Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ
ರಿಪ್ಪನ್ಪೇಟೆ : ಸ್ವಾರ್ಥಿಗಳ ಪ್ರಪಂಚದಲ್ಲಿ ಒಂದಷ್ಟು ಮಂದಿ ಒಳ್ಳೆಯವರು ಇರುತ್ತಾರೆ ಎಂಬುದಕ್ಕೆ ಪಟ್ಟಣದ ಕಾರು ಚಾಲಕ ನಾಗರಾಜ್ ಶೆಟ್ಟಿಯೇ ಉತ್ತಮ ನಿದರ್ಶನ.
ಕಾರಿನಲ್ಲಿ ಬಿಟ್ಟು ಹೋಗಿದ್ದ ಅಂದಾಜು 80 ಸಾವಿರ ಮೌಲ್ಯದ ಚಿನ್ನದ ಬ್ರಾಸ್ಲೈಟ್ ನ್ನು (Gold jewelleries) ಕಾರು ಚಾಲಕ (Car Driver) ನಾಗರಾಜ್ ಶೆಟ್ಟಿ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ (Humanity) ಮರೆದಿದ್ದಾರೆ.
ನಾಗರಾಜ್ ಶೆಟ್ಟಿಯವರ ಕಾರನ್ನು ಈಚಲುಕೊಪ್ಪ ಗ್ರಾಮದ ಕೃಷ್ಣಚಾರ್ ಎಂಬುವವರು ತಮ್ಮ ಮಗನ ಮದುವೆ ಕಾರ್ಯಕ್ರಮಕ್ಕಾಗಿ ಮಾರಣಕಟ್ಟೆಗೆ ಬಾಡಿಗೆಗೆ ಕರೆದೊಯ್ದಿದ್ದರು. ವಾಪಾಸು ಹಿಂದಿರುಗುವಾಗ ಮಧುಮಗನ ಬ್ರಾಸ್ಲೈಟ್ ಕಳೆದುಹೋಗಿದ್ದು ಕಾರು ಸೇರಿದಂತೆ ಎಲ್ಲಾ ಕಡೆ ಹುಡುಕಿ ಎಲ್ಲೂ ಸಿಗದ ಹಿನ್ನಲೆಯಲ್ಲಿ ನಿರಾಸೆಯಿಂದ ತೆರಳಿದ್ದಾರೆ.
ಇಂದು ನಾಗರಾಜ್ ಶೆಟ್ಟಿ ಕಾರನ್ನು ತೊಳೆಯುವಾಗ ಡ್ರೈವರ್ ಸೀಟಿನ ಅಡಿಯಲ್ಲಿ ಸಿಲುಕಿಕೊಂಡಿದ್ದು ಗಮನಕ್ಕೆ ಬಂದಿದೆ.ಕೂಡಲೇ ಕೃಷ್ಣಾಚಾರ್ ರವರಿಗೆ ಕರೆ ಮಾಡಿ ಬ್ರಾಸ್ಲೈಟ್ ನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ. ನಾಗರಾಜ್ ಶೆಟ್ಟಿ ರವರ ಪ್ರಾಮಾಣಿಕತೆಗೆ ಸಾರ್ವಜನಿಕ ವಲಯದಿಂದ ಶ್ಲಾಘನೆ ವ್ಯಕ್ತವಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್