Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ

Ripponpete | ಬಿ ವೈ ರಾಘವೇಂದ್ರ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ


ರಿಪ್ಪನ್‌ಪೇಟೆ;-ಜಾತಿ ಬೇದ ಭಾವನೆ ಇಲ್ಲದೆ ಸದಾ ಕ್ಷೇತ್ರದ ಮತದಾರರ ಮತ್ತು ಅಭಿವೃದ್ದಿಯ ಮೂಲದೇಯದೊಂದಿಗೆ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರರವರ ಈ ಭಾರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲದಿಂದಾಗಿ ನಾಲ್ಕು ಲಕ್ಷಕ್ಕೂ ಆಧಿಕ ಮತಗಳಿಸುವ ಮೂಲಕ ಜಯಭೇರಿ ಸಾಧಿಸಲಿದ್ದಾರೆಂದು ಜನತಾದಳ (ಎಸ್)ರಾಜ್ಯ ಜನತಾದಳ ಮುಖಂಡರಾದ ಆರ್.ಎ. ಚಾಬುಸಾಬ್‌ರವರು ಹೇಳಿದರು.

ರಿಪ್ಪನ್‌ಪೇಟೆಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಉತ್ತಮ ಕೆಲಸಗಾರ, ಪ್ರಾಮಾಣಿಕರಾಗಿರುವ ಬಿ.ವೈ.ರಾಘವೇಂದ್ರರವರು  ಸಂಸತ್ ಸಭೆಯಲ್ಲಿ ಮಲೆನಾಡ ಭಾಗದ ಜ್ವಲಂತ ಸಮಸ್ಯೆಗಳನ್ನು ಸುಮಾರು 12 ಭಾರಿ  ಸಂಸತ್ತಿನಲ್ಲಿ ಪ್ರಸ್ಥಾಪಿಸಿ ಅದನ್ನು ಕಾರ್ಯಗತ ಮಾಡುವಲ್ಲಿ ಸಫಲರಾಗಿದ್ದು, ಇನ್ನೂ ಜಿಲ್ಲೆಯ ಹಲವಾರು ಕಾಮಗಾರಿಗಳು ಮತ್ತು ಅಭಿವೃದ್ಧಿಯ ದೃಷ್ಠಿಯಿಂದ ಬಿ.ವೈ. ರಾಘವೇಂದ್ರರವರ ಗೆಲುವು ಮುಖ್ಯವಾಗಿದೆ.ದೇಶದ ದೃಷ್ಠಿಯಲ್ಲಿ ನರೇಂದ್ರ ಮೋದಿಯವರು ಎಷ್ಟು ಮುಖ್ಯವೋ ಅಷ್ಟೆ ವಿಶ್ವಕ್ಕೆ ಸಹ ಮೋದಿಯವರ ಅವಶ್ಯಕತೆ ಇದೆ. ಪ್ರಪಂಚದಾದ್ಯಂತ ಭಾರತದ ಹೆಸರು ಮಂಚೂಣಿಯಲ್ಲಿ ಬರಲು ನರೇಂದ್ರ ಮೋದಿಯವರ ಶ್ರಮ ಅತಿಮುಖ್ಯವಾಗಿದೆ.


ಈಗಾಗಲೇ ಬಿ.ವೈ. ರಾಘವೇಂದ್ರರವರ ನಾಮಪತ್ರ ಸಲ್ಲಿಸಿದ್ದು  ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿಯವರು ಭಾಗವಹಿಸಿ ಜಿಲ್ಲೆಯ ಜೆಡಿಎಸ್‌ನ ಎಲ್ಲಾ ಕಾರ್ಯಕರ್ತರಿಗೆ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಕರೆನೀಡಿದ್ದಾರೆ.
ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದವರು ಈಗಲಾದರೂ ಮುಖ್ಯ ವಾಹಿನಿಯಲ್ಲಿ ಸೇರಿ ಇವರ ಗೆಲುವಿಗೆ ಕಾರಣಕರ್ತರಾಗಬೇಕು. ಸಂಸದರಿಗೆ ಬರುವಂತ ಕೋಟ್ಯಾಂತರ ರೂಪಾಯಿ ಕೇಂದ್ರ ಸರ್ಕಾರದ ಅನುದಾನವನ್ನು ಅಲ್ಪಸಂಖ್ಯಾತರು ಪಡೆಯಲು ಇದೊಂದು ಸುಸಂದರ್ಭವಾಗಿದೆ ಎಂದರು.

ರಾಷ್ಟಮಟ್ಟದಲ್ಲಿ ಸ್ವತಂತ್ರವಾಗಿ ಕೇಂದ್ರ ಸರ್ಕಾರ ಬರುವುದಕ್ಕೆ ನಾವು ಸಹ ಕೈಜೋಡಿಸಲು ಬದ್ಧರಾಗಿರುತ್ತೇವೆ. ಆದರೆ ಕಾಂಗ್ರೇಸಿನವರು ಕೇವಲ 254 ಸ್ಥಾನಕ್ಕೆ ಅಭ್ಯರ್ಥಿಗಳನ್ನು ಹಾಕಿ ಅಲ್ಪಸಂಖ್ಯಾತರಿಗೆ ನ್ಯಾಯಕೊಡಿಸಲು ಸಾಧ್ಯವಿಲ್ಲ. ಕಾಂಗ್ರೇಸ್‌ನವರ ಜೊತೆಗೆ ಶಿವಸೇನೆಯಂತಹ ಕೋಮುಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು ಇವರಿಂದಲೂ ಅಲ್ಪಸಂಖ್ಯಾತ ಕಲ್ಯಾಣ ಹೇಗೆ ಆಗುತ್ತೆ ಎಂದು ಯೋಚಿಸುವುದು ಸೂಕ್ತವಾಗಿದೆ.ಅಲ್ಲದೆ “ತ್ರಿವಳಿ ತಲಾಕ್’’ ನಿಷೇಧ ಕಾನೂನು ಜಾರಿಯಿಂದಾಗಿ ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮಹಿಳೆಯರು ಅದೃಶ್ಯರಾಗಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ.ಹಾಗೆಯೇ ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಮುಸ್ಲಿಂ ಸಮದಾಯದವರು ಮೋದಿಯವರನ್ನು ಬೆಂಬಲಿಸುವ ಮೂಲಕ ಬಿ.ವೈ.ರಾಘವೇಂದ್ರರ ಗೆಲುವಿಗೆ ಸಹಕರಿಸಲು ಸಮುದಾಯದವರಲ್ಲಿ ಮನವಿ ಮಾಡಿದರು.

ಮಾನ್ಯ ಕೆ.ಎಸ್. ಈಶ್ವರಪ್ಪನವರು ಭಾರತೀಯ ಜನತಾ ಪಕ್ಷದಲ್ಲಿ ಉತ್ತಮ ಸ್ಥಾನಮಾನ ಪಡೆದುಕೊಂಡು ರಾಜ್ಯದ ಉಪಮುಖ್ಯಮಂತ್ರಿಗಳಾಗಿ, ವಿವಿಧ ಸಚಿವಸ್ಥಾನ ಪಡೆದು ಮುಂದೆ  ರಾಜ್ಯಪಾಲರಾಗುವ ಅರ್ಹತೆ ಹೊಂದಿದ್ದರೂ ಈಶ್ವರಪ್ಪನವರು ಗೌರವಯುತವಾಗಿ ನಡೆದುಕೊಂಡಲ್ಲಿ ನರೇಂದ್ರ ಮೋದಿಯವರು ಖಂಡಿತವಾಗಿ ಅವರ ಕೈಬಿಡುವುದಿಲ್ಲ ಎಂದು ನಮ್ಮ ಅನಿಸಿಕೆ. ಈಗಲಾದರೂ ಮಾತೃಪಕ್ಷದ ಬಗ್ಗೆ ಒಮ್ಮೆ ಯೋಚನೆ ಮಾಡಿ ನಿರ್ಧಾರಕ್ಕೆ ಬರಲಿ ಎಂದು ತಿಳಿಸಿದರು.

ಜನತಾದಳದ ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿ ಜನತಾದಳದ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಇವರ ಗೆಲುವಿಗೆ ಶ್ರಮಿಸಬೇಕೆಂದು ಶಿವಮೊಗ್ಗ ಜಿಲ್ಲಾ ಜಾತ್ಯಾತೀತ ಜನತಾದಳದ ಉಪಾಧ್ಯಕ್ಷರಾದ ಜಿ.ಎಸ್. ವರದರಾಜ್ ಹಾಗೂ ಹೊಸನಗರ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಎನ್. ವರ್ತೇಶ್, ರಾಜ್ಯಜಾತ್ಯಾತೀತ ಜನತಾದಳದ ಕಾರ್ಯದರ್ಶಿ ಹೆಚ್.ಕೆ.ಅಬ್ದುಲ್‌ವಾಜಿದ್, ಜೆಡಿಎಸ್ ಜಿಲ್ಲಾ ಮುಖಂಡ ಸೈಯದ್‌ ಇಬ್ರಾಹಿಂ ರವರು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC…

3 hours ago

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families…

4 hours ago

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration…

4 hours ago

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

1 day ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

1 day ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

2 days ago