ಮೂಲಭೂತ ಸೌಕರ್ಯಕ್ಕಾಗಿ ಈಚಲುಕೊಪ್ಪ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ | Election Boycott

ಮೂಲಭೂತ ಸೌಕರ್ಯಕ್ಕಾಗಿ ಈಚಲುಕೊಪ್ಪ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ | Election Boycott

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ. ಇನ್ನೇನು ಲೋಕಸಭಾ ಚುನಾವಣೆಗೆ 7 ದಿನ ಬಾಕಿ ಇರುವಾಗಲೇ ನಮ್ಮೂರಿಗೆ ಚುನಾವಣಾ ಪ್ರಚಾರಕ್ಕೆ ಯಾರೂ ಬರಬಾರದೆಂದು ಗ್ರಾಮಸ್ಥರು ನಿರ್ಬಂಧ ವಿಧಿಸಿ ಪ್ಲೆಕ್ಸ್ ಅಳವಡಿಸಿದ್ದಾರೆ.

ಶರಾವತಿ ಮುಳುಗಡೆಯಿಂದಾಗಿ  ಆಸ್ತಿಪಾಸ್ತಿ ಮನೆಮಠ ಕಳೆದುಕೊಂಡು ನೆಲೆಯರಸಿ ಈಚಲುಕೊಪ್ಪ, ಬಗ್ಗಳ, ಹಲುಸಾಲೆ ಮಳವಳ್ಳಿ, (ಕಾಪೇರ ಮನೆ )ಗಳಿಗೆ ಬಂದ 40ಕ್ಕೂ ಹೆಚ್ಚು ಕುಟುಂಬಗಳಿಗೆ ಮುಳುಗಡೆಯಾಗಿ 65 ವರ್ಷ ಕಳೆದರೂ ಮೂಲಭೂತ ಸೌಲಭ್ಯ ಇನ್ನೂ ಮರೀಚಿಕೆಯಾಗೆ ಉಳಿದಿದೆ.

ಮಳೆಗಾಲದಲ್ಲಿ ಈ ಕುಟುಂಬಗಳ ಪರಿಸ್ಥಿತಿ ತೀರಾ ಕಷ್ಟಕರವಾಗಿದೆ.
ಮೂಲಭೂತ ಸೌಕರ್ಯಕ್ಕಾಗಿ ಈಗಾಗಲೆ ಸುಮಾರು 65 ವರ್ಷದಿಂದ ರಸ್ತೆಗಾಗಿ ಹೋರಾಟ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಮತ್ತೆ ಏನಕ್ಕೆ ಬೇಕು ಚುನಾವಣೆ?? ಏನಕ್ಕೆ ಬೇಕು ರಾಜಕಾರಣಿಗಳು?? ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.

ಮಳೆಗಾಲದ ಸನ್ನಿವೇಶದಲ್ಲಿ ಯಾವುದೇ ವಾಹನಗಳು ಬರಲಾಗದ ಪರಿಸ್ಥಿತಿ ಊರಿನದ್ದು,ಕಳೆದ 65 ವರ್ಷಗಳಲ್ಲಿ ಆಶ್ವಾಸನೆ ಗಳಿಂದ ಜನರಿಂದ ಮತವನ್ನು ಕೇಳಿರುವುದು ಬಿಟ್ಟರೆ ,ಹೇಳಿ ಕೊಳ್ಳುವುದಕ್ಕೂ ಯಾವುದೇ ಅಭಿವೃದ್ಧಿ ಆಗಿಲ್ಲ. ವಯಸ್ಕರು ಅಸ್ಪತೆ ಗೆ ಹೋಗಬೇಕಾದರೆ ಅಥವಾ ಮಕ್ಕಳು ಶಾಲೆಗಳಿಗೆ ಹೋಗವರಿಗೆ ತುಂಬಾ ಕಷ್ಟದ ಪರಿಸ್ಥಿತಿ ಈ ಊರಿನಲ್ಲಿದೆ ಎಂದು ದೂರಿದರು.

ರಾಜಕೀಯ ಪ್ರಮುಖರು ಮತ ಕೇಳುವುದಕ್ಕೆ ಬರುವಾದರೆ ದಯವಿಟ್ಟು ಬರಲೇಬೇಡಿ…ರಸ್ತೆ ಮತ್ತು ಮೂಲಭೂತ ಸೌಕರ್ಯಗಳನ್ನು ನೀಡಿ ಅಭಿವೃದ್ಧಿಯೊಂದಿಗೆ ಬನ್ನಿ ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಈ ಗ್ರಾಮಕ್ಕೆ ಸುಮಾರು 3.5 km ರಸ್ತೆಯ ಅವಶ್ಯಕತೆ ಇದೆ, ಪ್ರತಿವರ್ಷ ಗ್ರಾಮಸ್ಥರೇ ಸೇರಿ ರಸ್ತೆಗೆ ಮಣ್ಣು ತುಂಬಿಸಿ ರಸ್ತೆ ಮಾಡಿಕೊಂಡರು ಸುರಿಯುವ ಮಳೆಯಲ್ಲಿ ಮಣ್ಣು ಕೊಚ್ಚಿಕೊಂಡು ಹೋಗಿ ಬರಿ ಕಲ್ಲುಗಳು ರಸ್ತೆಯ ಮೇಲೆ ಉಳಿಯುವಂತಾಗಿದೆ,
ಆ ರಸ್ತೆಯಲ್ಲಿ ವಾಹನವಿರಲಿ ಕಾಲ್ನಡಿಗೆಯಲ್ಲಿ ಕೂಡ ಚಲಿಸಲು ಈ ರಸ್ತೆ ಯೋಗ್ಯವಾಗಿಲ್ಲ. ಮಳೆಗಾಲದಲ್ಲಿ ಸಂಪೂರ್ಣ ರಸ್ತೆ ಜಖಂಗೊಂಡು ವಾಹನಗಳು ಯಾವುದು ಬರುವುದಿಲ್ಲ , ಈ ಎಲ್ಲಾ ವಿಷಯಗಳು ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರಿಗೂ ತಿಳಿದಿದ್ದರು ಅದರಿಂದ ಯಾವುದೇ ಉಪಯೋಗಗಳು ವಾಗಿಲ್ಲ.

ಆದ್ದರಿಂದ ಇಷ್ಟು ವರ್ಷಗಳು ಮತ ನೀಡಿಯೂ ಕೂಡ ಯಾವುದೇ ಮೂಲಭೂತ ಸೌಕರ್ಯಗಳು ಸಿಕ್ಕಿರುವುದಿಲ್ಲ ಅದಕ್ಕಾಗಿ ಬಗ್ಗಳ, ಈಚಲುಕೊಪ್ಪ, ಹಲುಸಾಲೆ ಮಳವಳ್ಳಿ(ಕಾಪೇರ ಮನೆ )ಯ ಸುಮಾರು 250-300 ಜನರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿರುತ್ತಾರೆ. KPC ಅವರ ಕಡೆಯಿಂದಲೂ ನಮಗೆ ರಸ್ತೆ ಮಾಡಿಕೊಡದಿರುವುದು ಇವರ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ…ಹಲವು ಬಾರಿ ತಾಲೂಕಿನ ಜನಪ್ರತಿನಿದಿನಗಳು, ಅಧಿಕಾರಿಗಳನ್ನು ಭೇಟಿಮಾಡಿ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ… ಆದ್ದರಿಂದ ಎಲ್ಲಾ ಗ್ರಾಮಸ್ಥರು ಬೇಸತ್ತು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.




ವರದಿ : ಶಶಿಕುಮಾರ್ ಹರತಾಳು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

4 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

10 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago