ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು | Election

ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು

ಶಿವಮೊಗ್ಗದಲ್ಲಿ(Shivamogga) ಬಂಡಾಯದ ಬಿಸಿ ಬಿಸಿಲಿನಷ್ಟೇ ಹೆಚ್ಚಾಗುತ್ತಿದೆ. ಮಗನಿಗೆ ಬಿಜೆಪಿ ಟಿಕೆಟ್ ಕೊಡಿಸಲು ವಿಫಲರಾದ ಕೆಎಸ್ ಈಶ್ವರಪ್ಪ(Eshwarappa) ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಪ್ರಚಾರದ ವೇಳೆ ಪ್ರಧಾನಿ ಮೋದಿ(modi) ಅವರ ಫೋಟೋ ಬಳಸುವ ವಿಚಾರ ವಿವಾದಕ್ಕೀಡಾಗಿದ್ದು ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ.

ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಬಿಜೆಪಿ ಬಂಡಾಯ(rebel) ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ವಿಚಾರ ತಿಳಿದಿದೆ. ಆದರೆ ಪ್ರಚಾರದ ವೇಳೆ ಪ್ರಧಾನಿ ಮೋದಿ ಫೋಟೋ ಬಳಸಿದ್ದಾರೆನ್ನುವುದು ವಾಗ್ವಾದಕ್ಕೆ ಗುರಿಯಾಗಿದೆ. ಹೀಗಾಗಿ ಮೋದಿ ಫೋಟೋ ಬಳಕೆ ವಿಚಾರವಾಗಿ ಈಶ್ವರಪ್ಪ ಶಿವಮೊಗ್ಗ ಕೋರ್ಟ್ನಲ್ಲಿ ಕೆವಿಯಟ್ ಸಲ್ಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ(Raghavendra b y) ಪ್ರಚಾರದ ವೇಳೆ ಕೆ ಎಸ್‌ ಈಶ್ವರಪ್ಪ ಮೋದಿ ಫೋಟೋ ಬಳಿಸಿದ್ದಾರೆಂದು ಆಕ್ರೋಶಗೊಂಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಈಶ್ವರಪ್ಪ ಮೋದಿ ಅವರಪ್ಪನ ಆಸ್ತಿಯಾ ಎಂದು ಕೌಂಟರ್ ಕೊಟ್ಟಿದ್ದರು. ಈಗ ಫೋಟೋ ವಿಚಾರ ಕೋರ್ಟ್ ಮೆಟ್ಟಿಲೇರಿದೆ.

ಸಾಮಾನ್ಯವಾಗಿ ಬಂಡಾಯದ ಅಭ್ಯರ್ಥಿಗಳು ತಮ್ಮ ಹಳೆಯ ಪಕ್ದತ್ತ ತಲೆ ಹಾಕಿವುದಿಲ್ಲ. ಆ ಪಕ್ಷದ ವಿರುದ್ಧ ಮಾತನಾಡುವುದೇ ಹೆಚ್ಚು. ಆದರೆ ಕೆಎಸ್‌ ಈಶ್ವರಪ್ಪ ನಡೆ ಭಾರೀ ಕುತೂಹಲವನ್ನು ಹುಟ್ಟಿಸಿದೆ. ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಪ್ರಚಾರಕ್ಕೆ ಮೋದಿ ಪೋಟೋ ಬಳಸುತ್ತಿರುವುದು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಲೋಕಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಳಿದಿರುವ ಕೆಎಸ್ ಈಶ್ವರಪ್ಪ ಅವರ ಕೋಪ ತಣ್ಣಗಾಗಿಸಲು ಇತ್ತೀಚೆಗೆ ಬೆಂಗಳೂರಿಗೆ ಬಂದಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿದ್ದರು. ಆಗ ದೆಹಲಿಗೆ ಬರುವಂತೆ ತಿಳಿಸಿದ್ದರು. ಆದರೆ ದೆಹಲಿಗೆ ತೆರಳಿದರೂ ಭೇಟಿಗೆ ಅವಕಾಶ ಸಿಗದೆ ಕೆಎಸ್ ಈಶ್ವರಪ್ಪ ವಾಪಾಸ್ಸಾಗಿದ್ದರು.

ನಂತರ ಅವರು ಪಕ್ಷದ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಲು ಮುಂದಾದರು. ಈ ವೇಳೆ ಅವರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹೈಕಮಾಂಡ್ ನಾಯಕರ ಸಮ್ಮತಿ ಇರಬಹುದು. ಅವರಿಗೆ ನಾನು ಸ್ಪರ್ಧಿಸುವುದು ಮನಸ್ಸಿರಬಹುದು ಎಂದು ಹೇಳಿದ್ದರು. ಬಂಡಾಯದ ಅಭ್ಯರ್ಥಿಗಳು ಮೋದಿ ಫೋಟೋ ಹಿಡಿದುಕೊಂಡು ಪ್ರಚಾಋ ನಡೆಸಿರುವುದು ಇದೇ ಮೊದಲಲ್ಲ.

ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲೂ ಮೋದಿ ಫೋಟೋ ಬಳಸಿ ಬಂಡಾಯ ಅಭ್ಯರ್ಥಿ ಪ್ರಚಾರ ಮಾಡಿದ್ದರು. ಪಕ್ಷದ ನಾಯಕರ ವಿರೋಧದ ನಡುವೆಯೂ ಅವರು ಪ್ರಚಾರದಲ್ಲಿ ಮೋದಿ ಹೆಸರು ಬಳಸಿಕೊಂಡಿದ್ದಲ್ಲದೆ ಚುನಾವಣೆಯಲ್ಲಿ ಅತ್ಯತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಬಳಿಕ ಅವರು ಪಕ್ಷಕ್ಕೂ ಸೇರಿಕೊಂಡರು. ಆದರೀಗ ಕೆಎಸ್ ಈಶ್ವರಪ್ಪ ವಿಚಾರಕ್ಕೂ ಇದೇ ಬೆಳವಣಿಗೆಗಳನ್ನು ಮುಂದಿನ ದಿನಗಳಲ್ಲಿ ನಿರೀಕ್ಷೆ ಮಾಡಬಹುದು ಎಂಬ ಮಾತುಗಳು ಕೇಳಿ ಬಂದಿವೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

2 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago