ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ್ | Election

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆ

ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ದೂರಿದರು.


ಶಿಕಾರಿಪುರ ತಾಲ್ಲೂಕಿನ ಬಗನಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಬ್ಬನ ಬೈರನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಪ್ರತಿ ವ್ಯಕ್ತಿಗೂ ಅಗತ್ಯ ಪ್ರಮಾಣದ ಆಹಾರ ದೊರೆಯಬೇಕು ಎಂದು 2013ರಲ್ಲಿ ಯುಪಿಎ ಸರ್ಕಾರವು ‘ಆಹಾರ ಭದ್ರತಾ ಕಾಯ್ದೆ’ಯನ್ನು ಜಾರಿಗೆ ತಂದಿತ್ತು. ದೇಶದ ಜನರಿಗೆ ಅಗತ್ಯವಿರುವಷ್ಟು ಆಹಾರ ಧಾನ್ಯಗಳನ್ನು ಖರೀದಿಸಿ, ಎಲ್ಲಾ ಕಾಲಕ್ಕೂ ಲಭ್ಯವಿರುವಂತೆ ನೋಡಿಕೊಳ್ಳುವ ಹೊಣೆ ಕೇಂದ್ರ ಸರ್ಕಾರದ್ದು ಮತ್ತು ಅರ್ಹರನ್ನು ಗುರುತಿಸಿ, ಅವರಿಗೆ ಪಡಿತರವನ್ನು ವಿತರಿಸುವ ಹೊಣೆ ರಾಜ್ಯ ಸರ್ಕಾರದ್ದು ಎಂದು ಈ ಕಾಯ್ದೆ ಹೇಳುತ್ತದೆ. ಇದಕ್ಕೆ ಬಿಜೆಪಿ ನಾಯಕರು ವಿರೋಧವೊಡ್ಡಿದರು ಎಂದರು.

ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಬುದ್ಧಿ ಕಲಿಸಬೇಕಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಹರಸಬೇಕು ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ,ರಾಜ್ಯದ ಪಂಚ ಗ್ಯಾರಂಟಿಯೊಂದಿಗೆ 25 ಭರವಸೆಗಳನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದರು.

ಇದರಲ್ಲಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳ ಮೀಸಲಾತಿಯನ್ನು ಶೇ 50ಕ್ಕೆ ಹೆಚ್ಚಿಸಲು ಕಾನೂನು ತಿದ್ದುಪಡಿ ತರಲಾಗುತ್ತದೆ. ಎಲ್ಲಾ ಜಾತಿ ಮತ್ತು ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ಒದಗಿಸಲಾಗುವುದು ಎಂದರು.

ಡಿಪ್ಲೊಮಾ ಅಥವಾ ಪದವಿ ಹೊಂದಿರುವ 25 ವರ್ಷದೊಳಗಿನವರಿಗೆ ಒಂದು ವರ್ಷದ ಅಪ್ರೆಂಟಿಶಿಪ್ ಒದಗಿಸಲು ಕಾಯ್ದೆ ಜಾರಿಗೊಳಿಸಲಾಗುವುದು. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಜಾರಿಗೊಳಿಸಲಾಗುವುದು ಎಂದರು.

ನಟ ಶಿವರಾಜಕುಮಾರ್ ಮಾತನಾಡಿ, ನಾವು ಮಾಡುವ ಕಾಯಕದಲ್ಲಿ ಸ್ಪಷ್ಟತೆ ಇರಬೇಕು. ಇದರಿಂದ, ಉತ್ತಮ ಫಲಿತಾಂಶ ಪಡೆಯಬಹುದು. ಇಲ್ಲಿ ಸಂಸದ ಸ್ಥಾನಕ್ಕೆ ಗೀತಾ ಅವರು ಸ್ಪರ್ಧಿಸಿದ್ದಾರೆ. ಗೀತಾ ಅವರು ಗೆದ್ದ ಬಳಿಕ ಆ ಸ್ಥಾನಕ್ಕೆ ಖಂಡಿತ ನ್ಯಾಯ ಒದಗಿಸಿಕೊಡುವರು ಎನ್ನುವ ನಂಬಿಕೆ ನನಗಿದೆ. ಆದ್ದರಿಂದ, ಈ ಚುನಾವಣೆಯಲ್ಲಿ ಮತ ನೀಡಿ ಅವಕಾಶ ಕಲ್ಪಿಸಿಕೊಡಬೇಕು ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ತಾಲ್ಲೂಕಿನ ಬೇಗೂರು, ಹೊಸೂರು, ಗೊಗ್ಗ, ಜಕ್ಕಿನ ಕೊಪ್ಪದ ಬಳ್ಳೂರು ವೃತ್ತ, ಕಾಗಿನೆಲ್ಲಿ- ಮಾರವಳ್ಳಿ, ಮುತ್ತಿನ ಕೋಟೆ,  ನೆಲವಾಗಿಲು-ಗೋದನಕೊಪ್ಪದ ಹೊಸ ಮುಗಳಗೆರೆ, ಅಂಬಾರ ಗಪ್ಪದ ತಮ್ಮಡಿ ಹಳ್ಳಿ, ಹಾರೋಗೊಪ್ಪ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ನಡೆಸಲಾಯಿತು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬಗನಗಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಭರ್ಮಜ್ಜ, ಕೆಪಿಸಿಸಿ ಸದಸ್ಯ ವೈ.ಎಚ್.ನಾಗರಾಜ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗೌಡ, ಗೋಣಿ ಮಾಲತೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳ ಶಿವರಾಂ, ಭಂಡಾರಿ ಮಾಲತೇಶ್, ರಾಘವೇಂದ್ರ ನಾಯ್ಕ್, ಶಿವುನಾಯ್ಕ್, ಕುಮಾರ್ ನಾಯ್ಕ್, ನಗರದ ಮಹದೇವಪ್ಪ, ಹುಸೇನ್ ಖಾನ್ ಸಾಬ್, ರಮೇಶಪ್ಪ ಮಾನಕ್ಕಿ, ಬಗನಕಟ್ಟೆ ಸುರೇಶ್ ಇದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

4 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

6 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

6 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

1 day ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

1 day ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

1 day ago