Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು


ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ರೂ. 2,23,046 ಮೌಲ್ಯದ ಪರವಾನಗಿ ಇಲ್ಲದ ಒಟ್ಟು 51.84 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.

ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು, ಸಾಗರ ಉಪ ವಿಭಾಗರವರ ಮಾರ್ಗದರ್ಶನದಲ್ಲಿ ದಿನಾಂಕ 28.03.2024 ರಂದು ರಾತ್ರಿ 09.45 ಕ್ಕೆ ಸಾಗರ ತಾಲ್ಲೂಕು ಕಾನಲೆ ಕ್ರಾಸ್ ಬಳಿ ರಸ್ತೆಗಾವಲು ನಡೆಸುತ್ತಿದ್ದಾಗ ಟಾಟಾ ಏಸ್ ಗೂಡ್ಸ್ ನಾಲ್ಕು ಚಕ್ರದ ವಾಹನವು ತಾಳಗುಪ್ಪ ಕಡೆಯಿಂದ ಸಾಗರ ಮಾರ್ಗವಾಗಿ ಬರುತ್ತಿದ್ದು ತಪಾಸಣೆ ನಡೆಸುವ ಸಲುವಾಗಿ ನಿಲ್ಲಿಸಲು ಸೂಚಿಸಿದಾಗ ವಾಹನವನ್ನು ನಿಲ್ಲಿಸದೇ ತಿರುಗಿಸುವ ಬರದಲ್ಲಿ ವಾಹನವು ಬಂದ್ ಆಗಿದ್ದು, ತಕ್ಷಣ ಚಾಲನೆ ಮಾಡುತ್ತಿದ್ದ ಓರ್ವ ವ್ಯಕ್ತಿಯು ವಾಹನದಿಂದ ಇಳಿದು ಓಡಲಾರಂಭಿಸಿದನು.


ಆತನ್ನನ್ನು ಹಿಡಿಯಲು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಯತ್ನಿಸಲಾಗಿ ಸಿಗದೇ ಕತ್ತಲೆಯಲ್ಲಿ ಓಡಿ ಮರೆಯಾಗಿರುತ್ತಾನೆ. ನಂತರ ಬಿಳಿ ಬಣ್ಣದ ಟಾಟಾ ಏಸ್ ನಾಲ್ಕು ಚಕ್ರದ ವಾಹನದ ನೋಂದಣಿ ಸಂಖ್ಯೆ ಕೆಎ-15 9940 ವನ್ನು ತಪಾಸಣೆ ನಡೆಸಲು ನಿರ್ಧರಿಸಿ ಎಫ್‍ಎಸ್‍ಟಿ -4ಸಿ ತಾಳಗುಪ್ಪರವರನ್ನು ಸ್ಥಳಕ್ಕೆ ಕರೆಸಿಕೊಂಡು ವಾಹನವನ್ನು ತಪಾಸಣೆ ನಡೆಸಲಾಗಿ ವಾಹನದ ಚಾಲಕನ ಸೀಟಿನ ಪಕ್ಕದ ಸೀಟಿನ ಮೇಲೆ ಮತ್ತು ಕೆಳಗೆ 02 ನೀಲಿ ಬಣ್ಣದ ಪ್ಲಾಸ್ಟಿಕ್ ಚೀಲಗಳಿದ್ದು ಒಂದು ಚೀಲದಲ್ಲಿ 90 ಮಿ.ಲೀ ಒರಿಜಿನಲ್ ಛಾಯ್ಸ್ ವಿಸ್ಕಿ ಹೆಸರಿನ ಮದ್ಯ ತುಂಬಿದ 288 ಟೆಟ್ರಾ ಪ್ಯಾಕ್ ಗಳು ಹಾಗೂ ಎರಡನೇ ಚೀಲದಲ್ಲಿ 90 ಮಿ.ಲೀ ಕ್ಯಾಪ್ಟನ್ ಮಾರ್ಟಿನ್ ವಿಸ್ಕಿ ಹೆಸರಿನ 288 ಮದ್ಯ ತುಂಬಿದ ಟೆಟ್ರಾ ಪ್ಯಾಕ್‍ಗಳಿದ್ದು ಪರವಾನಿಗೆ ಇಲ್ಲದೆ ಒಟ್ಟು 51.84 ಲೀಟರ್ ಮದ್ಯ ವಾಹನದಲ್ಲಿ ದಾಸ್ತಾನು ಹೊಂದಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದದ್ದು ಕಂಡುಬಂದಿರುತ್ತದೆ.

ಇದು ಕರ್ನಾಟಕ ಅಬಕಾರಿ ಕಾಯಿದೆ 1965 ರ ಕಲಂ 11,14, ರೀತ್ಯಾ ಅಪರಾಧವಾಗಿದ್ದು, ಇದೇ ಕಾಯಿದೆ ಅಡಿ 32(1), 38(ಎ), ರ ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಆರೋಪಿತನು ದಾಳಿ ವೇಳೆ ತಲೆಮರೆಸಿಕೊಂಡಿದ್ದು, ಮೇಲ್ಕಾಣಿಸಿದ ಮುದ್ದೆಮಾಲು ಹಾಗೂ ವಾಹನವನ್ನು ಪಂಚರ ಸಮಕ್ಷಮ ಪಂಚನಾಮೆಯಡಿಯಲ್ಲಿ ಜಫ್ತುಪಡಿಸಿಕೊಂಡು ಆರೋಪಿ ಹಾಗೂ ವಾಹನದ ಮಾಲೀಕರ ವಿರುದ್ಧ ಮೊಕದ್ದಮೆ ದಾಖಲು ಮಾಡಲಾಗಿರುತ್ತದೆ. ವಾಹನ ಮತ್ತು ಮುದ್ದೆಮಾಲಿನ ಅಂದಾಜು ಮೌಲ್ಯ 2,23,046 ರೂಗಳಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

2 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

6 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

6 hours ago

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ Private bus loses control and…

7 hours ago

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ – 19 ವರ್ಷದ ಯುವಕ ಸ್ಥಳದಲ್ಲೇ ಸಾವು

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ - 19 ವರ್ಷದ ಯುವಕ ಸ್ಥಳದಲ್ಲೇ ಸಾವು 19-year-old Arjun…

8 hours ago

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

1 day ago