ಮೋದಿ ಹೆಸರಿನಲ್ಲಿ ಗೆದ್ದವರು ಹಿಂದೂ ಕಾರ್ಯಕರ್ತರ ರಕ್ಷಣೆಗೆ ನಿಲ್ಲಲಿ – ಪ್ರಮೋದ್ ಮುತಾಲಿಕ್
ರಿಪ್ಪನ್ಪೇಟೆ : ಮೋದಿ ಹೆಸರಿನಲ್ಲಿ ಗೆಲ್ಲುವ ಸಂಸದರು ಮುಂದಿನ ದಿನಗಳಲ್ಲಿ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸಿ ಘೋಷಿಸುವಂತೆ ಲೋಕಸಭೆಯಲ್ಲಿ ಒತ್ತಾಯಿಸಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ನಾಯಕ ಪ್ರಮೋದ್ ಮುತ್ತಾಲಿಕ್ ಹೇಳಿದರು.
ಇಂದು ಹೊಸನಗರದ ರಾಮಚಂದ್ರಪುರ ಮಠಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಮಾರ್ಗ ಮಧ್ಯೆ ರಿಪ್ಪನ್ಪೇಟೆಗೆ ಭೇಟಿ ನೀಡಿ ಹಿಂದೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮ್ಮದು 10 ಅಂಶಗಳ ಬೇಡಿಕೆ ಇದ್ದು ಆದನ್ನು ಆಯ್ಕೆಯಾಗುವ ಸಂಸದರು ಸಂಪುಟದಲ್ಲಿ ಚರ್ಚಿಸಿ ಈಡೇರಿಸುವ ಭರವಸೆ ನೀಡಿದಲ್ಲಿ ಬೆಂಬಲಿಸುವುದಾಗಿ ಘೋಷಿಸಿದ ಆವರು ಗೋ ಮಾತೆಯನ್ನು ರಾಷ್ಟ್ರೀಯ ಪ್ರಾಣಿಗಳನ್ನಾಗಿ ಘೋಷಿಸಬೇಕು. ವಕ್ಫ್ ಬೋರ್ಡ್ ಅನ್ನುವುದು ಒಂದು ಲ್ಯಾಂಡ್ ಮಾಫಿಯಾವಾಗಿದ್ದು ಅದರ ಸಮಗ್ರ ತನಿಖೆ ನಡೆಸುವುದು.ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಬೇಕು,ಹಿಂದು ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ಹಿಂದು ಕಾರ್ಯಕರ್ತರ ಮೇಲೆ ಹಾಕಲಾದ ಕೇಸ್ ವಾಪಾಸ್ಸು ಪಡೆಯುವುದು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸದಿದ್ದರೆ ಮೋದಿ ಹೆಸರಿನಲ್ಲಿ ಮತಪಡೆದು ಸಂಸದರಾದವರ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದೆಂಬ ಎಚ್ಚರಿಕೆ ನೀಡಿದರು.
ಮೋದಿ ಹೆಸರಿನಲ್ಲಿ ಮೇಲೆ ಆಗುವ ಸಂಸದರಿಗೆ ಹಿಂದುತ್ವದ ಪರವಾಗಿ ನಿಲ್ಲುವಂತೆ ಎಚ್ಚರಿಕೆಯನ್ನು ನೀಡಿದರು.ಚುನಾವಣೆ ಗೆದ್ದ ನಂತರ ಕಾರ್ಯಕರ್ತರಿಗೆ ಸ್ಪಂದಸಿ ಕನಿಷ್ಠ ಅವರ ಕಷ್ಟ ಸುಖಗಳಿಗೆ ಸ್ಪಂದಿಸುವಂತೆ ಸಂಸದರಿಗೆ ಕರೆ ನೀಡಿದರು.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ ಸ್ಪರ್ಧೆಯ ಬಗ್ಗೆ ತಮ್ಮ ಅಭಿಪ್ರಾಯ ಏನು ಎಂಬ ಮಾಧ್ಯಮದವರ ಪ್ರಶ್ನೆಗೆ ಈಗ ಏನು ಹೇಳುವುದಿಲ್ಲ ಎಂದು ಸೂಚ್ಯವಾಗಿ ಉತ್ತರಿಸಿದರು.
ಈ ಸಂದರ್ಭದಲ್ಲಿ ತ ಮ ನರಸಿಂಹ, ಎಂ.ಬಿ.ಮಂಜುನಾಥ,ಕುಷನ್ ದೇವರಾಜ್,ಸುರೇಶ್ಸಿಂಗ್,ಕಗ್ಗಲಿ ನಿಂಗಪ್ಪ,ಆಶೋಕ ಹಾಲುಗುಡ್ಡೆ,ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್