ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!!Wild corner

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!!


ರಿಪ್ಪನ್‌ಪೇಟೆ : ಇಲ್ಲಿನ ಮಲ್ಲಾಪುರ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದು ಸುತ್ತಮುತ್ತಲಿನ ರೈತರನ್ನು ಭಯಭೀತರನ್ನಾಗಿಸಿವೆ.

ಗವಟೂರು ಗ್ರಾಮದ ಮಲ್ಲಾಪುರದ ಎಂ.ವೈ.ನಾಗರಾಜಗೌಡ ಎಂಬುವವರ ಜಮೀನಿನಲ್ಲಿ ಇಂದು ಮುಂಜಾನೆಯಲ್ಲಿ ಕಾಡು ಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ

ರೈತಾಪಿ ವರ್ಗ ಮುಂಜಾನೆ ತಮ್ಮ ತೋಟ ಮತ್ತು ಗದ್ದೆಗಳಿಗೆ ಹೋಗಿ ಬರುವ ಪದ್ದತಿ. ಆದರೆ ಇಂದು ಮುಂಜಾನೆ ಎಂದಿನಂತೆ ರೈತ ತನ್ನ ತೋಟಕ್ಕೆ ಹೋಗುವ ದಾರಿಯಲ್ಲಿ ದಿಢೀರ್ ಕಾಣಿಸಿಕೊಂಡ ಕಾಡುಕೋಣಗಳ ಹಿಂಡನ್ನು ಕಂಡು ಗಾಬರಿಯಿಂದ ಮನೆಗೆ ವಾಪಾಸ್ ಓಡಿರುವುದಾಗಿ ಮಾಧ್ಯಮದವರಿಗೆ ವಿವರಿಸಿದ್ದಾರೆ.

ಮೊದಲೇ ಕಾಡುಕೋಣಗಳು ಮನುಷ್ಯರನ್ನು ಕಂಡು ಏನು ಮಾಡುತ್ತವೆಯೋ ಎಂಬ ಭಯ. ಇನ್ನೊಂದು ಕಡೆ ಎಲ್ಲ ಸುತ್ತಮುತ್ತಲಿನ ಐಬೆಕ್ಸ್ ಬೇಲಿ ಇದ್ದು ಕೋಣಗಳು ಬೆನ್ನತ್ತಿದರೆ ಎಲ್ಲಿ ಓಡಿ ತಪ್ಪಿಸಿಕೊಳ್ಳುವುದು ಎಂಬ ಚಿಂತೆ. ಇದರಿಂದಾಗಿ ದೂರದಲ್ಲಿ ಕಂಡ ಕಾಡುಕೋಣಗಳ ಗುಂಪು ನೋಡಿ ಮನೆಗೆ ಮರಳಿ ಬಂದು ಅವರು, ಪಟಾಕಿ ಸಿಡಿಸಿ ಜಮೀನಿನಿಂದ ಕಾಡಿನ ಕಡೆಗೆ ಓಡಿಸಲಾಯಿತು ಎಂದು ರೈತ ಎಂ.ವೈ. ನಾಗರಾಜ್ ವಿವರಿಸಿದರು.


ಒಟ್ಟಾರೆಯಾಗಿ ಇರುವ ಅರಣ್ಯವನ್ನು ಬೋಳು ಗುಡ್ಡವನ್ನಾಗಿ ಮಾಡಿರುವ ಕಾರಣ ಕಾಡು ಪ್ರಾಣಿಗಳು ಊರಿಗೆ ಬರುವಂತಾಗಿದೆ. ಕುಕ್ಕಳಲೇ ಗ್ರಾಮದ ಅರಣ್ಯ ಸರ್ವೆ ನಂಬರ್ 13 ಮತ್ತು ಕಂದಾಯ ಇಲಾಖೆಯ  ನೂರಾರು ಎಕರೆ ಜಮೀನು ಅರಣ್ಯದಂತೆ ಇದ್ದು ಜಮೀನಲ್ಲಿನ ಮರಗಳು ಮಾನವನ ದುರಾಸೆಯಿಂದಾಗಿ ನೆಲಕ್ಕುರುಳಿದ್ದು ಅರಣ್ಯಾಧಿಕಾರಿಗಳಾಗಲಿ, ಕಂದಾಯ ಇಲಾಖೆಯ ಅಧಿಕಾರಿಗಳಾಗಲಿ ಯಾರು ಗಮನಹರಿಸದೇ ಖಾಸಗಿಯರ ಪಾಲಾಗುವಂತಾಗಿದೆ.

ಅರಣ್ಯ ಇಲಾಖೆಯವರು ಜೂನ್, ಜುಲೈ ತಿಂಗಳು ಬಂದರೆ ವನಮಹೋತ್ಸವ ಹೆಸರಿನಲ್ಲಿ ಗಿಡ-ಮರಗಳನ್ನು ಬೆಳೆಸಿ ಪರಿಸರ ಉಳಿಸಿ ಎನ್ನುವ ಘೋಷಣೆಯಲ್ಲಿ ಮಲೆನಾಡಿನ ಅರಣ್ಯ ಸರ್ವನಾಶವಾಗುತ್ತಿದ್ದರೂ ಕೂಡಾ ಗೊತ್ತಿಲ್ಲದವರಂತೆ ಇರುವುದು ಇಂದು ಕಾಡು ಪ್ರಾಣಿಗಳು ನಾಡಿಗೆ ಬರುವಂತಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

21 hours ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

1 day ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

2 days ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

2 days ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

2 days ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

2 days ago