Ripponpete | ಸೂಚನ ಫಲಕವಿಲ್ಲದ ಡಿವೈಡರ್ ಗೆ ಕಾರು ಡಿಕ್ಕಿ ,ಓರ್ವ ಗಂಭೀರ – ನರ ಬಲಿಗಾಗಿ ಕಾಯುತ್ತಿದೆಯಾ ಲೋಕೋಪಯೋಗಿ ಇಲಾಖೆ.???
ರಿಪ್ಪನ್ಪೇಟೆ ಪಟ್ಟಣದ ಸಾಗರ ರಸ್ತೆಯ ಎಪಿಎಂಸಿ ಮುಂಭಾಗದಲ್ಲಿ ಸಮರ್ಪಕವಾದ ಸೂಚನ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಟಾಟಾ ಇಂಡಿಕಾ ಕಾರಿನಲ್ಲಿ ಇಬ್ಬರು ಸಣ್ಣ ಮಕ್ಕಳು ಸೇರಿದಂತೆ ಕೋಣಂದೂರು ಮೂಲದ ಐವರು ಪ್ರಯಾಣಿಸುತಿದ್ದರು. ದೇವದಾಸ್ ಎಂಬುವವರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಪತ್ನಿ ಸವಿತಾ ರವರ ಕಾಲು ಮುರಿತವಾಗಿದೆ ,ಮಗಳು ಕೀರ್ತಿ ಎಂಬುವವರಿಗೂ ತಲೆಗೆ ಪೆಟ್ಟಾಗಿದೆ.
ಗಾಯಾಳುಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಅವೈಜ್ಞಾನಿಕ ಡಿವೈಡರ್ :
ಸಾಗರ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತಿದ್ದು ಎಪಿಎಂಸಿ ಮುಂಭಾಗದಲ್ಲಿ ಡಿವೈಡರ್ ನಿರ್ಮಾಣ ಮಾಡಲಾಗಿದ್ದು ಆದರೆ ಡಿವೈಡರ್ ಗೆ ಯಾವುದೇ ಸೂಚನ ಫಲಕವಿಲ್ಲದ ಕಾರಣ ರಾತ್ರಿ ಸಮಯದಲ್ಲಿ ಅಪಘಾತ ನಡೆಯುತಿದ್ದು ಈ ಬಗ್ಗೆ ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರನಿಗೆ ತಿಳಿಸಿದ್ದರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗುತ್ತಿದೆ.
ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಲ್ಲಿಕಾರ್ಜುನ್ ರಣೋತ್ಸಾಹದಲ್ಲಿ ಬಡವರ ವಾಸಿಸುವ ಮನೆಗಳನ್ನು ಕೆಡವಿ ಶ್ರೀಮಂತರ ವ್ಯಾಪಾರದ ಮಳಿಗೆಗಳನ್ನು ರಕ್ಷಿಸುವಲ್ಲಿ ತೋರುವ ಕಾಳಜಿ ಡಿವೈಡರ್ ಗೆ ಸೂಚನ ಫಲಕವನ್ನು ಅಳವಡಿಸುವಲ್ಲಿ ತೋರಿಸಲಿ ಎಂದು ಸ್ಥಳೀಯರು ಹೇಳುತಿದ್ದಾರೆ.
ಒಟ್ಟಾರೆಯಾಗಿ ವಾಹನ ಚಾಲಕರಿಗೆ ರಾತ್ರಿ ಸಮಯದಲ್ಲಿ ಡಿವೈಡರ್ ಗಮನಕ್ಕೆ ಬಾರದ ಹಿನ್ನಲೆಯಲ್ಲಿ ಈ ಸ್ಥಳದಲ್ಲಿ ಅಪಘಾತ ನಡೆಯುತ್ತಿದ್ದು ಕೂಡಲೇ ಈ ಸ್ಠಳದಲ್ಲಿ ಸೂಚನಾ ಫಲಕ ಅಳವಡಿಸಿ ಮುಂದಾಗುವ ಅನಾಹುತ ಭಾರಿ ಅನಾಹುತಗಳನ್ನು ತಡೆಯಲಿ ಎನ್ನುವುದೇ ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿ….
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್