಞಾನೇಂದ್ರ, ಕೆ.ಆರ್.ಪ್ರಕಾಶ್,ಶಂಕರಯ್ಯ ಶಾಸ್ತಿಗಳು ಹಾದಿಗಲ್ಲು, ಬಿಜೆಪಿ ಮುಖಂಡರಾದ ನವೀನ್,ಕುಕ್ಕೆಪ್ರಶಾಂತ, ವೀರಶೈವ ಸಮಾಜದ ಉಪಾಧ್ಯಕ್ಷ ಜಿ.ಎಂ.ದುಂಡರಾಜಗೌಡ, ವೀರೇಶ್‌ ಅಲವಳ್ಳಿ, ಮಸರೂರುಶಾಂತವೀರಪ್ಪಗೌಡ,ಹೆಚ್.ಎಂ.ವರ್ತೇಶ್,ನಾಗಾಭೂಷಣಬೆಳಂದೂರು,ಸ್ವಾಮಿಗೌಡನೆವಟೂರು,ಕಮದೂರು ರಾಜಶೇಖರ, ಪರಮೇಶಕಮದೂರು,ಶಾಂತಕುಮಾರ ಜಂಬಳ್ಳಿ, ಅಭಿ ಬಿ.ಈ.ಕಿರಣ ಬೇಹಳ್ಳಿ,  ಶ್ರೀದೇವಿ ಕಿರಣ್, ರಾಜು ಕೋಣಂದೂರು,ಶಶಿಕುಮಾರ ಕೋಟೆಗದ್ದೆ,ರವಿ ಬಾಳೂರು,ಉಮೇಶ್ ಎಂ ಎಸ್ ದೊರೆಸ್ವಾಮಿ ಹುಳಗದ್ದ,ಗುರುಪಾದಪ್ಪ ಅಮೃತ ಇನ್ನಿತರ ಹಲವು ಬಿಜೆಪಿ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

6 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

6 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

10 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

12 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

12 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

22 hours ago