ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್


ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು.

ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ ಸಂಸತ್ ಸದಸ್ಯರಾಗಿವ್ ಆಯ್ಕೆಯಾಗಿರುವ ಬಿ ವೈ ರಾಘವೇಂದ್ರ ಜನಮೆಚ್ಚುವ ಆಭಿವೃದ್ದಿ ಕೆಲಸಗಳನ್ನು ನಡೆಸುತಿದ್ದಾರೆ. ಕೆ ಎಸ್ ಈಶ್ವರಪ್ಪ ರವರು ಬಿಜೆಪಿ ಪಕ್ಷದಿಂದ ರಾಜ್ಯದ ಉಪ ಮುಖ್ಯಮಂತ್ರಿ ,ರಾಜ್ಯಾಧ್ಯಕ್ಷ ,ಸಚಿವ ಸ್ಥಾನ ಸೇರಿದಂತೆ ಎಲ್ಲಾವನ್ನು ಪಡೆದು ಈಗ ಪಕ್ಷದ ನಿಲುವಿನ ವಿರುದ್ದ ನಡೆಸುತ್ತಿರುವ ಚಟುವಟಿಕೆಗಳು ಅವರಿಗೆ ಶ್ರೇಯ ತರುವುದಿಲ್ಲ ಎಂದರು.

ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿರುವ ಬಗ್ಗೆ ಅವರಿಗೆ ಅಸಮಾಧಾನವಿದ್ದರೆ ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ದ ಬಂಡಾಯ ಸ್ಪರ್ಧಿಸಲಿ ಅದನ್ನು ಬಿಟ್ಟು ಜನ ಮೆಚ್ಚಿದ ಸಂಸದ ಬಿ ವೈ ರಾಘವೇಂದ್ರ ವಿರುದ್ದ ಸ್ಪರ್ಧಿಸಿರುವುದು ಅವರಿಗೆ ಶೋಭೆ ತರುವುದಿಲ್ಲಾ ,ಒಂದು ವೇಳೆ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರೆ ಶಿವಮೊಗ್ಗದ ಗುಂಡಪ್ಪ ಶೆಡ್ ನಲ್ಲಿರುವ ಅವರ ಮನೆ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಹೇಳಿದರು.

ಸಮಾವೇಶದಲ್ಲಿ ಸಂಸದ ಬಿ ವೈ ರಾಘವೇಂದ್ರ , ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ, ಮಹಿಳಾ ಅಧ್ಯಕ್ಷೆ ಆಶಾ ರವೀಂದ್ರ, ಮುಖಂಡರಾದ ವೀಣಾಶೆಟ್ಟಿ, ಜೆಡಿಎಸ್ ಮುಖಂಡರಾದ ಆರ್.ಎ.ಚಾಬುಸಾಬ್, ಎನ್ ವರ್ತೇಶ್, ಜಿ.ಎಸ್.ವರದರಾಜ್, ಜಿ.ಪಂ.ಮಾಜಿ ಸದಸ್ಯೆ ಎ.ಟಿ.ನಾಗರತ್ನ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ನಾಗರತ್ನ ದೇವರಾಜ್, ಸರಸ್ವತಿ, ಲೀಲಾ ಉಮಾಶಂಕರ್, ರೇಖಾ ರವಿ, ಪದ್ಮಾ ಸುರೇಶ್, ಗಣಪತಿ ಬಿಳಗೋಡು ಇನ್ನಿತರರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

5 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

6 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

6 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago