Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ

Ripponpete | ಕಾಂಗ್ರೆಸ್ ಅಭ್ಯರ್ಥಿಯ ರೋಡ್ ಷೋಗೆ ಹರಿದು ಬಂದ ಜನಸಾಗರ


ಮೋದಿ ಹೆಸರಿನಲ್ಲಿ ಮತ ಕೇಳುವ ಸಂಸದರಿಗೆ ನಾಚಿಕೆಯಾಗಬೇಕು – ಶಾಸಕ ಬೇಳೂರು

ರಿಪ್ಪನ್‌ಪೇಟೆ : ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷö್ಯ ವಹಿಸಿರುವ ಬಿ.ವೈ.ರಾಘವೇಂದ್ರ ಈ ಭಾರಿಯ ಚುನಾವಣೆಯಲ್ಲಿ ಮತದಾರರ ಬಳಿ ಮತ ಕೇಳಲು ಹೋದರೆ ಮುಖಕ್ಕೆ ಮಂಗಳಾರತಿ ಮಾಡುತ್ತಾರೆಂಬ ಭಯದಿಂದ ಮೋದಿ ಮುಖ ತೋರಿಸಿ ಮತ ಕೇಳುತ್ತಿದ್ದಾರೆ, ನಾಚಿಕೆಯಾಗಬೇಕು ಇವರಿಗೆ ಎಂದು ಶಾಸಕ ಹಾಗೂ ರಾಜ್ಯ ಆರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಆಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.


ರಿಪ್ಪನ್‌ಪೇಟೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಆಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ರೋಡ್‌ಷೋ ನಡೆಸಿ ವಿನಾಯಕ ವೃತ್ತದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ರಾಜ್ಯದ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಂತೆ ಕೊಟ್ಟ ಭರವಸೆಯನ್ನು ಈಡೇರಿಸಿದ್ದು ಈ ಭಾರಿ ಕೇಂದ್ರದಲ್ಲಿ ಆಧಿಕಾರಕ್ಕೆ ಬಂದರೆ ಇನ್ನೂ ಹೆಚ್ಚಿನ ಗ್ಯಾರೆಂಟಿಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದರು.


ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪನವರು ಸದಾ ಬಡಜನರ ಪರವಾಗಿ ಅನುಷ್ಟಾನಗೊಳಿಸಲಾದ ಹಲವು ಜನಪರ ಕಾರ್ಯಕ್ರಮಗಳು ಇನ್ನೂ ಜನಮನದಲ್ಲಿ ಆಚ್ಚಳಿಯದೆ ಉಳಿದಿದ್ದು ಆವರ ಅಭಿವೃದ್ಧಿ ಸಾಧನೆಗಳು ಮಾತನಾಡುವಂತೆ ಮಾಡಿವೆ ಆ ನಿಟ್ಟಿನಲ್ಲಿ ಗೀತಕ್ಕ ಗೆದ್ದು ಬಂದರೆ ಜಿಲ್ಲೆಯಲ್ಲಿನ ಹಲವು ಜ್ವಲಂತ ಸಮಸ್ಯೆಗಳಾದ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸುವ ಮೂಲಕ ಭದ್ರಾವತಿ ವಿಐಎಸ್‌ಎಲ್ ಎಂ.ಪಿ.ಎA ಹೀಗೆ ಹತ್ತು ಹಲವು ಆಭಿವೃದ್ಧಿ ಕಾರ್ಯಗಳ ಕುರಿತು ಲೋಕಸಭೆಯಲ್ಲಿ ಚರ್ಚಿಸಿ ಪರಿಹರಿಸುವ ಆಶಾಭಾವನೆ ನಮಗಿದೆ ಆ ಕಾರಣ ತಾವು ಈ ಭಾರಿ ಗೀತ ಶಿವರಾಜ್ ಬೆಂಬಲಿಸಿ ಸಂಸತ್ ಭವನಕ್ಕೆ ಕಳುಹಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತಯಾಚಿಸಿ ನಾನು ನಿಮ್ಮೂರ ಮಗಳು ಬಂಗಾರಪ್ಪಾಜಿಯವರ ರಾಜಕೀಯ ಹೋರಾಟಗಾರನ ಮಗಳಾಗಿ ನನಗೆ ಜಿಲ್ಲೆಯ ಸರ್ವಾಂಗೀಣಾಭಿವೃದ್ದಿಯೊಂದಿಗೆ ಕ್ಷೇತ್ರದಲ್ಲಿಯೇ ಇದ್ದು ಬಡಜನರ ಸೇವಾ ಕಾರ್ಯಕ್ಕೆ ನನಗೆ ಆಶೀರ್ವಾದ ಮಾಡಿ ನಿಮ್ಮ ಸೇವೆಯನ್ನು ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿದರು.

ಪತ್ನಿ ಪರವಾಗಿ ಚಿತ್ರ ನಟ ಶಿವರಾಜ್ ಕುಮಾರ್ ಮತ್ತು ನಟ ದುನಿಯಾ ವಿಜಯ್ ಮಾತನಾಡಿ ಗೀತಾ ಶಿವರಾಜ್ ಕುಮಾರ್ ನಿಮ್ಮೂರ ಮಗಳು ಬೇರೆ ಯಾರು ಅಲ್ಲ ಈ ಭಾರಿ ಒಂದು ಅವಕಾಶ ಮಾಡಿಕೊಡಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಹಲವು ಜನಪರ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಮನೆಮನೆಗೆ ತಲುಪಿಸುವ ಕೆಲಸ ಮಾಡಿ ದೇಶದಲ್ಲಿ ಹಿಂದೂ ವಿರೋಧಿ ಸರ್ಕಾರವನ್ನು ಕಿತ್ತು ಎಸೆಯಲ್ಲೂ ಎಲ್ಲರೂ ಇಂದೇ ಸಂಕಲ್ಪಿಸಿ ಎಂದು ಮನವಿ ಮಾಡಿದರು.

ಪಕ್ಷದ ಮುಖಂಡರಾದ ಬಿ.ಜಿ.ಚಂದ್ರಮೌಳಿಗೌಡರು,ಬಿ ಪಿ ರಾಮಚಂದ್ರ , ಗಣಪತಿ ಗವಟೂರು, ಹೆಚ್.ವಿ.ಈಶ್ವರಪ್ಪ ಗೌಡ,ಅಮೀರ್ ಹಂಜಾ, ಡಿ.ಈ.ಮಧುಸೂದನ್, ಕೆರೆಹಳ್ಳಿ ರವೀಂದ್ರ,ಶ್ರೀಧರ್,ಆಶೀಫ್ ಭಾಷಾ,ಉಮಾಕರ್ ,ಎಂ ಎಂ ಪರಮೇಶ್ , ಉಲ್ಲಾಸ್ , ಸೂಡೂರು ಶಿವಣ್ಣ ,ವಾಹಿದ್ ,ರಾಜು ಗೌಡ , ರಮೇಶ್ ಪ್ಯಾನ್ಸಿ, ಲೇಖನ ಚಂದ್ರನಾಯ್ಕ್, ಗೀತಾ ಲಿಂಗಪ್ಪ, ಗೌರಮ್ಮ ಇನ್ನಿತರ ಕಾಂಗ್ರೆಸ್ ಪಕ್ಷದ ಮುಖಂಡರು  ಸಭೆಯಲ್ಲಿ ಪಾಲ್ಗೊಂಡಿದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

4 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

9 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago