Ripponpete | ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ |

ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ | ಕಿಡಿಕೇಡಿಗಳ ನಿದ್ದೆಗೆಡಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕಣ್ಗಾವಲು

ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವಲ್ಲಿ ಪಿಎಸ್‌ಐ ನಿಂಗರಾಜ್ ಕೆ ವೈ ತೆಗೆದುಕೊಂಡ ಕ್ರಮ ಕಿಡಿಗೇಡಿಗಳ ನಿದ್ದೆಗೆಡಿಸಿದೆ.

ಹೌದು ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ , ಕೋಡೂರು ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕೆಲವು ಘಟನೆಗಳು ಪೊಲೀಸರ ತಲೆ ನೋವಿಗೆ ಕಾರಣವಾಗಿತ್ತು.


ಕೆಲವು ದಿನಗಳ ಹಿಂದಷ್ಟೇ ಪಟ್ಟಣದ ಪಿಎಸ್‌ಐ ಆಗಿ ಚಾರ್ಚ್ ತೆಗೆದುಕೊಂಡಿರುವ ನಿಂಗರಾಜ್ ಕೆ ವೈ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಾದ ಕೆಂಚನಾಲ ಮತ್ತು ಕೋಡೂರಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿ ಎರಡು ಗ್ರಾಮಗಳನ್ನು ಪೊಲೀಸ್ ಕಣ್ಗಾವಲಿನಲ್ಲಿರಿಸಿದ್ದಾರೆ.

ಈ ಅತ್ಯಾಧುನಿಕ ಕ್ಯಾಮೆರಾದಲ್ಲಿ 360° ದೃಶ್ಯ ಸೆರೆ ಹಿಡಿಯುವದಷ್ಟೇ ಅಲ್ಲದೇ ನೈಟ್ ವಿಷನ್ , ಸೈರನ್ ಹಾಗೂ ಒನ್ ಟೂ ಒನ್ ಮಾತನಾಡುವ ವ್ಯವಸ್ಥೆಯಿದೆ.ಈ ಕ್ಯಾಮೆರಾವನ್ನು ಪಿಎಸ್‌ಐ ಸೇರಿದಂತೆ ಐವರು ಪೊಲೀಸರು ದಿನದ 24 ಗಂಟೆಯೂ ಮಾನಿಟರ್ ಮಾಡುತ್ತಾರೆ.

ರಾತ್ರಿ 09 ಗಂಟೆಯ ನಂತರ ಅನಾವಶ್ಯಕವಾಗಿ ತಿರುಗಾಡುವಂತಿಲ್ಲ ಒಂದು ವೇಳೆ ತಿರುಗಾಡಿದರೆ ಕೂಡಲೇ ಈ ಕ್ಯಾಮೆರಾದೊಂದಿಗೆ ಅಳವಡಿಸಿರುವ ಸೈರನ್ ಕೂಗಿಕೊಳ್ಳುತ್ತದೆ ನಂತರ ಪೊಲೀಸರಿಂದ ಆತನಿಗೆ ವಾರ್ನಿಂಗ್ ನೀಡಲಾಗುತ್ತಿದೆ. ತಡರಾತ್ರಿ ಮನೆಯಿಂದ ಹೊರಡುವ ಮುನ್ನ ಕ್ಯಾಮೆರಾದ ಮುಂದೆ ಸ್ಪಷ್ಟವಾದ ಕಾರಣ ನೀಡಬೇಕು ಇಲ್ಲದಿದ್ದಲ್ಲಿ ಮಾರನೇ ದಿನ ಮನೆ ಮುಂದೆ ಪೊಲೀಸ್ ವಾಹನ ನಿಂತಿರುತ್ತದೆ.

ಮೂಲತಃ ಇಂಜಿನಿಯರ್ ಪದವೀಧರರಾಗಿರುವ ನಿಂಗರಾಜ್ ಕೆ ವೈ ಈ ಕ್ಯಾಮೆರಾಗಳನ್ನು ತಮ್ಮ ಸ್ವಂತ ಹಣದಿಂದ ಖರೀದಿಸಿದ್ದು ಇವರು ಕಾರ್ಯ ನಿರ್ವಹಿಸುವ ಠಾಣೆಗೆ ಈ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವ ಗುರಿ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ರಿಪ್ಪನ್‌ಪೇಟೆಯ ವಿವಿಧ ಪ್ರದೇಶದಲ್ಲಿ ಇಂತಹ ಅತ್ಯಾಧುನಿಕ ಕ್ಯಾಮೆರಾವನ್ನು ಅಳವಡಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿಪಿಐ ಗುರಣ್ಣ ಡಿ ಹೆಬ್ಬಾರ್ ಪಟ್ಟಣದ ಪಿಎಸ್‌ಐ ರವರ ವಿಶೇಷ ಆಸಕ್ತಿಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಕ್ಯಾಮೆರಾದಿಂದ ದಿನದ 24 ಗಂಟೆಯೂ ಪೊಲೀಸ್ ನಿಗಾ ಇಡುವ ಮೂಲಕ ಶಾಂತಿ ಸುವ್ಯವಸ್ಥೆ ಕಾಪಾಡಲಾಗುತ್ತಿದೆ ಎಂದರು.

ಕೆಲವು ಕಿಡಿಗೇಡಿಗಳಿಂದ ಹಲವು ದಶಕಗಳಿಂದ ಸಾಮರಸ್ಯದಿಂದ ಕೆಂಚನಾಲ ಗ್ರಾಮದಲ್ಲಿ ಇಂತಹ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಪಿಎಸ್‌ಐ ನಿಂಗರಾಜ್ ನಮ್ಮ ಗ್ರಾಮಗಳಲ್ಲಿ ಶಾಂತ ಪರಿಸ್ಥಿತಿ ನಿರ್ಮಾಣವಾಗಲು ಸಹಕರಿಸುತಿದ್ದಾರೆ ಇವರಿಗೆ ನಮ್ಮ ಗ್ರಾಪಂ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ

ಉಬೇದುಲ್ಲಾ ಷರೀಫ್ ಅಧ್ಯಕ್ಷರು ಗ್ರಾಪಂ ಕೆಂಚನಾಲ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

2 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

22 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

22 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

22 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

23 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

1 day ago