ಪಾನಕ ಹಂಚುವಾಗ ಯುವಕನಿಗೆ ಚಾಕು ಇರಿತ ಪ್ರಕರಣ – ಗಾಯಾಳುವಿನ ಆರೋಗ್ಯ ವಿಚಾರಿಸಿದ ಕೆ ಎಸ್ ಈಶ್ವರಪ್ಪ | Crime News
ಚನ್ನಗಿರಿಯ ನಲ್ಲೂರಿನಲ್ಲಿ ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಗ್ಗಾನ್ ಗೆ ದಾಖಲಾಗಿದ್ದು, ಚಾಕು ಇರಿತಕ್ಕೆ ಒಳಗಾದ ಗೋಪಿ ಎಂಬಾತನ ಆರೋಗ್ಯವನ್ನ ವಿಚಾರಿಸಲು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪನವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ನಂತರ ಮಾದ್ಯಮಗಳಿಗೆ ಮಾತನಾಡಿ ರಾಮನವಮಿ ದಿನ ಕೋಸಂಬರಿ ಪಾನಕ ಹಂಚುವ ಸಂದರ್ಭದಲ್ಲಿ ಐದು ಜನ ಅನ್ಯಕೋಮಿನ ಯುವಕರು ಬಂದು ಚಾಕು ಇರಿದಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಗಮನವೇ ಹರಿಸುತ್ತಿಲ್ಲ ಎಂದು ಈಶ್ವರಪ್ಪ ಆರೋಪಿಸಿದರು.
ಹಿಂದೂಗಳ ರಕ್ಷಣಯೇ ಇಲ್ಲದಂತಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ನೇಹ ಹತ್ಯೆ ಪ್ರಕರಣಗಳು ನಡೆದಿದೆ. ರಾಜ್ಯದ ಮುಖ್ಯಮಂತ್ರಿಗಳು ಮತ್ತು ಗೃಹಮಂತ್ರಿಗಳು ಲವ್ ಜಿಹಾದ್ ಅಲ್ಲ. ಇದು ವೈಯುಕ್ತಿ ಎಂದು ಹೇಳುತ್ತಿದ್ದಾರೆ. ಇದು ಮುಸ್ಲೀಂ ಗೂಂಡಾಗಳಿಗೆ ಕುಮ್ಮಕ್ಕು ನೀಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ಇಂತಹ ಹೇಳಿಕೆ ನೀಡುವುದನ್ನ ರಾಜ್ಯ ಸರ್ಕಾರ ನಿಲ್ಲಿಸಬೇಕು. ತಕ್ಷಣವೇ ಚಾಕು ಇರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಾಗಬೇಕು ಎಂದು ಆಗ್ರಹಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್