Ripponpete | ಕಾರಗೋಡು ಕಲಾನಾಥೇಶ್ವರ ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಧರ್ಮಸಮಾರಂಭ

ಕಾರಗೋಡು ಕಲಾನಾಥೇಶ್ವರ ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಧರ್ಮಸಮಾರಂಭ


ರಿಪ್ಪನ್‌ಪೇಟೆ ;- ಧಾರ್ಮಿಕ ಆಚರಣೆ ಮನುಷ್ಯನಿಗೆ ಶಾಂತಿ ನೆಮ್ಮದಿಯನ್ನು ನೀಡುತ್ತವೆಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಮ.ನಿ.ಪ್ರ.ಆಬಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು.

ಸಮೀಪದ ಕಾರಗೋಡು ಗ್ರಾಮದಲ್ಲಿ ಕಲಾನಾಥೇಶ್ವರ ಮತ್ತು ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮದ ಧರ್ಮಸಮಾರಂಭದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಜೀವನದಲ್ಲಿ ಸಾಧನೆಯ ಗುರಿ ತಲುಪಲು ಗುರುವಿನ ಕಾರುಣ್ಯ ಅಗತ್ಯ. ಮಹಾ ಶಿವರಾತ್ರಿಯ ದಿನದೊಂದು ಭವವಂತನ ನಾಮಸ್ಮರಣೆ ಪುಣ್ಯದ ಕೆಲಸವನ್ನು ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುವುದೆಂದು ಹೇಳಿದರು.

ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿ ನೇತೃತ್ವ ವಹಿಸಿ ಆಶಿರ್ವಚನ ನೀಡಿ ಸಮಾಜದ ಸಂಘಟನೆಗೆ ಗ್ರಾಮದಲ್ಲಿ ದೇವಸ್ಥಾನ ಶಾಲೆಗಳು ನಿರ್ಮಾಣವಾಗಬೇಕು. ಧರ್ಮದ ಕಾರ್ಯಗಳೊಂದಿಗೆ ದೇಶ ಕಾಯುವ ಯೋಧರ ಮತ್ತು ವ್ಯಾಸಂಗ ಮಾಡುವ ಮಕ್ಕಳ ಶ್ರಯೋಭಿವೃದ್ದಿಗೆ ಹೆಚ್ಚು ಅಧ್ಯತೆ ನೀಡಿ ಎಂದ ಅವರು ಜಗತ್ತಿನಲ್ಲಿ ಒಳ್ಳೆಯ ಕಾರ್ಯಕ್ಕೆ ಗುರುವಿಗೆ ಶ್ರೇಷ್ಟ ಸ್ಥಾನ ನೀಡಲಾಗಿದೆ.ಬ್ರಹ್ಮ- ವಿಷ್ಣು -ಮಹೇಶ್ವರ ಮೂರು ಶಕ್ತಿಯನ್ನು  ಒಂದೇ ರೂಪದಲ್ಲಿ ಶಿವನ ಸ್ಮರಣೆಯಲ್ಲಿ ಕಾಣುವಂತಾಗಿದೆ ಎಂದ ಅವರು ಅನ್ನಕೊಡುವ ರೈತರ ಬದುಕು ಹಸನನಾಗಲು ಕಾಲಕಾಲಕ್ಕೆ ಮಳೆಯಾಗಿ ಸಂವೃದ್ಧಿಯನ್ನು ಕರುಣಿಸುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಗಿದೆ ಎಂದರು.

ಕಲಾನಾಥೇಶ್ವರ ದೇವಸ್ಥಾನ ಸೇವಾಸಮಿತಿಯ ಅಧ್ಯಕ್ಷ ಯೋಗೇಂದ್ರ ಕಾರಗೋಡು ಆಧ್ಯಕ್ಷತೆ ವಹಿಸಿದರು.

ಕಲಾನಾಥೇಶ್ವರ ದೇವಸ್ಥಾನ ಸೇವಾಸಮಿತಿಯ ಗೌರವಾಧ್ಯಕ್ಷ ಹೊವಪ್ಪ ಕಾರಗೋಡು,ದೇವಸ್ಥಾನ ವಾಸ್ತು ಸಲಹೆಗಾರ ಲಿಂಗಸ್ವಾಮಿಗೌಡರು ಅಲುವಳ್ಳಿ,ಮಳಲಿಮಠದ ವೇ.ಶಿವರಾಜ ಆರಾಧ್ಯ ಶಾಸ್ತಿçಗಳು ಮುಖ್ಯ ಆತಿಥಿಗಳಾಗಿ ಭಾಗವಹಿಸಿದರು.

ವೈಧಿಕತ್ವದ ಸಾರತ್ಯದಲ್ಲಿ ವೇ// ಶಿವರಾಜ ಆರಾಧ್ಯ ಶಾಸ್ತಿçಗಳು ಮಳಲಿಮಠದ ಇವರಿಂದ ಶ್ರೀ ಕಲಾನಾಥೇಶ್ವರ ಸ್ವಾಮಿಯ ಹಾಗೂ ಪರಿವಾರ ಪುನರ್ ಪ್ರತಿಷ್ಠಾಪನಾ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಹರೀಶ್ ಸ್ವಾಗತಿಸಿದರು,ಚೇತನಕುಮಾರ್ ನಿರೂಪಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

3 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

3 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

7 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

9 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

10 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

19 hours ago