ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಬೇಸತ್ತು ಟವರ್ ಏರಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು – ಓಡೋಡಿ ಬಂದ ಅಧಿಕಾರಿಗಳು | Network issues

ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಬೇಸತ್ತು ಟವರ್ ಏರಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು – ಓಡೋಡಿ ಬಂದ ಅಧಿಕಾರಿಗಳು | Network issues


ಮೊಬೈಲ್ ನೆಟ್‌ವರ್ಕ್ ಸಮಸ್ಯೆಗೆ ಆಕ್ರೋಶಗೊಂಡ ಗ್ರಾಮಸ್ಥರು ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ  ನಡೆದಿದೆ.

ತಾಲೂಕಿನ ಮತ್ತಿಮನೆ ಗ್ರಾಪಂ ಹಿಂಭಾಗದ ಬಿಎಸ್‌ಎನ್‌ಎಲ್ ಟವರ್ ಸಮೀಪದಲ್ಲಿ ಜಮಾಯಿಸಿದ ಗ್ರಾಮಸ್ಥರು ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರ ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ಬ್ಲಾಕ್ ಕಾರ್ಯದರ್ಶಿ ಕುಮಾರ್ ಹಿಲ್ಕುಂಜಿ, ಅಡಗೋಡಿ ಸ್ವಾಮಿ, ತರುವೆ ಕೃಷ್ಣ ಮತ್ತು ಇತರರು ಟವರ್ ಏರಿ ಅಲ್ಲೇ ಕುಳಿತು ಪ್ರತಿಭಟಿಸಿದರು. ಸಮಸ್ಯೆ ಬಗೆಹರಿಯುವ ತನಕ ಕೆಳಗೆ ಇಳಿಯುವುದಿಲ್ಲ ಎಂದು ಪಟ್ಟುಹಿಡಿದ ಘಟನೆ ನಡೆದಿದೆ.

ಸಾಕಷ್ಟು ವರ್ಷಗಳಿಂದ ಮೊಬೈಲ್ ಟವರ್ ಇದ್ದರು ನೆಟ್‌ವರ್ಕ್ ಸಮಸ್ಯೆ ಬಾಧಿಸುತ್ತಿದೆ. ವಿದ್ಯುತ್ ಹೋಗುತ್ತಿದ್ದಂತೆ ನೆಟ್‌ವರ್ಕ್ ಸಮಸ್ಯೆ ಎದುರಾಗುತ್ತಿದೆ. ಜನರೇಟರ್ ಕೆಟ್ಟು ಹೋಗಿದ್ದರು ದುರಸ್ಥಿ ಇಲ್ಲ ಅಧಿಕಾರಿಗಳಿಗೆ ಮನವಿ ಮಾಡಿದರೆ ಯಾವುದೇ ಉಪಯೋಗವಿಲ್ಲ. ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲಾಗಿದೆ. ಆದರೆ ಅವರು ಟವರ್ ಹತ್ತಿರ ಬರೋದೇ ಇಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವಿಷಯ ತಿಳಿದ ಬಿಎಸ್‌ಎನ್‌ಎಲ್ ಜೆಟಿಒ ಹರೀಶ್, ಸಂತೋಷ್, ಶರತ್, ನಗರ ಠಾಣೆ ಪಿಎಸ್‌ಐ ರಮೇಶ್ ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದರು. ಈ ವೇಳೆ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಗ್ರಾಮಸ್ಥರು ಆರೋಪಗಳ ಸುರಿಮಳೆಗೈದರು. ನಗರ ಠಾಣೆ ಪಿಎಸ್‌ಐ ರಮೇಶ್ ಗ್ರಾಮಸ್ಥರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು.


ಮೊಬೈಲ್ ನೆಟ್‌ವರ್ಕ್ 24 ಗಂಟೆಯೂ ಸಿಗಬೇಕು. ವಿದ್ಯುತ್ ಇಲ್ಲದಿದ್ದರು ಜನರೇಟರ್ ಮೂಲಕ ನೆಟ್‌ವರ್ಕ್ ಇರುವಂತೆ ಕ್ರಮ ಕೈಗೊಳ್ಳಲು ಪಟ್ಟುಹಿಡಿದರು. ಇದಕ್ಕೆ ಅಧಿಕಾರಿಗಳು 6 ದಿನದ ಕಾಲಾವಕಾಶ ಕೋರಿದರು. ಇದಕ್ಕೆ ಸಮ್ಮತಿಸಿದ ಗ್ರಾಮಸ್ಥರು ಟವರ್‌ನಿಂದ ಕೆಳಗಿಳಿದು, ಒಂದು ವೇಳೆ ಮಾತು ತಪ್ಪಿದರೆ ಮತ್ತೆ ಪ್ರತಿಭಟನಾ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಅರಮನೆಕೊಪ್ಪ ಗೋಪಾಲ್, ಕೊಡಸೆ ಚಂದ್ರಪ್ಪ, ಅಪ್ಪುಭಟ್, ಹಿಲ್ಕುಂಜಿ ಕುಮಾರ್, ಕಿಶೋರ್, ಸುಕೇಶ್ ಮತ್ತಿಕೈ, ಟಿ.ಡಿ ಗಣಪತಿ, ತರುವೆ ಕೃಷ್ಣ, ಸ್ವಾಮಿ ಅಡಗೋಡಿ, ರವೀಂದ್ರ ಮತ್ತಿಮನೆ, ಪ್ರಶಾಂತ ಸಂಪೇಕಟ್ಟೆ, ವೆಂಕಟರಮಣ ಭಟ್, ಶ್ರೀನಿವಾಸ ಎಸ್, ಆಧಿತ್ಯ, ಇತರರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

21 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago