KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ
ಕೆಎಸ್ಆರ್ಟಿಸಿ ಬಸ್ ಹಾಗೂ ಒಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ – ಶಿಕಾರಿಪುರ ಮಾರ್ಗದಲ್ಲಿ ನಡೆದಿದೆ.
ಶಿವಮೊಗ್ಗ-ಶಿಕಾರಿಪುರ ಮಾರ್ಗದ ಚಿನ್ನಿಕಟ್ಟೆ ಬಿದರಳ್ಳಿ ಗ್ರಾಮದ ಬಳಿ KSRTC ಬಸ್ ಒಮಿನಿ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಓಮಿನಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ.
ಒಮಿನಿ ಕಾರಿನಲ್ಲಿ ಸೂರಗೊಂಡನಕೊಪ್ಪದಿಂದ ನಾಲ್ವರು ಶಿಕಾರಿಪುರದ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಮೃತಪಟ್ಟವರಲ್ಲಿ ಓರ್ವ ಹರಮಘಟ್ಟದವನು ಹಾಗೂ ಇನ್ನಿಬ್ಬರು ಸೂರಗೊಂಡನಕೊಪ್ಪದವರು ಎಂದು ತಿಳಿದುಬಂದಿದ್ದು, ಅವರ ಗುರುತು ಇನ್ನಷ್ಟೆ ಗೊತ್ತಾಗಬೇಕಿದೆ. ಒಮಿನಿಯಲ್ಲಿದ್ದ ಇನ್ನೊಬ್ಬರಿಗೂ ಗಂಭೀರವಾದ ಗಾಯವಾಗಿದ್ದು ಅವರನ್ನ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ರವಾನಿಸಲಾಗಿದೆ ಎಮ್ದು ತಿಳಿದುಬಂದಿದೆ.
KSRTC ಬಸ್ ಒಮಿನಿಗೆ ಡಿಕ್ಕಿಯಾಗಿ ರಸ್ತೆಪಕ್ಕದ ತಡೆಗೋಡೆಗೆ ಗುದ್ದಿದ್ದು ಬಸ್ನ ಮುಂದಿನ ಚಕ್ರ ಕಳಚಿಹೋಗಿದ್ದು ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಘಟನೆಯಲ್ಲಿ ಮಾರುತಿ ಒಮಿನಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹಗಳು ಛಿದ್ರಗೊಂಡಿವೆ.
ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್