ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE
ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರುತಿದೆ, ರಾಜಕೀಯವಾಗಿ ಅಲ್ಲದೇ ಸಾಹಿತ್ಯ ,ಸಂಸ್ಕ್ರತಿಯ ಮತ್ತು ಶೈಕ್ಷಣಿಕವಾಗಿ ಸುಸಂಸ್ಕ್ರತರ ನೆಲೆಬೀಡು,ಪ್ರಜ್ಞಾವಂತರ ಜಿಲ್ಲೆ ಎಂದೆಲ್ಲಾ ಹೆಸರುಗಳಿಸಿದ ಶಿವಮೊಗ್ಗದಲ್ಲಿ ರಾಜಕೀಯ ಮುಖಂಡರ ಮಾತುಗಳು ಲಯ ತಪ್ಪುತ್ತಿವೆ.
ಚುನಾವಣೆಯಲ್ಲಿ ಬಿಜೆಪಿ ಬಂಡಾಯವಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಪರವಾಗಿ ಪ್ರಚಾರಕ್ಕೆ ತೆರಳಿದ್ದ ವ್ಯಕ್ತಿಗಳ ಮೇಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಕೆಎಸ್ ಈಶ್ವರಪ್ಪ ನವರ ಪರ ಪ್ರಚಾರಕ್ಕೆ ಬಂದವರನ್ನ ನಿಂಧಿಸಿ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಐಪಿಸಿ : IPC 1860 (U/s-504,506,323,34) ಅಡಿಯಲ್ಲಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕಳೆದ 20 ನೇ ತಾರೀಖು ಕಾಮಾಕ್ಷಿ ಬೀದಿಯಲ್ಲಿ ಈಶ್ವರಪ್ಪನವರ ಪರ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕಾಗಿ ಜನರನ್ನ ಸಂಘಟಿಸಬೇಕಿತ್ತು. ಈ ಜವಾಬ್ದಾರಿಯನ್ನ ಓರ್ವ ದಂಪತಿ ಹೊತ್ತಿದ್ದಾರೆ. ತಮ್ಮ ಜವಾಬ್ದಾರಿಯಂತೆ ಕಾಮಾಕ್ಷಿ ಬೀದಿಯಲ್ಲಿ ಜನರನ್ನ ಆಯೋಜಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಮನೆಮನೆಗೆ ತೆರಳಿ ಕಾರ್ಯಕ್ರಮಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಕೇರಿಯ ಮಹಿಳೆಯೊಬ್ಬರು ಆಕ್ಷೇಪ ಎತ್ತಿದ್ದಾರೆ. ನಮ್ಮ ಮನೆಯ ಬಳಿ ಬಂದು ಈಶ್ವರಪ್ಪನವರ ಪರ ಏಕೆ ಪ್ರಚಾರ ಮಾಡ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದೇ ವಿಚಾರಕ್ಕೆ ಜಗಳ ಆರಂಭವಾಗಿದೆ. ಜಗಳ ತಾರಕಕ್ಕೇರಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಹಲ್ಲೆ ಮಾಡಿ, ನಿಂದಿಸಿ, ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯ ಪ್ರಕರಣ ದಾಖಲಿಸಿರುವ ಪೊಲೀಸರು ಕೇಸ್ನ ತನಿಖೆ ನಡೆಸುತಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್