ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ
ಲೋಕಸಭಾ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆ ಶಿವಮೊಗ್ಗದ ಪಾತಕ ಲೋಕ ಮತ್ತೆ ಹೆಡೆಬಿಚ್ಚಿದೆ. ಇಂದು ಶಿವಮೊಗ್ಗದ ಜನನಿಬಿಡ ರಸ್ತೆಯಲ್ಲಿ ರೌಡಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆಯಾದರೆ ಹತ್ಯೆಮಾಡಲು ಬಂದ ಗ್ಯಾಂಗಿನ ಇಬ್ಬರು ನಡು ರಸ್ತೆಯಲ್ಲೆ ಹೆಣವಾಗಿ ಹೋಗಿದ್ದಾರೆ.!
ಹೌದು ಇಬ್ಬರ ಹತ್ಯೆಯಾದ ಸ್ಥಳವನ್ನು ನೋಡಿದರೆ ಇದೊಂದು ಡೆಂಜರಸ್ ಅಟ್ಯಾಕ್ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ.!?
ಶೊಯೆಬ್ ಹಾಗೂ ಗೌಸ್ ಹತ್ಯೆಯಾದ ವ್ಯಕ್ತಿಗಳಾಗಿದ್ದಾರೆ.
ಹಂತಕರು ಯಾವ ಮಟ್ಟಕ್ಕೆ ರಿವೆಂಜ್ ತಿರಿಸಿಕೊಂಡಿದ್ದಾರೆ ಎಂದರೆ ಇಬ್ಬರ ಮೇಲೆ ಆಟ್ಯಾಕ್ ಮಾಡಿದ ನಂತರದಲ್ಲಿ ನೆಲಕ್ಕುರುಳಿದ ಇಬ್ಬರ ಮೇಲು ಕಲ್ಲು ಚಪ್ಪಡಿ ಎತ್ತಿಹಾಕಿದ್ದಾರೆ.!!
ಎಂಕೆಕೆ ರೋಡಿ ರೌಡಿ ಯಾಸಿನ್ ಖುರೆಸಿ ಮತ್ತು ಕೆಆರ್ ಪುರಂನ ರೌಡಿ ಅದಿಲ್ ಇಬ್ಬರ ನಡುವಿನ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಇಂದು ಯಾಸಿನ್ ಖುರೆಸಿಯಾ ಮೇಲೆ ಅಟ್ಯಾಕ್ ಮಾಡಲು ಹೊಂಚು ಹಾಕಿ ಕುಳಿತಿದ್ದ ಹಂತಕರು ಲಶ್ಕರ್ ಮೊಹಲ್ಲಕೆ ಬಂದಿದ್ದಾರೆ ಅಲ್ಲಿಗೆ ಬಂದ ಯಾಸಿನ್ ಮೇಲೆ ಹಂತಕರು ಅಟ್ಯಾಕ್ ಮಾಡಲು ಮುಂದಾಗಿದ್ದಾರೆ ಅಷ್ಟೋತ್ತಿಗಾಗಲೆ ಅಲ್ಲೆ ಇದ್ದ ಯಾಸಿನ್ ಸಹಚರರು ಎದುರಾಳಿಗಳ ಮೇಲೆ ಅಟ್ಯಾಕ್ ಮಾಡಿದ್ದಾರೆ ಈ ಅಟ್ಯಾಕ್ ನಲ್ಲಿ ಹತ್ಯೆಗೆ ಬಂದ ಹಂತಕರೆ ಹೆಣವಾಗಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಂಧರ್ಭದಲ್ಲಿ ಯಾಸಿನ್ ಖುರೇಷಿ ಮೇಲು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆ ಕೈಗೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್