ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ | Social Issues

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ

ಗದಗ-ಬಂಕಾಪುರ-ಹಾವೇರಿ ಮಾರ್ಗದ ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಇಲ್ಲದೆ, ಒಂದೇ ಬಸ್ ನಲ್ಲಿ ನೂರಾರು ಪ್ರಯಾಣಿಕರು ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ.


ದಿನನಿತ್ಯ ವಿದ್ಯಾರ್ಥಿಗಳು, ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಬಂಕಾಪುರ ಪಟ್ಟಣದ ಸುತ್ತಮುತ್ತಲಿನ ಗ್ರಾಮದ ನೂರಾರು ಪ್ರಯಾಣಿಕರು ಕೆಲಸಕ್ಕಾಗಿ ಹಾಗೂ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಹಾವೇರಿ ನಗರಕ್ಕೆ ಪ್ರಯಾಣ ಮಾಡುತ್ತಾರೆ.

ವೀಡಿಯೋ ಇಲ್ಲಿ ವೀಕ್ಷಿಸಿ👇


ಬೆಳಗಿನ ಜಾವದಿಂದಲೂ  ನಿಲ್ದಾಣದಲ್ಲಿ ಬಸ್ ಗಾಗಿ  ವಿದ್ಯಾರ್ಥಿಗಳು ಕಾದು ಕುಳಿತಿರುತ್ತಾರೆ. ಗದಗ, ಸವಣೂರು, ಹಾವೇರಿ ಡಿಪೋ ವಾಹನಗಳು ಸರಿಯಾದ ಸಮಯಕ್ಕೆ ಬಾರದೆ ಇರೋದಕ್ಕೆ ಹಾಗೂ ಬಸ್ಸಿನ ಸಂಖ್ಯೆ ಕಡಿಮೆಯಾದ ಕಾರಣ ಪ್ರಯಾಣಿಕರು ಅನಿವಾರ್ಯವಾಗಿ ಪ್ರತಿದಿನ ಬಸ್​ ಬಾಗಿಲಲ್ಲಿ ನೇತಾಡುತ್ತ ಸಂಚಾರ ಮಾಡುತ್ತಿದ್ದಾರೆ.


ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಕಾಲೇಜಿಗೆ, ಪ್ರಯಾಣಿಕರು ಕೆಲಸಕ್ಕೆ ತಲುಪಬೇಕೆಂದು ದಿನಂಪ್ರತಿ ಬೆಳಗಿನ ಉಪಹಾರವನ್ನು ಸೇವಿಸದೆ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾದು ಕುಳಿತಿರುತ್ತಾರೆ. ಆದರೆ ಬಸ್ ಇಲ್ಲದೆ ನಿಲ್ದಾಣದಲ್ಲಿ ಗಂಟೆ ಗಂಟಲೇ ಕಾದು ಕುಳಿದುಕೊಳ್ಳುವಂತಾಗಿದೆ ಎಂದು ಪ್ರಯಾಣಿಕರು ಅಳಲು ತೊಡಿಕೊಂಡಿದ್ದಾರೆ.

ಹಲವು ಬಾರಿ ಅವಘಡ :

ಬಸ್ ನಿಲ್ದಾಣದಲ್ಲಿ ಬಾಗಿಲಿನಲ್ಲಿ ಜೋತು ಬಿದ್ದು ಪ್ರಯಾಣ ಮಾಡುತ್ತಿರುವ ಸಂದರ್ಭದಲ್ಲಿ ಆಯತಪ್ಪಿ ನೆಲಕ್ಕೆ ಬಿದ್ದಿರುವ ಉದಾಹರಣೆಗಳಿವೆ. ಪ್ರಯಾಣಿಕರಿಗೆ ವಿದ್ಯಾರ್ಥಿಗಳಿಗೆ ಪ್ರಯಾಣದ ಸಂದರ್ಭದಲ್ಲಿ ಏನಾದ್ರು ಅವಘಡ ಸಂಭವಿಸಿದೆ ಹೊಣೆ ಯಾರು ? ಎಂದು ಪ್ರಯಾಣಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

ಕೋವಿಡ್ ಗಿಂತ ಮೊದಲು ಬಸ್ ವ್ಯವಸ್ಥೆ ಸರಿಯಾಗಿ ಇತ್ತು. ಆದರೆ ಕೋವಿಡ್ ನಂತರದಲ್ಲಿ ಬಸ್ ಸರಿಯಾಗಿ ಬರುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು, ಪ್ರಯಾಣಿಕರು ಬರುವ ಬಸ್ ಗಳಲ್ಲಿ ಅನಿವಾರ್ಯವಾಗಿ ಬಾಗಿಲಿನಲ್ಲಿ ಜೋತು ಬಿದ್ದು ಪ್ರಯಾಣ ಮಾಡುವಂತಾಗಿದೆ.

ಒಟ್ಟಿನಲ್ಲಿ ಪ್ರಯಾಣಿಕರು ವಿದ್ಯಾರ್ಥಿಗಳು ಬಸ್ ಅವ್ಯವಸ್ಥೆಯಿಂದ ನರಕಯಾತನೆ ಅನುಭವಿಸುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಆದಷ್ಟು ಬೇಗ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲಿದ್ದಾರಾ ? ಎಂಬುವುದನ್ನು ಕಾದು ನೋಡಬೇಕಾಗಿದೆ.

ಈಗಾಗಲೇ  ಸಂಬಂಧ ಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಬಸ್ ವ್ಯವಸ್ಥೆಗಾಗಿ ಆಗ್ರಹ ಮಾಡಲಾಗಿದೆ. ಆದರೆ ಅಧಿಕಾರಿಗಳು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಆದಷ್ಟು ಬೇಗ ಸಂಬಂಧ ಪಟ್ಟ ಅಧಿಕಾರಿಗಳು ಬೆಳಗಿನ ಜಾವ  ಹಾಗೂ ಸಂಜೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಬೇಕು ಎಂಬುವುದು ನಮ್ಮ ಒತ್ತಾಯವಾಗಿದೆ

ದೀಪಕ ಮಡ್ಲಿ ,ಪ್ರಯಾಣಿಕರು


– ವರದಿ ನಿಂಗರಾಜ್ ಕೂಡಲ
ಹಾವೇರಿ ಜಿಲ್ಲೆ ( ಬಂಕಾಪುರ್ )
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai…

12 hours ago

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago