ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ
ರಿಪ್ಪನ್ಪೇಟೆ;-ದಾನದಲ್ಲಿ ಶ್ರೇಷ್ಟವಾದುದ್ದು ರಕ್ತದಾನವಾಗಿದ್ದು ರಕ್ತದಾನದಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು ಎಂದು ಅನಂದಪುರಂ ಮುರುಘಾರಾಜೇಂದ್ರಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ಹೇಳಿದರು.
ಸಮೀಪದ ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆಮಠದಲ್ಲಿ ರೋಟರಿ ಕ್ಲಬ್ .ಶ್ರೀಮ.ನಿ.ಪ್ರ.ಸಿದ್ದಲಿಂಗ ಮಹಾಶಿವಯೋಗಿಗಳವರ ಪುಣ್ಯಸ್ಮರಣಿಯ ಅಂಗವಾಗಿ ಆಯೋಜಿಸಲಾದ “ರಕ್ತದಾನ ಶಿಬಿರ ಮತ್ತು ಅಯುರ್ವೇದ” ತಪಾಸಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ದಿವ್ಯಸಾನಿದ್ಯ ಆಶೀರ್ವಚನ ನೀಡಿ ರಕ್ತದಾನ ಆರೋಗ್ಯಕ್ಕೆ ಪೂರಕವೇ ಹೊರತು ಮಾರಕವಲ್ಲ.ಯುವಕರು ಸ್ವಯಂ ಪ್ರೇರಣಿಯಿಂದ ರಕ್ತದಾನ ಮಾಡುವುದರಿಂದ ಆಮೂಲ್ಯವಾದ ಜೀವಗಳು ಉಳಿಯುತ್ತದೆ.ದುಶ್ಚಟಗಳನ್ನು ಮಾಡುವುದರ ಬದಲು ರಕ್ತದಾನ ಮಾಡುವುದು ಉತ್ತಮ ಎಂದರು.
ಇತ್ತೀಚಿನ ದಿನಗಳಲ್ಲಿ ರಕ್ತದ ಆವಶ್ಯಕತೆ ಹೆಚ್ಚಾಗಿದ್ದು ಮಾನವನ ಅಂಗಾಂಗಗಳ ದಾನವನ್ನು ಸಹ ದಾನ ಮಾಡುತ್ತಿದ್ದು ಕಣ್ಣು ಮತ್ತು ರಕ್ತದಾನ ,ಕಿಡ್ನಿ ದಾನದಂತಹ ದಾನ ಮಾಡುವುದರಿಂದ ಇನ್ನೊಬ್ಬರಿಗೆ ಸಹಕಾರಿಯಾಗುವುದೆಂದು ಹೇಳಿ ಅರೋಗ್ಯವಂತ ಮನುಷ್ಯ ಮೂರು ತಿಂಗಳಿಗೊಮ್ಮೆ ಮಹಿಳೆಯರು ನಾಲ್ಕು ತಿಂಗಳಿಗೊಂದು ಭಾರಿ ರಕ್ತದಾನ ಮಾಡಬಹುದೆಂದು ವೈದ್ಯರು ಹೇಳುತ್ತಿದ್ದು ಇದರಿಂದ ಹೃದಯ ಕಾಯಿಲೆ ಬಾರದು ಎಂದರು.
ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಮ.ನಿ.ಪ್ರ.ಅಭಿನವ ಚನ್ನಬಸವ ಮಹಾಸ್ವಾಮಿಜಿ ಅಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಗುತ್ತಲಕಲ್ಮಠದ ಮ.ನಿ.ಪ್ರ. ಪ್ರಭುಮಹಾಸ್ವಾಮಿಜಿ , ಜಡೆ ಮಠದ ಮ.ನಿ.ಪ್ರ.ಸಿದ್ದ ವೃಷಬೇಂದ್ರ ಮಹಾಸ್ವಾಮಿಜಿ, ಸಾಗರ ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ, ಹೊಸನಗರ ತಾಲ್ಲೂಕ್ ಪಂಚಾಯ್ತಿ ಮಾಜಿ ಸದಸ್ಯ ಬಿ.ಯುವರಾಜ್,ಚಂದ್ರಮೌಳಿಗೌಡರು,ಜಯಶೀಲಪ್ಪಗೌಡರು,ಅಬ್ಬಗೋಡು ಹಾಲಪ್ಪಗೌಡರು,ಕಲ್ಯಾಣಪ್ಪಗೌಡರು ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್