Shivamogga | ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್

ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್

ಹಿಂದುಳಿದವರ ಮತ ವಿಭಜನೆ ಆದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭ ಎಂಬ ಕಾರಣಕ್ಕೆ ಕೆ.ಎಸ್. ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯನ್ನಾಗಿ ಬಿಜೆಪಿ ಮುಖಂಡ ಬಿ.ಎಸ್‌. ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸುತ್ತಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಡಮ್ಮಿ’ ಎಂಬ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಅವರು ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು.

‘ಈಶ್ವರಪ್ಪ ಅವರದ್ದು ಹುಸಿ ಬಂಡಾಯ. ಬಿಜೆಪಿಯಲ್ಲಿರುವ ನನ್ನ ಹಳೆಯ ಸ್ನೇಹಿತರು ಹೇಳುವಂತೆ, ಚುನಾವಣೆಯಲ್ಲಿ ಬಿ.ವೈ. ರಾಘವೇಂದ್ರ ಗೆಲ್ಲಿಸಲು ಯಡಿಯೂರಪ್ಪ- ಈಶ್ವರಪ್ಪ ನಡುವೆ ಒಳ ಒಪ್ಪಂದ ಆಗಿದೆ. ಅದರಂತೆ ಚುನಾವಣೆ ಮುಗಿದ ನಂತರ ಕೆ.ಎಸ್.ಈಶ್ವರಪ್ಪ ಯಾವುದಾದರೂ ರಾಜ್ಯದ ರಾಜ್ಯಪಾಲರಾಗಿ ನೇಮಕಗೊಳ್ಳಲಿದ್ದಾರೆ. ಅವರ ಪುತ್ರ ಕೆ.ಈ. ಕಾಂತೇಶ ಅವರನ್ನು ವಿಧಾನ ಪರಿಷತ್‌ಗೆ ನಾಮ ನಿರ್ದೇಶನ ಮಾಡಲಾಗುತ್ತದೆ ಎಂದರು.

‘ಈಶ್ವರಪ್ಪ ದೊಡ್ಡ ಕಲಾವಿದ. ನಾಲಿಗೆಗೆ ಬಣ್ಣ ಹಚ್ಚಿಕೊಂಡಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸುವಷ್ಟು ಧೈರ್ಯ ಅವರಿಗಿಲ್ಲ. ಯಡಿಯೂರಪ್ಪ, ಬಿಜೆಪಿಯವರ ಒತ್ತಾಸೆಯಿಂದ ಈ ಸಾಹಸಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್ ಪರವಾಗಿರುವ ಹಿಂದುಳಿದವರು, ದಲಿತರ ಮತಗಳನ್ನು ವಿಭಜಿಸುವ ತಂತ್ರ ಇದರಲ್ಲಿ ಅಡಗಿದೆ’ ಎಂದರು.

ಈಶ್ವರಪ್ಪ ಸ್ಪರ್ಧಿಸುವ ಬಗ್ಗೆ ನನಗೆ ಅನುಮಾನ ಇತ್ತು. ನಾಮಪತ್ರ ಹಿಂದಕ್ಕೆ ಪಡೆಯುವ ಕೊನೆಯ ದಿನದವರೆಗೂ ಅವರು ಕಣದಲ್ಲಿ ಇರುವ ಬಗ್ಗೆ ನಂಬಿಕೆ ಇಲ್ಲ. ಆದರೆ, ಈಗ ಸ್ಪರ್ಧಿಸಲೇಬೇಕಿದೆ. ಕಣದಿಂದ ಹಿಂದಕ್ಕೆ ಸರಿದರೆ ಶೇ 40 ಕಮಿಷನ್ ಹಗರಣದಲ್ಲಿ ಐಟಿ-ಇಡಿ ದಾಳಿಗೆ ಒಳಗಾಗಿ ಈಶ್ವರಪ್ಪ ಜೈಲಿಗೆ ಹೋಗಲಿದ್ದಾರೆ’ ಎಂದು ಅವರು ಹೇಳಿದರು.

‘ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ಅವರ ಸೋಲಿನ ಸೇಡಿಗೆ ಅವರ ಪುತ್ರಿ ಗೀತಾ ಶಿವರಾಜಕುಮಾರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಅವರನ್ನು ಮತದಾರರು ಬೆಂಬಲಿಸಲಿದ್ದಾರೆ. ಈಶ್ವರಪ್ಪ-ಬಿಜೆಪಿಯ ತಂತ್ರ ಫಲಿಸುವುದಿಲ್ಲ’ ಎಂದರು.

‘ಈಶ್ವರಪ್ಪ ಹೇಳುವಂತೆ ಗೀತಾ ಅಭ್ಯರ್ಥಿ ಆಗಿರುವುದರ ಹಿಂದೆ ಯಾವುದೇ ಒಳಒಪ್ಪಂದ ಇಲ್ಲ. ದಿಟ್ಟ ಹೋರಾಟಗಾರ ಬಂಗಾರಪ್ಪ ಅವರ ಮಕ್ಕಳು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ದುರ್ಬಲರಲ್ಲ. ಈಶ್ವರಪ್ಪ ಅವರೇ ಡಮ್ಮಿ’ ಎಂದು ಕಿಚಾಯಿಸಿದರು.

ಬಿ.ವೈ.ರಾಘವೇಂದ್ರ ಅವರನ್ನು ಲಿಂಗಾಯತರು ಬೆಂಬಲಿಸಬೇಕು ಎಂದು ಕೆಲವು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದು ಕಾಂಗ್ರೆಸ್‌ನ ಚುನಾವಣಾ ತಂತ್ರದ ಭಾಗ. ಇದರಿಂದ ಅಹಿಂದ ಮತಗಳು ಕಾಂಗ್ರೆಸ್‌ಗೆ ಹರಿದು ಬರಲಿವೆ. ಗೀತಾ ಶಿವರಾಜಕುಮಾರ್ ಗೆಲುವು ನಿಶ್ಚಿತ’ ಎಂದರು.

‘ಬಾಯಿ ಬಡುಕತನ ಬಿಟ್ಟರೆ ಹಿಂದುತ್ವಕ್ಕೆ ಈಶ್ವರಪ್ಪ ಕೊಡುಗೆ ಏನೂ ಇಲ್ಲ. ಹೆಚ್ಚೆಂದರೆ ಹೋಮ ಹವನ ಮಾಡಿರಬಹುದು. ಹಿಂದುತ್ವದ ಹೆಸರಿನಲ್ಲಿ ಮತ ಕೇಳುವುದೇ ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆ. ಅವರ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಲಿ’ ಎಂದು ಆಯನೂರು ಮಂಜುನಾಥ್ ಆಗ್ರಹಿಸಿದರು. ‘ಮಠಾಧೀಶರನ್ನು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿಸಿಕೊಳ್ಳುವುದು ಅಪರಾಧ. ಆ ಕೆಲಸವನ್ನು ಕೆ.ಎಸ್.ಈಶ್ವರಪ್ಪ ಬಿ.ವೈ.ರಾಘವೇಂದ್ರ ಮಾಡುತ್ತಿದ್ದಾರೆ. ಅದರಿಂದ ಸ್ವಾಮೀಜಿಗಳ ವಿರುದ್ಧವೂ ಚುನಾವಣಾ ಆಯೋಗ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ’ ಎಂದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…

2 hours ago

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ – ಪದಾಧಿಕಾರಿಗಳ ವಿವರ ಇಲ್ಲಿದೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…

10 hours ago

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

1 day ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

1 day ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

1 day ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

2 days ago