ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident
ಭದ್ರಾ ಚಾನಲ್ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕುಂದಾಪುರದಿಂದ ಹೊಳೆಹೊನ್ನೂರಿನ ನೆಂಟರ ಮನೆಗೆ ಬಂದಾಗ ಈ ಅವಘಡ ಸಂಭವಿಸಿದೆ.
ಹೊಳೆಹೊನ್ನೂರು ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್ ನಲ್ಲಿ ಘಟನೆ ಸಂಭವಿಸಿದ್ದು ಮೃತರನ್ನು ರಜತ್(10) ಹಾಗೂ ರೋಹನ್(15) ಎಂದು ಗುರುತಿಸಲಾಗಿದೆ. ಬಾಲಕರಿಬ್ಬರು ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದರು. ನಿನ್ನೆ ಸಂಜೆ ಇಬ್ಬರು ಭದ್ರಾ ಚಾನಲ್ ಏರಿ ಮೇಲೆ ಬಂದಾಗ ಇಬ್ಬರು ಬಾಲಕರ ಪೈಕಿ ಚಿಕ್ಕವನು ನೀರಿಗಿಳಿದಿದ್ದಾನೆ. ಆದರೆ ನೀರಿನ ಸೆಲೆಯಲ್ಲಿ ಆತ ಈಜಲಾಗದೇ ಮುಳಗಲು ಆರಂಭಿಸಿದ್ದಾನೆ. ಆತನನ್ನು ರಕ್ಷಿಸಲು ಇನ್ನೊಬ್ಬನು ನೀರಿಗಿಳಿದಿದ್ದು, ಆತನೂ ಸಹ ಚಾನಲ್ನಲ್ಲಿ ಮುಳುಗಿದ್ದಾನೆ.
ವಿಷಯ ತಿಳಿಯುತ್ತಲೇ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಟ್ಟೆ ಮಾತ್ರ ಪತ್ತೆಯಾಗಿದ್ದರಿಂದ ಪ್ರಕರಣ ಅನುಮಾನ ಸಹ ಮೂಡಿಸಿತ್ತು. ಆನಂತರ ರಾತ್ರಿ 9.30 ರ ಸುಮಾರಿಗೆ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶವ ಮಹಜರ್ ನಡೆಸಿ ಪೋಷಕರಿಗೆ ಬಾಲಕರ ಮೃತದೇಹವನ್ನು ಒಪ್ಪಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್