ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud
ಶಿವಮೊಗ್ಗ : ಟೆಲಿಗ್ರಾಂ ಆ್ಯಪ್ ಮೂಲಕ ಬಂದ ಉದ್ಯೋಗದ ಭರವಸೆ ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ.
ಉದ್ಯೋಗ ಅರಸಿ ಆನ್ ಲೈನ್ ಮೊರೆ ಹೋದ ಯುವತಿಯೊಬ್ಬಳು ಉದ್ಯೋಗ ಹುಡುಕುತ್ತಾ ಬರೋಬ್ಬರಿ 11,82,208 ರೂ. ಕಳೆದುಕೊಂಡಿದ್ದಾಳೆ.
ನಡೆದಿದ್ದೇನು..???
ಡ್ರೀಮ್ ಹೊಟೆಲ್ ಗ್ರೂಪ್ ಸಂಸ್ಥೆಯನ್ನು ಪ್ರಮೋಷನ್ ಮಾಡಲು ತಿಳಿಸಿದ್ದ ಅಪರಿಚಿತ ವ್ಯಕ್ತಿಗಳು ಶಿವಮೊಗ್ಗದ ಈ ಯುವತಿಯಿಂದ ಲಕ್ಷಾಂತರ ಹಣವನ್ನು ಪೀಕಿಸಿಕೊಂಡು ಮರೆಯಾಗಿದ್ದಾರೆ.
ಶಿವಮೊಗ್ಗದ ಗಾಂಧಿ ಬಜಾರ್ ನ ತುಳಜಾ ಭವಾನಿ ರಸ್ತೆಯಲ್ಲಿ ವಾಸವಿರುವ ಯುವತಿ ಕಳೆದ ಹಲವಾರು ದಿನಗಳಿಂದ ಆನ್ ಲೈನ್ ನಲ್ಲಿ ಕೆಲಸ ಸರ್ಚ್ ಮಾಡುತ್ತಿದ್ದರು. ಇವರಿಗೆ ಟೆಲಿಗ್ರಾಂ ನಲ್ಲಿ ಸ್ವಾತಿ ಮಿಶ್ರಾ ಎಂಬ ಅಪರಿಚಿತ ಟೆಲಿಗ್ರಾಂ ಐಡಿಯಿಂದ ಮೆಸೆಜ್ ಬಂದಿದೆ. ಬಳಿಕ ಅರಬೆಲ್ಲಾ ಎಂಬ ಅಕೌಂಟ್ ನಿಂದ ಡ್ರೀಮ್ ಹೊಟೆಲ್ ಗ್ರೂಪ್ ನ ಪ್ರಮೋಟರ್ ಆಗಿ ಕರ್ತವ್ಯ ನಿರ್ವಹಿಸಲು ಸೊಚಿಸಲಾಗಿತ್ತು.
ವೆಬ್ ಸೈಟ್ ನ ಅಡ್ರೆಸ್ ಹಾಗೂ ಅದರ ಐಡಿ ಹಾಗೂ ಪಾಸ್ ವರ್ಡ್ ನೀಡಿದ್ದು, ಅದರಲ್ಲಿನ ಹೊಟೆಲ್ ನ್ನು ಪ್ರಮೋಟ್ ಮಾಡಿ ಮಾಡಿದ ಕೆಲಸಕ್ಕೆ 700 ಕೂಡ ನೀಡಿದ್ದರಂತೆ. ಬಳಿಕ ಇವರಿಗೆ ಕಸ್ಟಮರ್ ಸರ್ವಿಸ್ ಫಾರ್ ಯೂ ಎಂಬ ಟೆಲಿಗ್ರಾಂ ಐಡಿಯಿಂದ 10 ಸಾವಿರ ರೂ. ಹಣ ಹಾಕಲು ತಿಳಿಸಿದ್ದರಿಂದ ಹಣ ಹಾಕಿದ್ದರಂತೆ. ಆ ಬಳಿಕ ಆಗಿದ್ದೇ ಬೇರೆ, ನಿಮಗೆ ಕೆಲಸ ಬೇಕು ಎಂದಾದರೆ, ಹಣ ಹಾಕಿ ಎಂಬ ಸಂದೇಶ ರವಾನೆಯಾಗಿದೆ.
ಈ ವೇಳೆ 15 ಸಾವಿರ, 40 ಸಾವಿರ, 80 ಸಾವಿರ 1 ಲಕ್ಷ ರೂ. ಹಣ ಹೀಗೆ ಬರೋಬ್ಬರಿ 11,57,208 ರೂ. ಹಣ ಪೀಕಿದ್ದು, ಆ ಬಳಿಕವಷ್ಟೇ ಈ ಯುವತಿಗೆ ತಾನು ಮೋಸ ಹೋಗಿರುವ ಬಗ್ಗೆ ಅರಿವಾಗಿದೆ.
ಜೊತೆಗೆ ತನ್ನ ಖಾತೆಯಲ್ಲಿರುವ 20,86,000 ಹಣ ವಿತ್ ಡ್ರಾ ಮಾಡಲು ಕೂಡ ಶೇ. 30 ರಷ್ಟು ಹಣ ಟ್ಯಾಕ್ಸ್ ಕಟ್ಟಲು ಹೇಳಿದಾಗ ಯುವತಿ ತನ್ನ ಸ್ನೇಹಿತರಿಗೆ ತಿಳಿಸಿದ್ದಾರೆ. ಈ ವೇಳೆ, ಮೋಸ ಮಾಡಿರುವ ಬಗ್ಗೆ ಕುಟುಂಬಸ್ಥರಿಗೆ ತಿಳಿದಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್