ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು – ಬಿ ವೈ ವಿಜಯೇಂದ್ರ | BYV

ಶಿವಮೊಗ್ಗಕ್ಕೆ ಈಶ್ವರಪ್ಪ ಕೊಡುಗೆ ಏನು – ಬಿ ವೈ ವಿಜಯೇಂದ್ರ


ಬಿಜೆಪಿ ವಿರುದ್ಧ ಬಂಡಾಯವೆದ್ದು, ಶಿವಮೊಗ್ಗದಿಂದ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ  ಪರ ಪ್ರಚಾರ ನಡೆಸಿದ ಅವರು, ಈಶ್ವರಪ್ಪ ನಾಮಪತ್ರ ಸಲ್ಲಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ರು. ಈ ಹಿಂದೆ ಈಶ್ವರಪ್ಪ ಸಚಿವರು, ಡಿಸಿಎಂ ಆಗಿದ್ದರು. ಹಾಗಿದ್ದರೂ ಶಿವಮೊಗ್ಗಕ್ಕೆ ಅವರ ಕೊಡುಗೆ ಏನು ಅಂತ ಪ್ರಶ್ನಿಸಿದ್ರು. ಬಿವೈ ರಾಘವೇಂದ್ರ (BY Raghavendra) ಈ ಬಾರಿಯೂ ಗೆದ್ದು ಬರುತ್ತಾರೆ, ಶಿವಮೊಗ್ಗದ ಜನ ಈಶ್ವರಪ್ಪನವರಿಗೆ ಪಾಠ ಕಲಿಸುತ್ತಾರೆ ಅಂತ ವಿಜಯೇಂದ್ರ ಭವಿಷ್ಯ ನುಡಿದ್ರು.

ಈಶ್ವರಪ್ಪ ವಿರುದ್ಧ ಶಿಸ್ತುಕ್ರಮ ಎಂದ ವಿಜಯೇಂದ್ರ

ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಟಿಕೆಟ್ ಸಿಗದೇ ಇರೋದಕ್ಕೆ ಬಿಎಸ್‌ ಯಡಿಯೂರಪ್ಪ ಕಾರಣ ಅಂತ ಈಶ್ವರಪ್ಪ ಆರೋಪಿಸಿದ್ದರು. ಅಪ್ಪ-ಮಕ್ಕಳಿಂದ ಬಿಜೆಪಿ ಹಾಳಾಗುತ್ತಿದೆ ಅಂತ ಯಡಿಯೂರಪ್ಪ ಹಾಗೂ ಪುತ್ರರ ವಿರುದ್ಧ ಆರೋಪಿಸಿದ್ದರು. ಶಿವಮೊಗ್ಗದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಈಶ್ವರಪ್ಪ ವಿರುದ್ಧ ಬಿಜೆಪಿಯಿಂದ ಶಿಸ್ತುಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಈಶ್ವರಪ್ಪ ವಿರುದ್ಧ ಶಿವಮೊಗ್ಗ ಕ್ಷೇತ್ರದ ಮತದಾರರು ಕೂಡ ಕ್ರಮ ಕೈಗೊಳ್ತಾರೆ ಎಂದ ವಿಜಯೇಂದ್ರ, ಈಶ್ವರಪ್ಪ ಅವರು ಎಷ್ಟೆಷ್ಟು ಮಾತಾಡ್ತಾರೆ ಅದರ ದುಪ್ಪಟ್ಟು ಮತಗಳು ರಾಘವೇಂದ್ರ ಅವರಿಗೆ ಬೀಳುತ್ತವೆ ಅಂತ ಹೇಳಿದ್ರು. ರಾಘವೇಂದ್ರ ಅವರು ಒಬ್ಬ ಜನಪ್ರಿಯ ಸಂಸದರಾಗಿದ್ದಾರೆ. ಈ ರೀತಿಯ ಪುಕ್ಸಟ್ಟೆ ಮಾತಗಳನ್ನು ಜನರು ಗಮನಿಸುತ್ತಾರೆ ಅಂತ ಹೇಳಿದ್ರು.

ಶಿವಮೊಗ್ಗಕ್ಕೆ ಈಶ್ವರಪ್ಪ ಅವರ ಕೊಡುಗೆ ಏನು?

ಈಶ್ವರಪ್ಪ ಅವರು ಈ ಹಿಂದೆ ಮಂತ್ರಿಯಾಗಿ ಶಿವಮೊಗ್ಗಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ? ಉಪಮುಖ್ಯಮಂತ್ರಿಯಾಗಿ ಶಿವಮೊಗ್ಗ ಜಿಲ್ಲೆಗೆ ಅವರ ಕೊಡುಗೆ ಏನು ಅಂತ ವಿಜಯೇಂದ್ರ ಪ್ರಶ್ನಿಸಿದ್ರು.

ರಾಘವೇಂದ್ರ, ಯಡಿಯೂರಪ್ಪ ಕೊಡುಗೆ ಬಗ್ಗೆ ಜನಕ್ಕೆ ಗೊತ್ತು

ರಾಘವೇಂದ್ರ ಅವರು ಸಂಸದರಾಗಿ ಯಾವ ರೀತಿ ಅಭಿವೃದ್ಧಿ ಮಾಡಿದ್ದಾರೆ, ಯಡಿಯೂರಪ್ಪ ಅವರು ಜಿಲ್ಲೆಗೆ, ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಮನೆ ಮನೆಯಲ್ಲೂ ಮಾತನಾಡುತ್ತಾರೆ ಅಂತ ವಿಜಯೇಂದ್ರ ಹೇಳಿದ್ದರು. ಈಶ್ವರಪ್ಪ ಅವರಿಂದ ಕಲಿಯಬೇಕಾದ ಅವಶ್ಯಕತೆ ಇಲ್ಲ ಅಂತ ತಿರುಗೇಟು ನೀಡಿದ್ರು.

ಈಶ್ವರಪ್ಪನವರಿಗೆ ಜನ ಬುದ್ಧಿ ಕಲಿಸುತ್ತಾರೆ

ಇವತ್ತು ಸಂಸದರಾಗಿರುವ ರಾಘವೇಂದ್ರ ಅವರು ಎರಡು ಲಕ್ಷಕ್ಕಿಂತ ಹೆಚ್ಚು ಮತಗಳಿಂದ ಗೆದ್ದು ಬರ್ತಾರೆ. ಈಶ್ವರಪ್ಪ ಅವರಿಗೆ ಜನ ಏನು ಬುದ್ದಿ ಕಲಿಸಬೇಕೋ ಕಲಿಸುತ್ತಾರೆ ಅಂತ ವಿಜಯೇಂದ್ರ ತಿರುಗೇಟು ಕೊಟ್ರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

7 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

13 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

2 days ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

2 days ago