14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ | Hanuman langur

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ

ಸೊರಬ ತಾಲ್ಲೂಕಿನ ಶಕುನವಳ್ಳಿಯಲ್ಲಿ ಕಳೆದೊಂದು ವಾರದಲ್ಲಿ 14 ಮಕ್ಕಳಿಗೆ ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮೂರು ಮುಶಿಯಾಗಳ (ಹನುಮಾನ್‌ ಲಂಗೂರ್‌) ಪೈಕಿ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆಹಿಡಿದಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅರವಳಿಕೆ ಮದ್ದು ನೀಡಿ ಮುಶಿಯಾ ಸೆರೆ ಹಿಡಿಯಲಾಗಿದೆ.

ಗ್ರಾಮದಲ್ಲಿ ಮುಶಿಯಾಗಳ ತಂಡ ಬೀಡು ಬಿಟ್ಟಿದೆ. ಅದರಲ್ಲಿ ಮೂರು ಮುಶಿಯಾ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ ಎನ್ನಲಾಗಿದೆ. ವಾನರರ ಕಾಟಕ್ಕೆ ಇಡೀ ಗ್ರಾಮವೇ ನಲುಗಿ ಹೋಗಿತ್ತು. ಮುಶಿಯಾಗಳ ದಾಳಿಗೆ ಸಿಲುಕಿ ಗಾಯಗೊಂಡವರಲ್ಲಿ 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೇ ಹೆಚ್ಚು ಇದ್ದರು.

ಮಕ್ಕಳಿಗೆ ತೊಂದರೆ ನೀಡುತ್ತಿದ್ದ ಇನ್ನೂ ಎರಡು ಮುಶಿಯಾಗಳ ಸೆರೆಗೆ ಕ್ರಮ ವಹಿಸಲಾಗಿದೆ. ಎಸಿಎಫ್‌ ಮೋಹನ್‌ಕುಮಾರ್ ನೇತೃತ್ವದಲ್ಲಿ ಗ್ರಾಮದಲ್ಲಿ ಇಡೀ ದಿನ ಕಾರ್ಯಾಚರಣೆ ನಡೆಯಿತು ಎಂದು ಆನವಟ್ಟಿ ವಲಯದ ಆರ್‌ಎಫ್‌ಒ ಪುರುಷೋತ್ತಮ ಮಾದ್ಯಮಗಳಿಗೆ ತಿಳಿಸಿದರು.

ಯಾವುದೇ ಪ್ರತಿರೋಧ ತೋರದ ಕಾರಣ ಮಕ್ಕಳನ್ನೇ ಈ ಮುಶಿಯಾಗಳು ಗುರಿ ಮಾಡುತ್ತಿದ್ದವು. ಅಂಗಳದಲ್ಲಿ ಆಟವಾಡುವ ಮಕ್ಕಳ ಮೇಲೆ ಏಕಾಏಕಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸುತ್ತಿದ್ದವು. ಇದರಿಂದ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿ ಪೋಷಕರು ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಲು ಅಂಜುತ್ತಿದ್ದರು.

ತಮ್ಮನ್ನು ಹಿಡಿಯಲು ಬಂದಿದ್ದ ಅರಣ್ಯ ಸಿಬ್ಬಂದಿ ಹಾಗೂ ವೈದ್ಯರನ್ನು ಇಡೀ ದಿನ ಕೈಗೆ ಸಿಗದೇ ಗೋಳು ಹೊಯ್ದುಕೊಂಡವು. ಕ್ಷಣ ಮಾತ್ರದಲ್ಲಿ ಮನೆಯ ಮಾಳಿಗೆ ಮರ ವಿದ್ಯುತ್ ಕಂಬ ಹೀಗೆ ಸಿಕ್ಕ ಸಿಕ್ಕ ಕಡೆ ಲಾಗಾ ಹಾಕುತ್ತಾ ಮಾಯವಾಗುತ್ತಿದ್ದ ಮುಶಿಯಾಗಳನ್ನು ಹಿಂಬಾಲಿಸಿದಅರಣ್ಯ ಸಿಬ್ಬಂದಿ ಬಿರು ಬಿಸಿಲಿಗೆ ಸಿಲುಕಿ ಹೈರಾಣಾಗಿದ್ದರು. ಕಾರ್ಯಾಚರಣೆ ನೋಡಲು ಭಾರೀ ಸಂಖ್ಯೆಯಲ್ಲಿ ಗ್ರಾಮಸ್ಥರು ನೆರೆದಿದ್ದು ಆ ಗದ್ದಲ ಕೂಡ ಮುಶಿಯಾಗಳ ಸೆರೆ ಹಿಡಿಯಲು ಅಡ್ಡಿಯಾಯಿತು. ಸಂಜೆ ಒಂದು ಮುಶಿಯಾ ಅರೆವಳಿಕೆ ಗನ್‌ನ ಗುರಿಗೆ ಸಿಲುಕಿ ಸೆರೆ ಸಿಕ್ಕಿತು ಎಂದು ತಿಳಿದುಬಂದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago