Ripponpete | ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ..!!

ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ


ರಿಪ್ಪನ್‌ಪೇಟೆ ಪಟ್ಟಣ ಹಾಗೂ ಸುತ್ತಮುತ್ತಲಿನ ಪದೇಶಗಳ ಜೀವನದಿಯಾಗಿರುವ ಶರ್ಮಣ್ಯಾವತಿ(ಗವಟೂರು ಹೊಳೆ) ನದಿ ಗ್ರಾಮಾಡಳಿತದ ದಿವ್ಯ ನಿರ್ಲಕ್ಷ್ಯದಿಂದ  ದಿನೇ ದಿನೆ ಕಲುಷಿತಗೊಳ್ಳುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಶರ್ಮಣ್ಯಾವತಿ ನದಿಯ ಎರಡು ಇಕ್ಕೆಲಗಳಲ್ಲಿ ಕೋಳಿ ತ್ಯಾಜ್ಯಗಳನ್ನು ಎಸೆಯುವ ಮೂಲಕ ಕಿಡಿಗೇಡಿಗಳು ತಮ್ಮ ವಿಕೃತಿಯನು ಮೆರೆಯುತಿದ್ದು,ಸೂರ್ಯೋದಯಕ್ಕೂ ಮುಂಚೆಯೆ ನದಿಯ ಬಳಿ ಬಂದು ತ್ಯಾಜ್ಯ ಎಸೆಯುತ್ತಾರೆ. ಕಸ, ಕಡ್ಡಿಗಳು, ಮದ್ಯದ ಬಾಟಲಿಗಳು, ವಿವಿಧ ತ್ಯಾಜ್ಯಗಳು, ಪ್ಲಾಸ್ಟಿಕ್‌ಗಳು, ಮನೆಯ ತ್ಯಾಜ್ಯವೂ ನದಿಯ ಕಡೆಗೆ ಮುಖ ಮಾಡಲು ಆರಂಭಿಸಿ ವರ್ಷಗಳೇ ಆಗಿವೆ.


ಪಟ್ಟಣದ ಗ್ರಾಪಂ ಆಡಳಿತದ ಸುಪರ್ದಿಯಲ್ಲಿರುವ ಹತ್ತಾರು ಕೋಳಿ ಅಂಗಡಿಗಳ ತ್ಯಾಜ್ಯವನ್ನು ನದಿಗೆ ಎಸೆಯುತಿದ್ದು ಈ ತ್ಯಾಜ್ಯಗಳಿಂದ ಅಪಾಯಕಾರಿ ಸೊಳ್ಳೆಗಳು ಹಾಗೂ ಇನ್ನಿತರ ಕ್ರಿಮಿ ಕೀಟಗಳು ಉತ್ಪತ್ತಿಯಾಗುತ್ತಿದ್ದು, ಪರಿಸರದಲ್ಲಿ ವಾಸಿಸುವ ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯನ್ನೆದುರಿಸುತ್ತಿದ್ದಾರೆ. ಈ ಪರಿಸರ ದುರ್ವಾಸನೆಯಿಂದ ತುಂಬಿದ್ದು ಈ ಪರಿಸರದಲ್ಲಿ ವಾಸಿಸುವ ಜನ ಮೂಗು ಮುಚ್ಚಿ ತಿರುಗುವಂತಾಗಿದೆ ಎಂದು ಸ್ಥಳಿಯರಾದ ನಾಗೇಂದ್ರ ತಮ್ಮ ಅಳಲು ತೋಡಿಕೊಳ್ಳುತ್ತಾರೆ.

ಈ ನದಿಯಲ್ಲಿರುವ ಮೀನು ಸೇರಿದಂತೆ ಇನ್ನಿತರ ಜಲಚರಗಳು ಹಾಗೂ ದನಕರುಗಳು, ಕಾಡುಪ್ರಾಣಿಗಳು ಈ ಕಲುಷಿತ ನೀರಿನ ಮೇಲೆ ಅವಲಂಬಿತವಾಗಿದೆ. ಈ ನದಿಯ ಪಕ್ಕದಲ್ಲಿಯೇ ರಿಪ್ಪನ್‌ಪೇಟೆ ಗ್ರಾಮಾಡಳಿತ ಲಕ್ಷಾಂತರ ರೂ ವೆಚ್ಚ ಮಾಡಿ ಕಸ ವಿಲೇವಾರಿ ಘಟಕವನ್ನು ಸ್ಥಾಪಿಸಿದ್ದರು ಸಹ ಕಸ ಹಾಗೂ ತ್ಯಾಜ್ಯ ವಸ್ತುಗಳನ್ನು ಸಾರ್ವಜನಿಕರು ಹಾಗೂ ಕೋಳಿ ಅಂಗಡಿಯವರು ನದಿಗೆ ಎಸೆಯುವ ಕೆಲಸ ಮಾಡುತಿದ್ದಾರೆ.


ಒಂದೆಡೆ ಸೊಳ್ಳೆಯಿಂದ ಹರಡುವ ಸಾಂಕ್ರಾಮಿಕ ರೋಗಗಳು ಕಾಲಿಟ್ಟಿವೆ, ನೀರು ನಿಲ್ಲದಂತೆ ನೋಡಿಕೊಳ್ಳಿ ಎಂಬ ಘೋಷಣೆ, ಮತ್ತೊಂದೆಡೆ ಅಲ್ಲಲ್ಲಿ ಸೊಳ್ಳೆ ಉತ್ಪಾದನಾ ಕೇಂದ್ರಗಳ ನಿರ್ಮಾಣ, ಜತೆಗೆ ನದಿಗೆ ತ್ಯಾಜ್ಯ ಎಸೆಯುವ ಪ್ರಕ್ರಿಯೆ ಇಂದಿಗೂ ಜೀವಂತವಾಗಿದೆ.

ನದಿಗೆ ನಿರಾತಂಕವಾಗಿ ತ್ಯಾಜ್ಯ ಎಸೆಯುವುದು ನಡೆಯುತ್ತಿದ್ದರೆ, ರಸ್ತೆ ಬದಿ ಕಸ ಎಸೆದು ಹೋಗುವವರ ಸಂಖ್ಯೆಯೂ ಕಮ್ಮಿಯಿಲ್ಲ. ಇಕ್ಕೆಲಗಳಲ್ಲೂ ನದಿ ಮಲಿನ ಮಾಡುವವರು ತಮ್ಮ ಈ ವಿಕೃತಿಯನ್ನು ಮುಂದುವರಿಸಿದ್ದಾರೆ. ಸೇತುವೆ ಮೇಲಿನಿಂದ ತ್ಯಾಜ್ಯದ ಕಟ್ಟುಗಳನ್ನು ನದಿಗೆ ಎಸೆದು ವಾಹನಗಳಲ್ಲಿ ತೆರಳುವವರು ಸಂಖ್ಯೆ ಹೆಚ್ಚಾಗಿದೆ.


ಗ್ರಾಮಾಡಳಿತ ಲಕ್ಷಾಂತರ ರೂ ಹಣ ಕಟ್ಟಿಸಿಕೊಂಡು ಕೋಳಿ ಅಂಗಡಿಗಳ ಲೈಸೆನ್ಸ್ ಗಳನ್ನು ನೀಡಿದ್ದು ತ್ಯಾಜ್ಯ ವಿಲೇವಾರಿಗಳ ಸೂಕ್ತವಾದ ಯಾವುದೇ ನಿರ್ದೇಶನಗಳನ್ನು ನೀಡದ ಹಿನ್ನಲೆಯಲ್ಲಿ ಗವಟೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ‌ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ನಾಗರೀಕರಲ್ಲಿ ಉಂಟಾಗಿದೆ.

ಒಟ್ಟಾರೆಯಾಗಿ ಈಗಾಗಲೇ ಬಿಸಿಲಿ ತಾಪ ಹೆಚ್ಚಾಗಿದ್ದು ದನಕರುಗಳಿಗೆ,ಪ್ರಾಣಿ ಪಕ್ಷಿ ಸಂಕುಲಕ್ಕೆ ನೀರಿನ ಹಾಹಾಕಾರ ಉಂಟಾಗಿರುವ ಈ ಸಂಧರ್ಭದಲ್ಲಿ ಕಿಡಿಗೇಡಿಗಳು ತ್ಯಾಜ್ಯ ವಸ್ತುಗಳನ್ನು ನದಿಗೆ ಎಸೆಯುವುದರ ಮೂಲಕ ತಮ್ಮ ವಿಕೃತಿ ಮೆರೆಯುತಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

2 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

3 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

7 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

7 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

7 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

7 hours ago