ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರಗಳ್ಳತನ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಮಹಿಳೆಯೊಬ್ಬರು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಗುಂಡಪ್ಪ ಶೆಡ್ ನಲ್ಲಿರುವ ಕೆಎಸ್ ಈಶ್ವರಪ್ಪನವರ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿದ ಬೈಕ್ ಸವಾರರು ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರ ಕದ್ದು ಪರಾರಿಯಾಗಿದ್ದಾರೆ.
ಮಲ್ಲೇಶ್ವರ ನಗರದಲ್ಲಿ ಇವತ್ತು ಬೆಳಗಿನ ಜಾವ ನಡೆದ ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಒಂದೇ ಬೈಕ್ನಲ್ಲಿ ಬಂದ ಇಬ್ಬರು, ಅದೇ ದಾರಿಯಲ್ಲಿ ಬರುತ್ತಿದ್ದ ಮಹಿಳೆಯರನ್ನ ಅಡ್ಡಗಟ್ಟಿದ್ದಾರೆ. ಮಹಿಳೆಯರು ಆತಂಕಗೊಂಡು ಹಿಂದೆ ಸರಿದಿದ್ದಾರೆ. ಆಗ ಬೈಕ್ ಸವಾರರು ವಿಳಾಸ ಕೇಳಿದ್ದಾರೆ. ಆ ಬಳಿಕ ಬೈಕ್ ಸವಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಹಿಳೆಯರು ಮುಂದಕ್ಕೆ ಹೋಗಿದ್ದಾರೆ. ಅಲ್ಲಿವರೆಗೂ ನಾಟಕ ಮಾಡುತ್ತಿದ್ದ ಬೈಕ್ ಸವಾರರ ಪೈಕಿ ಹಿಂಬದಿ ಸವಾರ ಬೈಕ್ನಿಂದ ಕೆಳಕ್ಕೆ ಇಳಿದು ಮಹಿಳೆಯರನ್ನ ಬೆನ್ನತ್ತಿದ್ದಾನೆ. ಹಿಂಬದಿಯಿಂದ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಕತ್ತಿನಲ್ಲಿದ್ದ ಸರ ಕಿತ್ತುಕೊಂಡು ಮರಳಿ ಬೈಕ್ ಹತ್ತಿದ್ದಾನೆ.
ಬೈಕ್ ಸ್ಟಾರ್ಟ್ ಮಾಡಿಟ್ಟುಕೊಂಡಿದ್ದ ಇನ್ನೊಬ್ಬ ಸವಾರ, ಸರ ಕಳ್ಳ ಬೈಕ್ ಏರುತ್ತಲೇ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಬೆಳಗಿನ ಜಾವ ಮನೆ ಮುಂದೆ ನೀರು ಹಾಕುತ್ತಿದ್ದ ಜನರಿಗೂ ಈ ದೃಶ್ಯ ಕಾಣಿಸಿದ್ದು, ಮಹಿಳೆಯರು ಕೂಗಿಕೊಂಡ ಬಳಿಕ ಕಳ್ಳರನ್ನ ಹಿಡಿಯಲು ಮುಂದಾಗಿದ್ದಾರೆ. ಅಷ್ಟರಲ್ಲಿ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು.
ಘಟನೆಯಲ್ಲಿ ಮಹಿಳೆಯ 30 ಗ್ರಾಂ ತೂಕದ ಮಾಂಗಲ್ಯ ಸರ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.
ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್