Ripponpete | ಘೋಷಿತ ಗ್ಯಾರಂಟಿ ಯೋಜನೆ; ಸಮರ್ಪಕ ಅನುಷ್ಟಾನ ಕಾಂಗ್ರೆಸ್ ಪಕ್ಷಕ್ಕೆ ಲಾಭ
ರಿಪ್ಪನ್ಪೇಟೆ;-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ನಂತರ ತಕ್ಷಣವೇ ಜಾರಿಗೆ ತಂದಿರುವುದು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಾಭ ತಂದಿದೆ ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸದಸ್ಯ ಅಮೀರ್ ಹಂಜಾ ಹಾಗೂ ಹೊಸನಗರ ತಾಲ್ಲೂಕ್ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಚಿದಂಬರ ಜಂಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ರಿಪ್ಪನ್ಪೇಟೆಯ ಕಾಂಗ್ರೆಸ್ ಕಛೇರಿಯಲ್ಲಿ ಇಣ್ದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹೊಸನಗರ ತಾಲ್ಲೂಕಿನಲ್ಲಿ 95% ರಷ್ಟು ಫಲಾನುಭವಿಗಳು ಈ ಗ್ಯಾರಂಟಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಕೆಲವೊಂದು ದಾಖಲಾತಿ ನ್ಯೂನತೆಗಳಿಂದ ಶೇಕಡಾ 5 ರಷ್ಟು ಮಂದಿ ಫಲಾನುಭವಿಗಳು ಈ ಯೋಜನೆಯಿಂದ ವಂಚನೆಗೊಳಗಾಗಿದ್ದು ಈಗ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಿರುವುದರಿಂದ ಈ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಯೋಜನಾ ಅನುಷ್ಟಾನಗೊಳಿಸಲಾಗುವುದೆಂದು ಹೇಳಿದರು.
ಗ್ಯಾರಂಟಿ ಯೋಜನೆ ಬಿಜೆಪಿಯವರ ಪಾಲೆ ಹೆಚ್ಚು;-ರಾಜ್ಯ ಸರ್ಕರ ಘೋಷಣೆ ಮಾಡಿರುವ ಯೋಜನೆಗಳ ಫಲಾನುಭವಿಗಳ ಪಟ್ಟಿಯಲ್ಲಿ ಶೇಕಡಾ 75 ರಷ್ಟು ಮಂದಿ ಬಿಜೆಪಿಯವರೇ ಹೆಚ್ಚಿನ ಸೌಲಭ್ಯವನ್ನು ಪಡೆಯುತ್ತಿದ್ದಾರೆ.ಅದರೂ ರಾಜ್ಯ ಸರ್ಕಾರದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿರುವುದು ಉಂಡ ಮನೆಗೆ ದ್ರೋಹ ಬಗೆದಂತೆ ಎಂದು ವ್ಯಾಖ್ಯಾನಿಸಿದರು.
ಈ ಭಾರಿ ಲೋಕಸಭಾ ಚುನಾವಣೆ ನಂತರದಲ್ಲಿ ಕೇಂದ್ರದಲ್ಲಿಯೂ ಸಹ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು ಅಲಿಯೂ ಸಹ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಅಧಿಕಾರ ಹಿಡಿದ ತಕ್ಷಣವೇ ಜಾರಿಗೆ ತರಲಿದೆ ಎಂಬ ಭರವಸೆ ವ್ಯಕ್ತಪಡಿಸಿ ಕೇಂದ್ರದ ಬಿಜೆಪಿ ಕಳೆದ 10 ವರ್ಷದಿಂದ ಸುಳ್ಳಿನ ಸೌಧದಲ್ಲಿ ಅಧಿಕಾರದ ಚುಕ್ಕಾಣಿ ನಡೆಸಿದೆ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಸಮಿತಿ ಅಧ್ಯಕ್ಷ ಗಣಪತಿ ಗವಟೂರು, ತಾಲ್ಲೂಕ್ ಸಮಿತಿ ಸದಸ್ಯರಾದ ರವೀಂದ್ರ ಕೆರೆಹಳ್ಳಿ,ರಮೇಶ್ ಪ್ಯಾನ್ಸಿ,ಚಿಕ್ಕಜೇನಿ ಕರುಣಾಕರ್,ಪ್ರಕಾಶ ಪಾಲೇಕರ್, ಶ್ರೀಧರ್ ಚಿಗುರು ಹಾಗೂ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್