Shivamogga | ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ – ಕೆ ಎಸ್ ಈಶ್ವರಪ್ಪ

Shivamogga | ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ – ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದಿಂದ ಹಿಂದಕ್ಕೆ ಸರಿಯುವುದಿಲ್ಲ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನನ್ನೊಂದಿಗೆ ಮಾತನಾಡಿದ್ದಾರೆ.

ಸ್ಪರ್ಧೆಯಿಂದ ಹಿಂದಕ್ಕೆ ಸರಿಯಲು ನಾನು ಒಪ್ಪಿಕೊಂಡಿರುವೆ ಎಂದು ಕೆಲವು ಮಾಧ್ಯಮಗಳು ಅಪಪ್ರಚಾರ ನಡೆಸುತ್ತಿವೆ. ಆ ಮೂಲಕ ನನ್ನ ಬೆಂಬಲಿಗರಲ್ಲಿ ಗೊಂದಲ ಮೂಡಿಸುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳದಲ್ಲಿದ್ದ ಖಾಸಗಿ ವಾಹಿನಿಯೊಂದರ ಪ್ರತಿನಿಧಿ ವಿರುದ್ಧ ತೀವ್ರ ಅಸಮಾಧಾನ ಕೂಡ ವ್ಯಕ್ತಪಡಿಸಿದ ಈಶ್ವರಪ್ಪ, ‘ನನ್ನೊಂದಿಗೆ ಯಾರೂ ಮಾತನಾಡಿಲ್ಲ. ಮಾತುಕತೆಗೆ ನಾನು ಸಿದ್ಧವೂ ಇಲ್ಲ’ ಎಂದು ಒತ್ತಿ ಹೇಳಿದರು. ಕಾದು ನೋಡಿ ಕೆಲವೇ ದಿನಗಳಲ್ಲಿ ರಾಜ್ಯದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಗಳು ಆಗಲಿವೆ ಎಂದರು.

‘ರಾಷ್ಟ್ರಭಕ್ತರ ಬಳಗ ಹೆಸರಿನಲ್ಲಿ ಚುನಾವಣೆ ಎದುರಿಸುವೆ. ಬೂತ್‌ ಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಿ ಸಂಪರ್ಕಿಸುವ ಕೆಲಸ ಆರಂಭವಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷದ ಅಭ್ಯರ್ಥಿಗಳ ವಿರುದ್ಧ ಅಸಮಾಧಾನ ಹೊಂದಿರುವ ದೊಡ್ಡ ಸಂಖ್ಯೆಯ ಅದೃಶ್ಯ ಮತದಾರರು ನನ್ನೊಂದಿಗೆ ಇದ್ದಾರೆ. ರಾಷ್ಟ್ರಭಕ್ತ ಮುಸ್ಲಿಮರು ಕರೆ ಮಾಡಿ ಬೆಂಬಲ ಸೂಚಿಸುತ್ತಿದ್ದಾರೆ’ ಎಂದರು.

ಮಾ.26ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಶುಭಮಂಗಳ ಸಮುದಾಯ ಭವನದಲ್ಲಿ ಬೂತ್‌ಮಟ್ಟದ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದೆ. ಪ್ರತಿ ಬೂತ್‌ನಿಂದ ಇಬ್ಬರಂತೆ 4 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಬರಲಿದ್ದಾರೆ ಎಂದರು.

‘ಪುತ್ರನಿಗೆ ಟಿಕೆಟ್ ಸಿಗಲಿಲ್ಲ ಎಂದು ಯಡಿಯೂರಪ್ಪ ಅವರ ಕುಟುಂಬದ ರಾಜಕಾರಣದ ಬಗ್ಗೆ ಮಾತನಾಡುತ್ತಿರುವೆ ಎಂದು ಬಿಜೆಪಿಯ ಕೆಲವರು ಆರೋಪಿಸುತ್ತಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಆದ ನಂತರ ಪುತ್ರನಿಗೆ ಅವಕಾಶ ಕೇಳಿದ್ದೇನೆ. ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯ. ಹೀಗಾಗಿ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣ ಪ್ರಶ್ನೆ ಮಾಡಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ವಿಶ್ವಾಸ್, ಸುವರ್ಣಾ ಶಂಕರ್, ಗನ್ನಿಶಂಕರ್, ಸೀತಾಲಕ್ಷ್ಮೀ, ಮಹಾಲಿಂಗಶಾಸ್ತ್ರಿ, ಕಾಚಿನಕಟ್ಟೆ ಸತ್ಯನಾರಾಯಣ, ಏಳುಮಲೈ, ಲಕ್ಷ್ಮೀಶಂಕರ ನಾಯಕ, ಅನಿತಾ, ವನಿತಾ, ಯಶೋಧಾ, ರಾಧಾ, ಉಮಾ, ಶಂಕರನಾಯ್ಕ ಸೇರಿದಂತೆ ಹಲವರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

5 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

5 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

9 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

11 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

12 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

21 hours ago