ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ -ಪ್ರದೀಪ್ ಈಶ್ವರ್ | Election

ಶಿವಮೊಗ್ಗ : ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ’ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದಾರಕೇರಿ, ಪೊಲೀಸ್ ಚೌಕಿ ಫ್ಲೈಓವರ್‌ನಿಂದ ಕಾಶಿಪುರ, ಆಲ್ಕೊಳ ವೃತ್ತ, ಗಾಡಿಕೊಪ್ಪ ಪುನಃ ಆಲ್ಕೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ ಮುಖ್ಯರಸ್ತೆ, ಟಿಪ್ಪು ನಗರ ಮುಖ್ಯರಸ್ತೆ ಮೂಲಕ ಅಣ್ಣಾನಗರ ಮಿಳಗಟ್ಟ, ಇಂದಿರಾ ಕ್ಯಾಂಟೀನ್ ಮುಂಭಾಗದಿಂದ, ಕೆಎಸ್‌ಆರ್‌ಟಿಸಿ ಮುಂಭಾಗದಿಂದ, ಡಬಲ್ ರೋಡ್, ಎನ್.ಟಿ.ರಸ್ತೆ ಬಲಭಾಗದವರೆಗೆ ಹರಕೆರೆ, ಕುರುಬರ ಪಾಳ್ಯದಿಂದ ಸೀಗೇಹಳ್ಳಿ ವೃತ್ತದವರೆಗೆ ನಡೆದ ರೋಡ್ ಷೋನಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಕರ್ನಾಟಕದ ಚರಿತ್ರೆಯ ಮೊದಲ ಪುಟ ಶಿವಮೊಗ್ಗ ಜಿಲ್ಲೆಯಿಂದ ಆರಂಭವಾಗುತ್ತದೆ. ಇಲ್ಲಿ ಜನ ಸಮಾನ್ಯರಿಗೆ ಸೇವೆ ಒದಗಿಸಲು ಗೀತಕ್ಕ ಉತ್ತಮ ನಾಯಕಿ. ಆದ್ದರಿಂದ ಈ ಬಾರಿ ಗೀತಕ್ಕಗೆ ಮತ ನೀಡಿ ಆಶೀರ್ವದಿಸಿ’ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ ಮಾತನಾಡಿ, ‘ಸಮಾಜದಲ್ಲಿ ಬಡತನ, ಹಸಿವು, ಅಸಮಾನತೆಯ ಪಿಡುಗು ನಿವಾರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ದುಡಿಯುತ್ತಿದೆ. ಅದೇ ಉದ್ದೇಶಕ್ಕೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ’ ಎಂದರು.

‘ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಶೋಷಿತ ವರ್ಗದವರನ್ನು ಮುಖ್ಯ ವಾಹಿನಿಗೆ ಕರೆತರುವುದು. ಅದು ಖಂಡಿತ ನೆರವೇರಲಿದೆ. ಅದೇ ರೀತಿ, ಗ್ಯಾರಂಟಿಗಳು ಬಡವರ ಮನೆ ಬಾಗಿಲಿಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ತಲುಪುತ್ತಿವೆ. ಇದಕ್ಕೆ ನ್ಯಾಯ ಒದಗಿಸಲು ಎಲ್ಲರೂ ಕೈ ಜೋಡಿಸಬೇಕು. ಆದ್ದರಿಂದ, ಈ ಬಾರಿ ಮತ ನೀಡಿ ಆಶೀರ್ವದಿಸಿ’ ಎಂದರು.

ಗೀತಾ ಶಿವರಾಜಕುಮಾರ್ ‘ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಮತದಾನ ಪ್ರಕ್ರಿಯೆ ಇದೇ ಮೇ 7ರಂದು ನಡೆಯಲಿದೆ. ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ನಿಮ್ಮ ಮನೆ ಮಗಳಾಗಿ ಸ್ಪರ್ಧಿಸಿದ್ದೇನೆ’ ಎಂದು ಗೀತಾ ಶಿವರಾಜಕುಮಾರ್‌ ಹೇಳಿದರು. ‘ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲ ಜಾತಿ- ಧರ್ಮದವರ ಜೀವನ ಕ್ರಮ ಸುಧಾರಿಸಲು ಐದು ಜನಪರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಆದ್ದರಿಂದ ಸರ್ಕಾರದ ಈ ಋಣ ತೀರಿಸುವ ಹೊಣೆ ಎಲ್ಲರದ್ದಾಗಿದೆ. ವಿಪಕ್ಷಗಳು ಒಡ್ಡುವ ಹಣ- ಹೆಂಡದಂತಹ ಆಮಿಷಗಳಿಗೆ ಒಳಗಾಗದೆ ಪೊಳ್ಳು ಭರವಸೆಗಳಿಗೆ ಮರುಳಾಗದೆ ಕ್ಷೇತ್ರ ಅಭಿವೃದ್ಧಿಯ ಪಥದಲ್ಲಿ ಸಾಗಬೇಕಾದರೆ ನನಗೆ ಮತ ನೀಡಿ ಆಶೀರ್ವದಿಸಿ’ ಎಂದು ಕೋರಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

16 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

18 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

18 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

2 days ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

2 days ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

2 days ago