ಅಪಾರ ಭಕ್ತ ಜನಸ್ತೋಮದಲ್ಲಿ ರಿಪ್ಪನ್ಪೇಟೆಯ
“ಶ್ರೀಸಿದ್ದಿವಿನಾಯಕಸ್ವಾಮಿಯ ಶ್ರೀಮನ್ಮಹಾರಥೋತ್ಸವ ಸಂಭ್ರಮ’’
ರಿಪ್ಪನ್ಪೇಟೆ;-ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು.
12.30 ಕ್ಕೆ ಶ್ರೀಸಿದ್ದಿವಿನಾಯಕ ರಥವೇರುತ್ತಿದ್ದಂತೆ ಸಿದ್ದಿವಿನಾಯಕ ಸ್ವಾಮಿಗೆ, ಜಗನ್ಮಾತೆ ಆನ್ನಪೂರ್ಣೇಶ್ವರಿ ದೇವಿಗೆ, ಜಯಘೋಷಣೆ ಮುಗಿಲು ಮುಟ್ಟಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ ಈ ವರ್ಷದಲ್ಲಿ ಮಳೆ-ಬೆಳೆ ಸಂವೃದ್ದಿಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ ನೆಮ್ಮದಿಯನ್ನು ಕರುಣಿಸುವಂತಾಗಲೆಂದು ಸರ್ವರ ಪರವಾಗಿ ಸಿದ್ದಿವಿನಾಯಕ ದೇವರಲ್ಲಿ ಪ್ರಾರ್ಥಿಸಿದರು.
ಶಿವಮೊಗ್ಗದ ವೇ/ಬ್ರ.ವಸಂತಭಟ್ ಮತ್ತು ಚಂದ್ರಶೇಖರಭಟ್ ಹಾಗೂ ಗುರುರಾಜಭಟ್ ನೇತೃತ್ವದಲ್ಲಿ ಇಂದು ಮನ್ಮಹಾರಥೋತ್ಸವದ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ದಾಭಕ್ತಿಯಿಂದ ನೆರವೇರಿದವು.
ಶ್ರೀಮನ್ಮಹಾರಥೋತ್ಸವ ಚಾಲನೆ ನೀಡುತ್ತಿದ್ದಂತೆ ಉತ್ಸವವವು ದೇವಸ್ಥಾನದಿಂದ ಹೊರಟು ವಿನಾಯಕ ವೃತ್ತದವರೆಗೆ ಸಹಸ್ರಾರು ಭಕ್ತ ಸಮೂಹದೊಂದಿಗೆ ಚಂಡೆ ವಾದ್ಯ ಮೇಳ ಯುವಕರ ತಂಡದ ಜಯಘೋಷಣೆಯಲ್ಲಿ ಬಿಸಿಲಯನ್ನು ಲೆಕ್ಕಿಸದೇ ಭಕ್ತರ ದಂಡು ರಥವನ್ನು ಎಳೆಯಲು ಮುಂದಾಗಿದ್ದು ವಿಶೇಷವಾಗಿತು. ಎರಡು ಟ್ಯಾಂಕರ್ ಮೂಲಕ ರಸ್ತೆಗೆ ನೀರು ಹರಿಸುವುದರೊಂದಿಗೆ ಉರಿ ಬಿಸಿಲಿನಲ್ಲಿಯೂ ಸಿದ್ದಿವಿನಾಯಕ ಸ್ವಾಮಿಯ ಮನ್ಮಹಾರಥೋತ್ಸವ ಮೆರವಣಿಗೆ ಮೆರಗು ತಂದಿತು. ಬಂದಂತಹ ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್ಕ್ರೀಮ್ ಹೀಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಹಲವು ಸಂಘಟನೆಯವರು ಸ್ವಪ್ರೇರಣೆಯಿಂದ ನೇರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರ ಶೆಟ್ಟಿ, ಎನ್.ಸತೀಶ್,ಗಣೇಶ್ ಎನ್.ಕಾಮತ್, ಎಂ.ಡಿ.ಇಂದ್ರಮ್ಮ,ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುದೀಂದ್ರಪೂಜಾರಿ, ತುಳೋಜಿರಾವ್,ಸ್ವಾಮಿ ದೊಡ್ಡಿನಕೊಪ್ಪ,ವೈ.ಜೆ.ಕೃಷ್ಣ,ಉಮೇಶ್ ಆರ್.ಮಂಜನಾಯ್ಕ್,ಎಂ ಬಿ.ಮಂಜುನಾಥ್ ,ಎಂ.ಸುರೇಶ್ಸಿಂಗ್,ಸುದೀರ್ ಪಿ. ರವೀಂದ್ರಕೆರೆಹಳ್ಳಿ,ನಾಗರತ್ನದೇವರಾಜ್, ಎಸ್.ಎನ್.ಬಾಲಚಂದ್ರ,
ಕುಸುಮಾಬಾಲಚಂದ್ರ,ಪದ್ಮಾಸುರೇಶ್,ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷಿö್ಮಮೋಹನ್, ದೇವಸ್ಥಾನ ಸೇವಾ ಸಮಿತಿಯವರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ರಥೋತ್ಸವದಲ್ಲಿ ಭಾಗವಹಿಸಿ ದೇವರದರ್ಶನಾಶೀರ್ವಾದ ಪಡೆದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್