SSLC ಪರೀಕ್ಷೆ ಬರೆಯಲು ಪಿಕ್ಆಫ್ನಲ್ಲಿ ಬಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು
ರಿಪ್ಪನ್ಪೇಟೆ;-ಇಂದಿನಿಂದ ರಾಜ್ಯವ್ಯಾಪ್ತಿ ಅರಂಭಗೊಂಡ ಎಸ್.ಎಸ್.ಎಲ್.ಸಿ.ವಾರ್ಷೀಕ ಪಬ್ಲಿಕ್ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಪಿಕ್ಆಪ್ನಲ್ಲಿ ತುಂಬಿಕೊಂಡು ಬಂದಿದ್ದು ಸಾರ್ವಜನಿಕರ ಮತ್ತು ಪೋಷಕರ ಅಸಮದಾನಕ್ಕೆ ಕಾರಣವಾಗಿದೆ.
ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮತ್ತು ಪ್ರೌಢಶಾಲೆಯಲ್ಲಿ ಎರಡು ಪರೀಕ್ಷಾ ಕೇಂದ್ರಗಳಿದ್ದು ಈ ಪರೀಕ್ಷಾ ಕೇಂದ್ರದ ವ್ಯಾಪ್ತಿಗೆ ಆರಸಾಳು,ಬೆಳ್ಳೂರು, ಹೆದ್ದಾರಿಪುರ,ಅಮೃತ,ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆಗಳು ಒಳಪಡುತ್ತಿದ್ದು ಖಾಸಗಿ ಶಾಲೆಗಳಾದ ಶ್ರೀಬಸವೇಶ್ವರ,ಶಾರದಾ ರಾಮಕೃಷ್ಣ ಮೇರಿಮಾತಾ ಮಲೆನಾಡು ಪ್ರೌಢಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬರಬೇಕಾಗಿದ್ದು ಸರ್ಕಾರ ವಿಶೇಷವಾಗಿ ಎಸ್.ಎಸ್.ಎಲ್.ಸಿ.ವಾರ್ಷೀಕ ಪಬ್ಲಿಕ್ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ಬಸ್ ವ್ಯವಸ್ಥೆಯೊಂದಿಗೆ ಉಚಿತ ಬಸ್ ಸಂಚಾರ ಕಲ್ಪಿಸಲಾಗಿದ್ದರೂ ಕೂಡಾ ಹಿಂದುಳಿದ ಹೊಸನಗರ ತಾಲ್ಲೂಕಿನ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯದಿಂದ ವಂಚಿತಗೊಳಿಸಿದೆ ಎಂಬುದಕ್ಕೆ ಇಂದಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಪಿಕ್ಆಪ್ನಲ್ಲಿ ಬಂದಿರುವುದೇ ಸಾಕ್ಷಿಯಾಗಿದೆ.
ಪಿಕ್ ಅಫ್ನಲ್ಲಿ ಸುಮಾರು ಇಪ್ಪತ್ತರಿಂದ ಮೂವತ್ತು ವಿದ್ಯಾರ್ಥಿ ಗಳನ್ನು ತುಂಬಿಕೊಂಡು ಹೋಗುತ್ತಿದ್ದನ್ನು ಕಂಡ ತಕ್ಷಣ ಮಾಧ್ಯಮ ಪ್ರತಿನಿಧಿಯೊಬ್ಬರು ಇಲ್ಲಿನ ವಿನಾಯಕ ವೃತ್ತದಲ್ಲಿ ಮೊಬೈಲ್ನಲ್ಲಿ ಸೆರೆಹಿಡಿದು ಪೇಸ್ ಬುಕ್ಕಿಗೆ ಅಪ್ ಲೋಡ್ ಮಾಡಿ ಬಿಟ್ಟಿರುವುದು ಸಾಕಷ್ಟು ವೈರಲ್ ಅಗಿದೆ.ಅಕಸ್ಮಿಕವಾಗಿ ಏನಾದರೂ ಅವಘಡ ಸಂಭವಿಸಿದರೆ ಯಾರು ಹೊಣೆ ಎಂಬ ಚಿಂತೆ ಪೋಷಕರಲ್ಲಿ ಕಾಡುವಂತಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್