ನಮ್ಮೂರು ನಮ್ಮ ಕೆರೆ ಅಭಿಯಾನದ ಅಡಿಯಲ್ಲಿ ತಳಲೆ ತಲೆಕಟ್ಟಿನ ಕೆರೆಗೆ ಮರುಜೀವ | ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಬ್ದಾರಿ – ಗಣಪತಿ ಭಟ್ | Lake development

ನಮ್ಮೂರು ನಮ್ಮ ಕೆರೆ ಅಭಿಯಾನದ ಅಡಿಯಲ್ಲಿ ತಳಲೆ ತಲೆಕಟ್ಟಿನ ಕೆರೆಗೆ ಮರುಜೀವ | ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಬ್ದಾರಿ – ಗಣಪತಿ ಭಟ್


ರಿಪ್ಪನ್‌ಪೇಟೆ : ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಾಬ್ದಾರಿ, ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಅಭಿಯಂತರರಾದ ಗಣಪತಿ ರವರು ಹೇಳಿದರು.


ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ತಲೆಕಟ್ಟಿನ ಕೆರೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿಯಲ್ಲಿ “ನಮ್ಮೂರು ನಮ್ಮ ಕೆರೆ” ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ವೀರೇಂದ್ರ ಹೆಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರು ಕೆರೆ ಸಂರಕ್ಷಣೆಯ ಮೂಲಕ ರಾಜ್ಯದಲ್ಲಿ ಈಗಾಗಲೇ 560 ಕೆರೆಗಳ ಕಾಮಗಾರಿ ನೆರವೇರಿಸಿದ್ದಾರೆ. ಇದು ಅವರ ರಾಜ್ಯದಲ್ಲಿ ಕೆರೆಗಳ ಸಂರಕ್ಷಣೆಗೆ ಆದ್ಯತೆ ನೀಡಿದ ಕಾರ್ಯಕ್ರಮವಾಗಿದೆ.


ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಕೆರೆಗಳಿವೆ. ಆದರೆ, ಅವುಗಳಲ್ಲಿ ಬಹುತೇಕ ಕೆರೆಗಳು ಹೂಳು ಮತ್ತು ಒತ್ತುವರಿಯ ಕಾರಣ ಹಾಳಾಗಿವೆ. ಧರ್ಮಸ್ಥಳ ಸಂಸ್ಥೆಯು ರಾಜ್ಯದಲ್ಲಿ ಒಟ್ಟು 367 ಕೆರೆಗಳನ್ನು ಪುನಶ್ಚೇತನಗೊಳಿಸಿದ ನಂತರ, ಅಂತರ್ಜಲ ಮಟ್ಟ ಹೆಚ್ಚಾಗಿದೆಯಲ್ಲದೆ, ಕೆರೆ ಒತ್ತುವರಿ ಪ್ರಕರಣಗಳು ಬಹಳಷ್ಟು ತಗ್ಗಿವೆ.

‘ನೀರಾವರಿ ಕೆರೆಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬರುತ್ತದೆ. ಆದರೆ, ಊರಿನ ಕೆರೆಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುತ್ತಿದೆ. ಪಂಚಾಯಿತಿಯಲ್ಲಿ ಸಾಕಷ್ಟು ಅನುದಾನವಿರದಿದ್ದರೆ ಇಂತಹ ಕೆರೆಗಳ ಅಭಿವೃದ್ಧಿ ಆಗುವುದೇ ಇಲ್ಲ. ಈ ಕಾರಣ, ಗ್ರಾಮ ಪಂಚಾಯಿತಿಗಳ ಜೊತೆಗೆ ಕೈಜೋಡಿಸಿರುವ ನಾವು ಊರ ಕೆರೆಗಳನ್ನು ಪುನಶ್ಚೇತನಗೊಳಿಸುತ್ತಿದ್ದೇವೆ’ ಎಂದು ತಿಳಿಸಿದರು.


‘ಕೆರೆಗಳ ಹೂಳು ಎತ್ತುವ ಕಾರ್ಯವನ್ನು ಧರ್ಮಸ್ಥಳ ಸಂಸ್ಥೆ ಮಾಡಿದರೆ, ಅದನ್ನು ಸಾಗಿಸುವ ಕೆಲಸವನ್ನು ಆಯಾ ಗ್ರಾಮ ಪಂಚಾಯಿತಿಗಳು ಮಾಡುತ್ತಿವೆ. ಧರ್ಮಸ್ಥಳ ಸಂಸ್ಥೆ, ಸ್ಥಳೀಯರ ನೆರವಿನಿಂದ ಸಣ್ಣ ಕೆರೆಗಳನ್ನು, ಸರ್ಕಾರದ ಸಹಭಾಗಿತ್ವದೊಂದಿಗೆ ಕೆರೆ ಸಂಜೀವಿನಿ ಯೋಜನೆಯಡಿ ದೊಡ್ಡ ಕೆರೆಗಳನ್ನು ಪುನಶ್ಚೇತನಗೊಳಿಸುತ್ತಿದೆ’ ಎಂದರು.

ಕೆರೆ ಸಮಿತಿ ಅಧ್ಯಕ್ಷ ಕಗ್ಗಲಿ ಲಿಂಗಪ್ಪ ಮಾತನಾಡಿ  ಕೆರೆಕಟ್ಟೆಗಳು ನಾಡಿನ ಜೀವನಾಡಿ. ರೈತಾಪಿ ಜನರ ಉಸಿರು. ಇವನ್ನು ಈಗಂತೂ ನಿರ್ಮಿಸಲು ಆಗದು. ಹಾಗಾಗಿ ಇರುವುದನ್ನು ಉಳಿಸಿಕೊಳ್ಳಲೇಬೇಕು. ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಕೆರೆಯ ಹೂಳೆತ್ತಿ ಅವುಗಳಿಗೆ ಮರುಜೀವ ನೀಡಿ ಊರಿನವರಿಗೆ ವರ್ಗಾಯಿಸುವ ಮೂಲಕ ಕೆರೆಯ ಮಹತ್ವ, ಅಗತ್ಯತೆ, ಕೆರೆ ಸಂರಕ್ಷಣೆಯ ಕುರಿತ ಜಾಗೃತಿಯನ್ನು ಮೂಡಿಸುವ ಅಪೂರ್ವ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದರು.

ಈ ಸಂಧರ್ಭದಲ್ಲಿ ತಾಪಂ ಮಾಜಿ ಸದಸ್ಯೆ ಗೌರಮ್ಮ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಅಧಿಕಾರಿ ಶಶಿಧರ್ ,ರಂಜಿತ್ ಕುಮಾರ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

40 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago