ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್
ರಿಪ್ಪನಪೇಟೆ : ಕಾಂಗ್ರೆಸ್ ಸರಕಾರ ರಾಜ್ಯದ ಜನರಿಗೆ ಗ್ಯಾರಂಟಿಯನ್ನು ನೀಡುವುದರ ಮೂಲಕ ಅಭಿವೃದ್ಧಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಅಭಿಮಾನಿಗಳು ಜನ ಸಾಮಾನ್ಯರೊಂದಿಗೆ ಬೆರೆತು ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ ಹೊಸನಗರ- ರಿಪ್ಪನಪೇಟೆ ಬ್ಲಾಕ್ ಕಾಂಗ್ರೆಸ್ ಘಟಕ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಸಮಸ್ಯೆಗಳನ್ನು ಹೇಳಿಕೊಂಡು ಕಚೇರಿಗೆ ಬಂದ ಅಶಕ್ತರು, ಶೋಷಿತ ಕುಟುಂಬಗಳಿಗೆ ನ್ಯಾಯ ಒದಗಿಸಿಕೊಡಬೇಕು. ಇಲ್ಲಿ ಪಕ್ಷ ಚಟುವಟಿಕೆಗಳಿಗೆ ಮಾತ್ರ ಹೆಚ್ಚು ಒತ್ತು ನೀಡದೆ, ಸಾರ್ವಜನಿಕ ಸಮಸ್ಯೆಗಳ ಪರಿಹರಿಸುವ ಬಗ್ಗೆಯೂ ಆಸಕ್ತಿ ತೋರಬೇಕು,ಜನಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಪಕ್ಷದ ಯೋಜನೆಗಳ ಬಗ್ಗೆ ಮನವರಿಕೆ ಮಾಡಬೇಕು ಎಂದರು.
ಅರಣ್ಯ ಮತ್ತು ಕೈಗಾರಿಕಾ ನಿಗಮ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ಗೆಲುವಿಗೆ ಎಲ್ಲರೂ ಕೂಡಿ ಒಗ್ಗಟ್ಟಿನ ಬಲ ಪ್ರದರ್ಶಿಸಬೇಕಿದೆ,ರಾಜಕೀಯದಲ್ಲಿ ದ್ವೇಷ- ಅಸೂಯೆ, ಮನಸ್ಥಾಪಗಳು ಸಹಜ. ಆದರೆ, ಇದನ್ನು ಬದಿಗೆ ಸರಿಸಿ, ಗೀತಾ ಅವರ ಗೆಲುವಿಗೆ ಎಲ್ಲರೂ ಸಹಕರಿಸಬೇಕು ಎಂದರು.
ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್, ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಆಯನೂರು ಮಂಜುನಾಥ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಶ್ವೇತ ಬಂಡಿ, ಅನಿತಾ ಕುಮಾರಿ, ಬಂಡಿ ರಾಮಚಂದ್ರಪ್ಪ, ಬಿ.ಪಿ.ರಾಮಚಂದ್ರಪ್ಪ, ಸಾಕಮ್ಮ, ಧನಲಕ್ಷ್ಮೀ, ಸುಮಾ ಸುಬ್ರಹ್ಮಣ್ಯ, ವೈ.ಚ್.ನಾಗರಾಜ ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್