Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ
ರಿಪ್ಪನ್ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಬಡ ಮಹಿಳೆಯ ಮನೆಯನ್ನು ಒಡೆದು ಹಾಕಿದ್ದು ದಿಕ್ಕು ತೋಚದಂತಾಗಿದ್ದ ಕುಟುಂಬಕ್ಕೆ ಗ್ರಾಪಂ ಪಿಡಿಓ ಮಧುಸೂಧನ್ ಧೈರ್ಯ ತುಂಬಿ ಸಹಾಯದ ಭರವಸೆ ನೀಡಿದ್ದಾರೆ.
ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ ಈ ಹಿನ್ನಲೆಯಲ್ಲಿ ಸಾಗರ ರಸ್ತೆಯ ಬಡ ಮಹಿಳೆಯೊಬ್ಬರ ಮನೆಯನ್ನು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಲ್ಲಿಕಾರ್ಜುನ್ ಹಾಗೂ ಗುತ್ತಿಗೆದಾರ ರಣೋತ್ಸಾಹದಲ್ಲಿ ನೆಲಸಮಗೊಳಿಸಿ ಮಹಿಳೆಯ ಕಣ್ಣೀರಿಗೆ ಕಾರಣೀಕರ್ತರಾಗಿದ್ದರು.
ಇಂದು ಮಹಿಳೆಯ ಮನೆಗೆ ಭೇಟಿ ನೀಡಿದ ಪಿಡಿಓ ಮಧುಸೂಧನ್ ಬಡ ಮಹಿಳೆಗೆ ಸಾಂತ್ವಾನ ಹೇಳಿ ಮುಂದಿನ ದಿನಗಳಲ್ಲಿ ಗ್ರಾಮಾಡಳಿತದ ವತಿಯಿಂದ ನೆರವು ನೀಡುವ ಭರವಸೆ ನೀಡಿ ಧೈರ್ಯ ತುಂಬಿದ್ದಾರೆ.
ಈ ಬಗ್ಗೆ ಇತ್ತೀಚಿಗೆ ಕಾರ್ತಿಕ್ ಕೆರೆಗೋಡು ಎಂಬ ಸಾಮಾಜಿಕ ಕಳಕಳಿಯುಳ್ಳ ಯುವಕ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಬಡವರ ಬಗ್ಗೆ PWD ಇಲಾಖೆ ಹಾಗೂ ಗುತ್ತಿಗೆದಾರನಿಗೆ ಇರುವ ನಿರ್ಲಜ್ಜ್ಯತನ ಹಾಗೂ ಶ್ರೀಮಂತ ಕಟ್ಟಡ ಮಾಲೀಕರ ಬಗ್ಗೆ ಇರುವ ಗುಲಾಮಿತನದ ಬಗ್ಗೆ ಸವಿಸ್ತಾರವಾಗಿ ವಿವರಿಸಿದ್ದರು.
ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್