Ripponpete | ಮನೆಮನೆಗೆ ತೆರಳಿ ಮತ ಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು

“ಮನೆಮನೆಗೆ ತೆರಳಿ ಮತಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು’’


ರಿಪ್ಪನ್‌ಪೇಟೆ;-ಬರುವೆ ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು.

ತಾಲ್ಲೂಕ್ ಪಂಚಾಯ್ತಿ ಮಾಜಿ ಆಧ್ಯಕ್ಷೆ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ನಾಗರತ್ನ ದೇವರಾಜ್ ಮಾಧ್ಯಮದವರೊಂದಿಗೆ ಮಾತನಾಡಿ ಈ ಭಾರಿಯಲ್ಲಿಯೂ ನಮ್ಮ ರಾಘಣ್ಣರ ಗೆಲುವು ನಿಶ್ಚಿತ ಕಾರಣ ರಾಘಣ್ಣನವರು ಈ ಐದು ವರ್ಷದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುಧಾನವನ್ನು ತರುವುದರೊಂದಿಗೆ ಸಾಕಷ್ಟು ಆಭಿವೃದ್ದೀಪಡಿಸಿದ್ದಾರೆ.


ತಾಳುಗುಪ್ಪ ಸಾಗರ ಶಿವಮೊಗ್ಗ ಬೆಂಗಳೂರು ಮೈಸೂರು ಇಂಟರ್ ಸಿಟಿ ರೈಲು ಅರಸಾಳು ಮಾ ಡೇಸ್ ನಿಲ್ದಾಣದಲ್ಲಿ ನಿಲುಗಡೆ ಮಾಡುವುದರೊಂದಿಗೆ ಬಹುವರ್ಷದ ಬೇಡಿಕೆ ಸ್ಪಂದಿಸಿ ಈ ಮಲೆನಾಡಿನ ಭಾಗದ ರೈಲ್ವೆ ಪ್ರಯಣಿಕರಿಗೆ ಹೆಚ್ಚು ಅನುಕೂಲ ಕಲ್ಪಿಸಿರುವುದು.ಸಾಮಾನ್ಯ ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸುವ ಮೂಲಕ ಜನಾನುರಾಗಿ ಆಗಿರುವ ರಾಘಣ್ಣ ಈ ಭಾರಿಯಲ್ಲಿಯೂ ಹೆಚ್ಚಿನ ಮತಗಳ ಅಂತರದಿಂದ ಜಯಭೇರಿ ಬಾರಿಸಲು ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸುತ್ತಿದ್ದು ಮತದಾರರಿಗೆ ಅಭಿವೃದ್ದಿ ಕಾರ್ಯಕ್ರಮಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿದರು.

ಈ ಸಂದರ್ಭದಲ್ಲಿ ಕೆರೆಹಳ್ಳಿ ಬೂತ ಅಧ್ಯಕ್ಷರಾದ ಈಶ್ವರ ರಾವ್, ಕೇತಾರ್ಜಿರಾವ್,ಮುರುಳಿ ಕೆರೆಹಳ್ಳಿ,ಕುಸುಮಾ,ರೇಣುಕಾಬಾಯಿ
ಲಕ್ಷಿ, ಗೀತಾ, ಪುಪ್ಪಾವತಿ, ಅರ್ಜುನ,ಗಂಗಮ್ಮ,ಇನ್ನಿತರ ಕಾರ್ಯಕರ್ತರ ತಂಡ ಕೆರೆಹಳ್ಳಿಯ ವ್ಯಾಪ್ತಿಯ ಮನೆಮನೆಗೆ ತರೆಳಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ನಡೆಸಿದರು.

“ಏಪ್ರಿಲ್ 23 ರಂದು ಕಲಾಹೋಮ ಚಂಡಿಕಾಯಾಗ ಕುಂಭಾಭಿಷೇಕ ನವಗ್ರಹ ಹೋಮ’’

ರಿಪ್ಪನ್‌ಪೇಟೆ;- ಇಲ್ಲಿನ ವಿನಾಯಕ ನಗರ ಬಡಾವಣೆಯಲ್ಲಿನ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ 25 ನೇ ವರ್ಷದ ವಾರ್ಷೀಕೋತ್ಸವ  ಕಾರ್ಯಕ್ರಮವು ಏಪ್ರಿಲ್ 23 ರಂದು ಮಂಗಳವಾರ ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

25 ನೇ ವರ್ಷದ ವಾರ್ಷೀಕೋತ್ಸವ  ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಲಾಹೋಮ,ಚಂಡಿಕಾ ಯಾಗ,ಕುಂಭಾಭಿಷೇಕ,ನವಗ್ರಹ ಹೋಮ,ಸಾಮೂಹಿಕ ಸತ್ಯನಾರಾಯಣ ಪೂಜೆ ತೀರ್ಥ ಪ್ರಸಾದ್ ವಿತರಣೆ ನಂತರ ಸಾಮೂಹಿಕ ಆನ್ನಸಂತರ್ಪಣೆ ಜರುಗಲಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC…

3 hours ago

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families…

4 hours ago

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration…

4 hours ago

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

1 day ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

1 day ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

2 days ago