ಲೋಕಸಭಾ ಚುನಾವಣೆ | ಪಕ್ಷಗಳ ಆಂತರಿಕ ಸಮೀಕ್ಷೆ – ಬಿಜೆಪಿಗೆಷ್ಟು ಸ್ಥಾನ , ಕಾಂಗ್ರೆಸ್ ಗೆ ಎಷ್ಟು ಸ್ಥಾನ..!!??
ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನು ಕೆಲವೇ ದಿನ ಬಾಕಿ ಇದೆ… ಈಗಾಗಲೇ ಯಾರಿಗೆ ಎಷ್ಟು ಸ್ಥಾನ ಬರಬಹುದು ಅನ್ನೋ ಲೆಕ್ಕಾಚಾರ ಶುರುವಾಗಿದೆ.. ರಾಜ್ಯದ 28 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು ಬರಬಹುದು ಅನ್ನೋದರ ಬಗ್ಗೆ ಚರ್ಚೆ ನಡೆದಿದೆ.. ಇತ್ತ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಆಂತರಿಕ ಸಮೀಕ್ಷೆ ನಡೆಸಿವೆ.
ಕಾಂಗೇಸ್ ಆಂತರಿಕ ಸಮೀಕ್ಷೆ ಏನು?
ರಾಜ್ಯದ 28 ಕ್ಷೇತ್ರಗಳಲ್ಲಿ ಪೈಕಿ ಕಾಂಗ್ರೆಸ್ ಗೆ ಎಷ್ಟು ಸ್ಥಾನ ಬರಬಹುದು ಎಂದು ಕಾಂಗ್ರೆಸ್ ಆಂತರಿಕ ಸಮೀಕ್ಷೆ ಮಾಡಿದೆ.. ಇದರ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಗೆ 14 ಸ್ಥಾನ ಬರಲಿದೆ.. ಉಳಿದ 14 ಸ್ಥಾನಗಳು NDA ಗೆ ಬರಲಿವೆ.. ಇದರಲ್ಲಿ ಕೆಲವು ಕ್ಷೇತ್ರಗಲ್ಲಲಿ 50-50 ಚಾನ್ಸೆಸ್ ಇದೆ ಅನ್ನೋದು ಕಾಂಗ್ರೆಸ್ ಲೆಕ್ಕ..
ಬಿಜೆಪಿ ಆಂತರಿಕ ಸಮೀಕ್ಷೆ ಲೆಕ್ಕಾಚಾರ ಏನು?
ಬಿಜೆಪಿ ನಾಯಕರು ಕೂಡ ಬೂತ್ ಮಟ್ಟದ ಸಮೀಕ್ಷೆ ಮಾಡಿ ಬಿಜೆಪಿ ಹಾಗೂ ಜೆಡಿಎಸ್ ಗೆ ಎಷ್ಟು ಸ್ಥಾನ ಬರಬಹುದು ಎಂದು ಲೆಕ್ಕ ಹಾಕಿದ್ದಾರೆ.. ಬಿಜೆಪಿ ನಾಯಕರ ಆಂತರಿಕ ಸಮೀಕ್ಷೆ ಪ್ರಕಾರ ಬಿಜೆಪಿ ಹಾಗೂ ಜೆಡಿಎಸ್ ಒಕ್ಕೂಟಕ್ಕೆ 17 ಸೀಟು ಬರಲಿವೆ.. ಇನ್ನು 5 ಕ್ಷೇತ್ರಗಳಲ್ಲಿ 50-50 ಚಾನ್ಸೆಸ್ ಇದೆಯಂತೆ.. ಬಿಜೆಪಿ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಗೆ 6 ಸ್ಥಾನಗಳು ಪಕ್ಕಾ.. 5 ಕ್ಷೇತ್ರಗಳು 50-50 ಚಾನ್ಸೆಸ್ ಇರೋದ್ರಿಂದ ಕಾಂಗ್ರೆಸ್ ಗೆ ಸೀಟುಗಳು ಇನ್ನು ಹೆಚ್ಚಾಗಬಹುದು..
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್