Ripponpete | ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ

ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ


ರಿಪ್ಪನ್‌ಪೇಟೆ;-ಈ ಭಾರಿಯಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ವ್ಯಕ್ತಿ ಆಧಾರಿತ ಚುನಾವಣೆಯಲ್ಲ ರಾಷ್ಟ್ರೀಯತೆಯ ಚುನಾವಣೆ ಎಂದು ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.

ರಿಪ್ಪನ್‌ಪೇಟೆಯಲ್ಲಿ ಲೋಕಸಭಾ ಚುನಾವಣೆಯ ಬಿಜೆಪಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ಕೇಂದ್ರದಿಂದ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ ತರಲಾಗಿರುವ ಅನುಧಾನದ ಕಾಮಗಾರಿಗಳ ಕುರಿತು ಮತದಾರರಿಗೆ ಮುಟ್ಟಿಸಬೇಕು ಹಾಗೂ ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಭಾಗ್ಯಲಕ್ಷಿö್ಮ ಬಾಂಡ್ ಹೀಗೆ ಹತ್ತು ಹಲವು ಜನಹಿತ ಕಾರ್ಯಗಳನ್ನು ಮಾಡುವುದರೊಂದಿಗೆ ಅಭಿವೃದ್ಧಿ ಪಡಿಸಲಾಗಿದ್ದು ಕಾರ್ಯಕರ್ತರು ಮತದಾರರಿಗೆ ಮನ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಹೇಳಿದರು.


ನಮ್ಮ ಸರ್ಕಾರದ ಯೋಜನೆಯಾದ ಜಲಜೀವನ ಮಿಷನ್ ಕಾಮಗಾರಿಯನ್ನು ಈ ಹಿಂದೆ ಪ್ರಧಾನಮಂತ್ರಿ ಮೋದಿಜಿಯವರು ಶಿವಮೊಗ್ಗ ಬೇಟಿ ಸಂದರ್ಭದಲ್ಲಿ ಚಾಲನೆ ನೀಡಲಾದರೂ ಕೂಡಾ ಇಂದಿನ ರಾಜ್ಯ ಶಿಕ್ಷಣ ಸಚಿವ ಮಧುಬಂಗಾರಪ್ಪ ಮತ್ತು ಸಾಗರ ಶಾಸಕ ಗೋಪಾಲಕೃಷ್ಣರವರು ನಮ್ಮ ಕಾಂಗ್ರೆಸ್ ಸರ್ಕಾರದ ಮಂಜೂರು ಮಾಡಿರುವುದೆಂದು ಹೇಳಿ ಇತ್ತೀಚೆಗೆ ಹೊಸನಗರದಲ್ಲಿ ಪುನ: ಶಂಕುಸ್ಥಾಪನೆ ಮಾಡುವ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅಂದಿನ ಶಾಸಕ ಹರತಾಳು ಹಾಲಪ್ಪ ಮತ್ತು ಗೃಹ ಸಚಿವ ಆರಗಜ್ಞಾನೇಂದ್ರರವರ ಆವಧಿಯಲ್ಲಿ ಚಕ್ರನಗರದಿಂದ ಹೊಸನಗರ ತಾಲ್ಲೂಕಿನ ವ್ಯಾಪ್ತಿಯ ನೂರಾರು ಹಳ್ಳಿಗಳಿಗೆ 417 ಕೋಟಿ ರೂ ವೆಚ್ಚದ ಜಲಜೀವನ್ ಮಿಷನ್ ಯೋಜನೆಯಡಿ ಶುದ್ದ ಕುಡಿಯುವ ನೀರಿನ ಯೋಜನೆ ಕಾಮಗಾರಿ  ಯಾರ ಅವಧಿಯಲ್ಲಿ ಮಾಡಿದ್ದು ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.


ಕೇಂದ್ರ ಸರ್ಕಾರದ ಅಯಿಷ್ಮಾನ್ ಯೋಜನೆಯಡಿ 2.51 ಲಕ್ಷ ಜನ ಫಲಾನುಭವಿಗಳಿಗೆ 260 ಕೋಟಿ ರೂ ಸೌಲಭ್ಯ ಪಡೆದಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ಜನರಿಗೆ ಸುಳ್ಳು ಅಶ್ವಾಸನೆ ನೀಡಿ ಅಧಿಕಾರ ಗದ್ದುಗೆ ಹಿಡಿದಿದ್ದು ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆ.ಜಿ.ಆಕ್ಕಿಯನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಸುಳ್ಳು ಹೇಳಿಕೊಂಡು ಮತದಾರರಿಗೆ ವಂಚಿಸುತ್ತಿರುವ ಕಾಂಗ್ರೆಸ್ ಸಾಧನೆ ಏನು ಎಂದರು.


ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್.ಸತೀಶ್,ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ, ತಾಲ್ಲೂಕ್ ಬಿಜೆಪಿ ಮುಖಂಡ  ಎಂ.ಬಿ.ಮಂಜುನಾಥ,ಪಕ್ಷದ ಜಿಲ್ಲಾ ಮುಖಂಡರಾದ ಆರ್.ಟಿ.ಗೋಪಾಲ, ಬೆಳ್ಳೂರು ತಿಮ್ಮಪ್ಪ, ನಾಗರತ್ನ ದೇವರಾಜ್,ಪದ್ಮಸುರೇಶ್,ಜಿ.ಪಂ.ಮಾಜಿ ಸದಸ್ಯ ಎ.ಟಿ.ನಾಗರತ್,ಜಗದೀಶ್,ಎಂ.ಸುರೇಶ್‌ಸಿಂಗ್, ನಾಗೇಂದ್ರ ಕಲ್ಲೂರು,ಸುಂದರೇಶ್, ಸರಸ್ವತಿ, ನಿಂಗಪ್ಪ ಕಗ್ಗಲಿ,ಗಿರೀಶ್, ಕೆ.ಬಿ.ಹೂವಪ್ಪ,ಜಿ.ಡಿ.ಮಲ್ಲಿಕಾರ್ಜುನ,ನಾಗರಾಜಗೌಡ ಮಲ್ಲಾಪುರ, ಇನ್ನಿತರ ಹಲವರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

6 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

7 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

11 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

13 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

13 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

23 hours ago