ಏಕಾಏಕಿ ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್ಪೇಟೆಯ ಪ್ರಭೀನ್ ಸಾವು | accident
ರಿಪ್ಪನ್ಪೇಟೆ : ಕಾಡು ಪ್ರಾಣಿ ಅಡ್ಡ ಬಂದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಜಿಪ್ಸಿ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಟ್ಟಣದ ಪ್ರಭೀನ್ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ರಿಪ್ಪನ್ಪೇಟೆ ಸಮೀಪದ ತಳಲೆ ಗ್ರಾಮದ ನಿವಾಸಿ ಪ್ರಬೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಪ್ರಭೀನ್ ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿದ್ದರು, ಪಟ್ಟಣದಲ್ಲಿ ಮೈಸ್ ಕಂಪ್ಯೂಟರ್ ತರಬೇತಿ ಕೇಂದ್ರವನ್ನು 2000ನೇ ಇಸವಿಯಲ್ಲಿ ಪ್ರಪ್ರಥಮವಾಗಿ ಪ್ರಾರಂಭಿಸಿದ್ದರು.
ಮೃತರಿಗೆ ತಾಯಿ, ಹೆಂಡತಿ ಹಾಗೂ ಮೂವರು ಮಕ್ಕಳು ಇದ್ದಾರೆ.
ಶಿವಮೊಗ್ಗದಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ ಜಿಪ್ಸಿ ಜೀಪು ಸೂಡೂರು ಗೇಟ್ ಹಾಗೂ 9ನೇ ಮೈಲಿಗಲ್ಲು ನಡುವಿನ ಶೆಟ್ಟಿಹಳ್ಳಿ ಅಭಯಾರಣ್ಯದ ರಾಜ್ಯ ಹೆದ್ದಾರಿಯಲ್ಲಿ ಏಕಾಏಕಿ ಕಾಡು ಪ್ರಾಣಿ ಅಡ್ಡ ಬಂದ ಹಿನ್ನೆಲೆ ಈ ಅವಘಡ ಸಂಭವಿಸಿತ್ತು, ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿ ಹೊಡೆದ ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದ ಹಿನ್ನಲೆಯಲ್ಲಿ ಮೃತದೇಹ ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು.
ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸಾಗರಕ್ಕೆ ರವಾನಿಸಲಾಗಿದ್ದು ವಿದೇಶದಲ್ಲಿರುವ ಸಂಬಧಿಕರು ಬರುವ ಹಿನ್ನಲೆಯಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್