ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ | Bankapura

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ

ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ  ಡಾ || ಬಿ ಆರ್ ಅಂಬೇಡ್ಕರರವರ 134ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮಾದ್ಯಮದವರೊಂದಿಗೆ ಮಾತನಾಡಿದ ಅವರು ದಿನಾಂಕ  14-04-2024 ನೇ ರವಿವಾರ ಸಮಯ ಬೆಳಿಗ್ಗೆ 11 ಗಂಟೆಗೆ ಸ್ಥಳ : ಡಾ || ಬಿ ಆರ್ ಅಂಬೇಡ್ಕರ ನಗರ ಹರಿಜನಕೆರಿ ಬಂಕಾಪುರ ದಲ್ಲಿ ಕಾರ್ಯಕ್ರಮ ನಡೆಯಲಿದೆ


ಈ ಕಾರ್ಯಕ್ರಮಕ್ಕೆ ಸರ್ವರಿಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ರಿ )(ಡಿ. ಎಸ್. ಎಸ್ ) ಜಿಲ್ಲಾ ಸಮಿತಿ ಕಾರ್ಯಾಧ್ಯಕ್ಷರಾದ  ಬಸವರಾಜ  ಕಟ್ಟಿಮನಿ ಹಾಗೂ ಮಾಜಿ ಪುರಸಭೆ ಅಧ್ಯಕ್ಷರಾದ ಮುಕ್ತಾ ಬಸವರಾಜ ಕಟ್ಟಿಮನಿ ಆತ್ಮೀಯವಾಗಿ ಸ್ವಾಗತ ಕೋರುತಿದ್ದಾರೆ.

ಪ್ರತಿವರ್ಷ ಏಪ್ರಿಲ್‌ 14 ರಂದು ಭಾರತ ದೇಶದಾದ್ಯಂತ ಅಂಬೇಡ್ಕರ್‌ ಜಯಂತಿ ಅಥವಾ ಭೀಮ್‌ ಜಯಂತಿಯನ್ನು ಆಚರಿಸಲಾಗುತ್ತದೆ. ಇದು ನಮ್ಮ ದೇಶದ ಸಂವಿಧಾನ ಶಿಲ್ಪಿ ಎಂದೇ ಖ್ಯಾತಿಯಾಗಿರುವ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಜನ್ಮದಿನವಾಗಿದೆ. ವಿಶ್ವದರ್ಜೆಯ ವಕೀಲರು, ಸಮಾಜ ಸುಧಾಕರರೂ ಆಗಿದ್ದ ಅಂಬೇಡ್ಕರ್‌ ಅವರು ಭಾರತದ ದಲಿತ ಚಳವಳಿಗಳ ಹಿಂದಿನ ಮಹಾನ್‌ ಶಕ್ತಿ ಎಂದರೂ ತಪ್ಪಾಗಲಿಕ್ಕಿಲ್ಲ. ಶಿಕ್ಷಣ, ಸಮಾನತೆ, ಅರ್ಥಶಾಸ್ತ್ರಕ್ಕೆ ಇವರು ನೀಡಿದ ಕೊಡುಗೆಗಳು ಅಪಾರ.

1891ರಲ್ಲಿ ಜನಿಸಿದ ಅಂಬೇಡ್ಕರ್‌ ಅವರು ಭಾರತ ಸಂವಿಧಾನದ ಪ್ರಧಾನ ಶಿಲ್ಪಿ ಮಾತ್ರವಲ್ಲ, ಸ್ವತಂತ್ರ ಭಾರತದ ಮೊದಲ ಕಾನೂನು ಮಂತ್ರಿ, ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ ಮತ್ತು ಸಮಾಜ ಸುಧಾರಕರೂ ಆಗಿದ್ದರು.

ಅವರು ಅಸ್ಪೃಶ್ಯರ ವಿರುದ್ಧದ ತಾರತಮ್ಯವನ್ನು ತೊಡೆದು ಹಾಕಲು ಮತ್ತು ಮಹಿಳೆಯರು ಹಾಗೂ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅದ್ದರಿಂದ ಅವರ ಜನ್ಮ ವಾರ್ಷಿಕೋತ್ಸವವನ್ನು ಸಮಾನತೆಯ ದಿನ ಎಂದೂ ಕರೆಯಲಾಗುತ್ತದೆ.

ಅಂಬೇಡ್ಕರ್‌ ಅವರು ಕಾನೂನಿನ ದೃಷ್ಟಿಯಲ್ಲಿ ಎಲ್ಲಾ ನಾಗರಿಕರು ಸಮಾನರು, ಎಲ್ಲರಿಗೂ ಸಮಾನ ನ್ಯಾಯ ದೊರಕಬೇಕು ಎಂಬುದನ್ನು ತಮ್ಮ ಜೀವಮಾನವಿಡಿ ಪ್ರತಿಪಾದಿಸಿದರು. ಈ ವರ್ಷ ಬಾಬ್‌ ಸಾಹೇಬ್‌ ಅಂಬೇಡ್ಕರ್‌ ಅವರ 134ನೇ ಜನ್ಮದಿನವಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

7 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

13 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

2 days ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

2 days ago