Ripponpete | ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ |

ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ | ಕಿಡಿಕೇಡಿಗಳ ನಿದ್ದೆಗೆಡಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕಣ್ಗಾವಲು

ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವಲ್ಲಿ ಪಿಎಸ್‌ಐ ನಿಂಗರಾಜ್ ಕೆ ವೈ ತೆಗೆದುಕೊಂಡ ಕ್ರಮ ಕಿಡಿಗೇಡಿಗಳ ನಿದ್ದೆಗೆಡಿಸಿದೆ.

ಹೌದು ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ , ಕೋಡೂರು ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕೆಲವು ಘಟನೆಗಳು ಪೊಲೀಸರ ತಲೆ ನೋವಿಗೆ ಕಾರಣವಾಗಿತ್ತು.


ಕೆಲವು ದಿನಗಳ ಹಿಂದಷ್ಟೇ ಪಟ್ಟಣದ ಪಿಎಸ್‌ಐ ಆಗಿ ಚಾರ್ಚ್ ತೆಗೆದುಕೊಂಡಿರುವ ನಿಂಗರಾಜ್ ಕೆ ವೈ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಾದ ಕೆಂಚನಾಲ ಮತ್ತು ಕೋಡೂರಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿ ಎರಡು ಗ್ರಾಮಗಳನ್ನು ಪೊಲೀಸ್ ಕಣ್ಗಾವಲಿನಲ್ಲಿರಿಸಿದ್ದಾರೆ.

ಈ ಅತ್ಯಾಧುನಿಕ ಕ್ಯಾಮೆರಾದಲ್ಲಿ 360° ದೃಶ್ಯ ಸೆರೆ ಹಿಡಿಯುವದಷ್ಟೇ ಅಲ್ಲದೇ ನೈಟ್ ವಿಷನ್ , ಸೈರನ್ ಹಾಗೂ ಒನ್ ಟೂ ಒನ್ ಮಾತನಾಡುವ ವ್ಯವಸ್ಥೆಯಿದೆ.ಈ ಕ್ಯಾಮೆರಾವನ್ನು ಪಿಎಸ್‌ಐ ಸೇರಿದಂತೆ ಐವರು ಪೊಲೀಸರು ದಿನದ 24 ಗಂಟೆಯೂ ಮಾನಿಟರ್ ಮಾಡುತ್ತಾರೆ.

ರಾತ್ರಿ 09 ಗಂಟೆಯ ನಂತರ ಅನಾವಶ್ಯಕವಾಗಿ ತಿರುಗಾಡುವಂತಿಲ್ಲ ಒಂದು ವೇಳೆ ತಿರುಗಾಡಿದರೆ ಕೂಡಲೇ ಈ ಕ್ಯಾಮೆರಾದೊಂದಿಗೆ ಅಳವಡಿಸಿರುವ ಸೈರನ್ ಕೂಗಿಕೊಳ್ಳುತ್ತದೆ ನಂತರ ಪೊಲೀಸರಿಂದ ಆತನಿಗೆ ವಾರ್ನಿಂಗ್ ನೀಡಲಾಗುತ್ತಿದೆ. ತಡರಾತ್ರಿ ಮನೆಯಿಂದ ಹೊರಡುವ ಮುನ್ನ ಕ್ಯಾಮೆರಾದ ಮುಂದೆ ಸ್ಪಷ್ಟವಾದ ಕಾರಣ ನೀಡಬೇಕು ಇಲ್ಲದಿದ್ದಲ್ಲಿ ಮಾರನೇ ದಿನ ಮನೆ ಮುಂದೆ ಪೊಲೀಸ್ ವಾಹನ ನಿಂತಿರುತ್ತದೆ.

ಮೂಲತಃ ಇಂಜಿನಿಯರ್ ಪದವೀಧರರಾಗಿರುವ ನಿಂಗರಾಜ್ ಕೆ ವೈ ಈ ಕ್ಯಾಮೆರಾಗಳನ್ನು ತಮ್ಮ ಸ್ವಂತ ಹಣದಿಂದ ಖರೀದಿಸಿದ್ದು ಇವರು ಕಾರ್ಯ ನಿರ್ವಹಿಸುವ ಠಾಣೆಗೆ ಈ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವ ಗುರಿ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ರಿಪ್ಪನ್‌ಪೇಟೆಯ ವಿವಿಧ ಪ್ರದೇಶದಲ್ಲಿ ಇಂತಹ ಅತ್ಯಾಧುನಿಕ ಕ್ಯಾಮೆರಾವನ್ನು ಅಳವಡಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿಪಿಐ ಗುರಣ್ಣ ಡಿ ಹೆಬ್ಬಾರ್ ಪಟ್ಟಣದ ಪಿಎಸ್‌ಐ ರವರ ವಿಶೇಷ ಆಸಕ್ತಿಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಕ್ಯಾಮೆರಾದಿಂದ ದಿನದ 24 ಗಂಟೆಯೂ ಪೊಲೀಸ್ ನಿಗಾ ಇಡುವ ಮೂಲಕ ಶಾಂತಿ ಸುವ್ಯವಸ್ಥೆ ಕಾಪಾಡಲಾಗುತ್ತಿದೆ ಎಂದರು.

ಕೆಲವು ಕಿಡಿಗೇಡಿಗಳಿಂದ ಹಲವು ದಶಕಗಳಿಂದ ಸಾಮರಸ್ಯದಿಂದ ಕೆಂಚನಾಲ ಗ್ರಾಮದಲ್ಲಿ ಇಂತಹ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಪಿಎಸ್‌ಐ ನಿಂಗರಾಜ್ ನಮ್ಮ ಗ್ರಾಮಗಳಲ್ಲಿ ಶಾಂತ ಪರಿಸ್ಥಿತಿ ನಿರ್ಮಾಣವಾಗಲು ಸಹಕರಿಸುತಿದ್ದಾರೆ ಇವರಿಗೆ ನಮ್ಮ ಗ್ರಾಪಂ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ

ಉಬೇದುಲ್ಲಾ ಷರೀಫ್ ಅಧ್ಯಕ್ಷರು ಗ್ರಾಪಂ ಕೆಂಚನಾಲ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

10 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

10 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

11 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

12 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

16 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

17 hours ago