ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ಹಿಟಾಚಿ ಯಂತ್ರದ ಮೂಲಕ ತೆರವುಗೊಳಿಸಲು ಮುಂದಾದ ಅಧಿಕಾರಿಗಳು ಹಾಗೂ ಕಟ್ಟಡದ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ.
ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ 99%ರಷ್ಟು ಕಟ್ಟಡ ವಾರಸುದಾರರು ಸ್ವಯಂ ಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಿದ್ದಾರೆ ಆದರೆ ಬೆರಳಣಿಕೆ ವ್ಯಾಪಾರಸ್ಥರು ಮಾತ್ರ ತೆರವುಗೊಳಿಸುವುದಕ್ಕೆ ವಿಳಂಬ ಧೋರಣೆ ಅನುಸರಿಸುತ್ತಿರುವ ಕುರಿತು ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಮಾಡಲಾಗಿತ್ತು.
ವರದಿ ಪ್ರಸಾರವಾದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಕಾರ್ಯ ನಿರ್ವಹಣಾಧಿಕಾರಿಗಳ ನಿರ್ದೇಶನದಂತೆ ಪಟ್ಟಣದ ಗ್ರಾಪ ಪಿಡಿಓ ಮಧುಸೂಧನ್ ಪೊಲೀಸ್ ಇಲಾಖೆಯ ರಕ್ಷಣೆಯೊಂದಿಗೆ ಕಟ್ಟಡ ತೆರವುಗೊಳಿಸಲು ಮುಂದಾದರು ಈ ಸಂಧರ್ಭದಲ್ಲಿ ಯಾವುದೇ ಕಾರಣಕ್ಕೂ ಕಟ್ಟಡ ತೆರವಿಗೆ ಅವಕಾಶ ನೀಡುವುದಿಲ್ಲ ಎಂದು ಕಟ್ಟಡದ ಮಾಲೀಕರು ಪಟ್ಟು ಹಿಡಿದು ಕುಳಿತರು.
ಕೊನೆಗೆ ಈ ತಿಂಗಳ 20 ನೇ ತಾರೀಖಿನವರೆಗೂ ಕಾಲಾವಕಾಶ ನೀಡಿದ ಪಿಡಿಓ ಪಟ್ಟಣದ ಅಭಿವೃದ್ದಿಗೆ ಸ್ಪಂದಿಸುವಂತೆ ಮಾಲೀಕರಿಗೆ ಸೂಚಿಸಿದ್ದಾರೆ.
ನಂತರ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಗ್ರಾಪಂ ಮಾಜಿ ಉಪಾಧ್ಯಕ್ಷ ರವೀಂದ್ರ ಕೆರೆಹಳ್ಳಿ 20 ನೇ ತಾರೀಖಿಗೆ ಅನಧಿಕೃತ ಕಟ್ಟಡ ತೆರವುಗೊಳಿಸದೇ ಇದ್ದಲ್ಲಿ ಕಟ್ಟಡದ ಮುಂಭಾಗದಲ್ಲಿ ಸಾರ್ವಜನಿಕರ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದರು.
ಕಟ್ಟಡ ತೆರವಿಗೆ ಮುಂದಾದ ಸಮಯದಲ್ಲಿ ಹೊಸನಗರದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಲ್ಲಿಕಾರ್ಜುನ್ ಪಲಾಯನಗೈದದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್