ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE
ಶಿವಮೊಗ್ಗ : ನಾಳೆ ಬೆಳಗ್ಗೆ ರಾಜ್ಯಾಧ್ಯಕ್ಷರನ್ನ ಬದಲಿಸಿದರೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ. ಈಶ್ವರಪ್ಪ ಸ್ಪರ್ಧೆಯಿಂದ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದದರೆ ನಾನು ಸ್ಪರ್ಧಿಸಿ ಏನು ಮಾಡಲಿ ಎಂದು ಕೆ ಎಸ್ ಈಶ್ವರಪ್ಪ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿದ ಅವರು ಅಮಿತ್ ಶಾ ಕರೆ ಮಾಡಿದ್ರು. ಅವರಿಗೆ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಕಾಂಗ್ರೆಸ್ ಸಂಸ್ಕೃತಿ ಬಿಜೆಪಿಯಲ್ಲಿ ಬೆಳೆಯುತ್ತಿದೆ. ಅಪ್ಪಮಕ್ಕಳ ಕೈಯಲ್ಲಿರುವ ಪಕ್ಷವನ್ನ ಮುಕ್ತಿಗೋಳಿಸಬೇಕಿದೆ ಎಂದು ಹೇಳಿದ್ದೇನೆ.
ಹಿಂದುತ್ವದ ಪರವಾಗಿ ನಾನು ಸ್ಪರ್ಧಿಸುತ್ತಿರುವುದಾಗಿ ಹಾಗೂ ಪ್ರತಾಪ್ ಸಿಂಹ, ಸಿ.ಟಿ ರವಿ, ಸದಾನಂದಗೌಡ ಪರವಾಗಿ, ಈ ಚುನಾವಣೆಯಲ್ಲಿ ಹಿಂದುಳಿದವರಿಗೆ ಟಿಕೆಟ್ ನೀಡಿಲ್ಲ. ಹಾಗಾಗಿ ಸ್ಪರ್ಧಿಸುತ್ತಿರುವುದಾಗಿ ಅಮಿತ್ ಶಾಗೆ ಹೇಳಿರುವೆ ಎಂದರು.
ಅಮಿತ್ ಶಾ ಸ್ಪರ್ಧೆ ಬೇಡ ಎಂದಿದ್ದಾರೆ. ದೆಹಲಿಗೆ ಕರೆದಿದ್ದಾರೆ. ಅವರಿಗೆ ನಾನು ಸ್ಪರ್ಧಿಸುವುದರಿಂದ ಪಕ್ಷದಲ್ಲಿ ಶುದ್ಧೀಕರಣ ಮಾಡುವುದಾಗಿ ತಿಳಿಸಿರುವೆ. ದೊಡ್ಡವರ ಮಾತನ್ನ ನಾನು ಮೀರುವುದಿಲ್ಲ. ದೆಹಲಿಗೆ ಬಂದ ನಂತರ ಸ್ಪರ್ಧೆ ಬೇಡ ಎನ್ನುವ ಹಾಗಿಲ್ಲ ಎಂದು ತಿಳಿಸಿದ್ದೇನೆ. ಸೂಚನೆ ಅಲ್ಲ ಪ್ರಾರ್ಥಿಸುವುದಾಗಿ ಶಾ ಹೇಳಿದರು, ನೀವು ದೊಡ್ಡವರು ನಾನು ನಿಮ್ಮ ಜೊತೆ ವಾದಿಸೊದಿಲ್ಲ ಎಂದು ಹೇಳಿರುವುದಾಗಿ ತಿಳಿಸಿದರು.
ನಾಳೆ ಹೋಗಿ ನಾಳೆ ಸಂಜೆ ಅಮಿತ್ ಶಾರನ್ನ ಭೇಟಿ ಮಡುವುದಾಗಿ ಹೇಳಿದ ಈಶ್ವರಪ್ಪ ಅಮಿತ್ ಶಾರನ್ನೇ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಒಪ್ಪಿಸಿ ಬರುವುದಾಗಿ ತಿಳಿಸಿದ್ದಾರೆ.
ಬಿಎಸ್ ವೈ ಹತ್ತಿರ ಹೋಗ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ ರಂಗಣ್ಣನ ಹತ್ತಿರನೇ ಹೋಗುತ್ತಿರುವೆ ಸಿಂಗಣ್ಣನ ಜೊತೆ ನನಗೆ ಕೆಲಸವೇನು? ಬಿಎಸ್ ವೈ ನಂಬಿಕೆಗೆ ಅರ್ಹರಲ್ಲ. ನಾನು ಹಿತೈಷಿಗಳ ಕಾರ್ಯಕರ್ತರ ಮಾತುಗಳನ್ನ ಕೇಳಿರುವೆ. ಸ್ಪರ್ಧೆ ಸೂಕ್ತ ಎಂದಿದ್ದಾರೆ. ಕೆಲವರು ಬೇಡ ಅಂತನೂ ಹೇಳಿದ್ದಾರೆ. ಯಾವ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್