ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !
ತೀರ್ಥಹಳ್ಳಿ : ತಾಲ್ಲೂಕಿನ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ವಿರುದ್ಧ ಹೆಗ್ಗೋಡಿನಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದ 29 ನೇ ದಿನವನ್ನು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು.
ಕಾಮ ದಹನದ ಬದಲು “ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು” ಎಂದು ರೈತರು ಘೋಷಣೆ ಕೂಗುತ್ತಾ ಹುಲ್ಲಿನ ಗೊಂಬೆಯನ್ನು ದಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸೌಳಿ ನಾಗರಾಜ್ ಹಿಂದೆ ಪೆರಿಯಾರ್, ಅಂಬೇಡ್ಕರ್ ಮುಂತಾದ ಜನಪರ ನಾಯಕರು ಮನುಸ್ಮ್ರತಿಯಂತಹ ಜನವಿರೋಧಿ ಗ್ರಂಥಗಳನ್ನು ಸುಟ್ಟಿದ್ದರು. ಪೂರ್ಣ ಚಂದ್ರ ತೇಜಸ್ವಿ, ಪ್ರೊ. ಎಂ. ಡಿ. ನಂಜುಂಡಸ್ವಾಮಿ, ಎನ್. ಡಿ. ಸುಂದರೇಶ್, ಕಡಿದಾಳು ಶಾಮಣ್ಣರಂತಹ ಚಿಂತಕರು ಧಾನ್ಯ ಲೆವಿ ಕಾನೂನಿನ, ರೈತರ ಆಸ್ತಿ ಜಫ್ತಿ ಹರಾಜಿನ ನೋಟೀಸುಗಳನ್ನು ಸುಟ್ಟು ಹಾಕಿದ್ದರು.
ಮುಂದೆ ರೈತ ಸಂಘ ದೇಶದ ಜನವಿರೋಧಿ ರಾಜಕಾರಣವು ದೇಶವನ್ನು ಕಾರ್ಪೊರೇಟ್ ಬಂಡವಾಳಿಗರ ಕೈಗೆ ಒಪ್ಪಿಸುವುದನ್ನು ವಿರೋಧಿಸಿ ಹಲವು ಬಹುರಾಷ್ಟ್ರೀಯ ಕಂಪೆನಿಗಳ ಮೇಲೆ ಅಹಿಂಸಾತ್ಮಕ ದಾಳಿ ನಡೆಸಿ ಅವುಗಳ ದಾಖಲೆ ಪತ್ರಗಳನ್ನು ಬೆಂಕಿಗೆ ಎಸೆಯಲಾಯಿತು. ಈಗ ನಮ್ಮ ದೇಶದ ರಾಜಕಾರಣ ಪಕ್ಷಾತೀತವಾಗಿ ನೀರು, ನೆಲ, ಕೃಷಿಯನ್ನೂ ಬಿಡದೆ ಎಲ್ಲಾ ಕ್ಷೇತ್ರಗಳನ್ನೂ ಕಾರ್ಪೊರೇಟಿಕರಣ ಮಾಡುತ್ತಿದೆ. ಆದ್ದರಿಂದ ನಾವು ಈಗ ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕುವ ನಿಟ್ಟಿನಲ್ಲಿ ಸಾಂಕೇತಿಕವಾಗಿ ಈ ಹೋಳಿ ಹಬ್ಬದ ಸಂದರ್ಭವನ್ನು ಹೀಗೆ ಆಚರಿಸುತ್ತಿದ್ದೇವೆ ‘ ಎಂದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್