ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ |
ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ ಉತ್ಸಾಹದಿಂದ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. ಮಧ್ಯಾಹ್ನ 03 ಗಂಟೆವರೆಗೆ ಒಟ್ಟು ಶೇ.58.04 ಮತದಾನವಾಗಿದೆ.
ಎಲ್ಲೆಲ್ಲಿ ಎಷ್ಟೆಷ್ಟು ?
ಬೈಂದೂರು : 58.41
ಭದ್ರಾವತಿ : 53.28
ಸಾಗರ : 59.26
ಶಿಕಾರಿಪುರ : 60.75
ಶಿವಮೊಗ್ಗ : 53.16
ಶಿವಮೊಗ್ಗ ಗ್ರಾಮಾಂತರ : 61.63
ಸೊರಬ : 59.58
ತೀರ್ಥಹಳ್ಳಿ : 60.01
ಉತ್ಸಾಹದಿಂದ ಮತಗಟ್ಟೆಯಲ್ಲಿ ಜಮಾಯಿಸಿದ ಮತದಾರರು | ಮತಗಟ್ಟೆಗೆ ಬಂದು ಮತ ಚಲಾಯಿಸಿದ 96ವರ್ಷದ ನಾಗಮ್ಮ
ರಿಪ್ಪನ್ಪೇಟೆ;-ಶಿವಮೊಗ್ಗ ಲೋಕಸಭಾ ಚುನಾವಣೆಯ ಅಂಗವಾಗಿ ಇಂದು ಬೆಳಗ್ಗೆ ಮತದಾರರು ಮತಗಟ್ಟೆಯಲ್ಲಿ ಮುಂಜಾನೆಯಿAದಲೇ ಸರತಿಸಾಲಿನಲ್ಲಿ ಮತದಾನಕ್ಕೆ ಉತ್ಸುಕರಾಗಿ ನಿಂತು ಮತದಾನ ಮಾಡುತ್ತಿದ್ದು ವಿಶೇಷವಾಗಿತು.
ಬೇಸಿಗೆ ಬಿಸಿಲ ಕಾರಣ ಮತದಾರರು ತಂಪಾದ ಸಮಯದಲ್ಲಿ ಮತಹಾಕಿ ಮನೆ ಸೇರಿಕೊಂಡರಾಯಿತು ಎಂದು ಮುಂಜಾನೆಯೇ ವಯೋವೃದ್ದರು ಮಹಿಳೆಯರು ಹೊಸದಾಗಿ ಸೇರ್ಪಡೆಯಾದ ಹೊಸ ಮತದಾರರು ಸರತಿ ಸಾಲಿನಲ್ಲಿ ಮತಗಟ್ಟೆಯಲ್ಲಿ ನಿಂತು ಮತದಾನ ಮಾಡಿ ಮತಹಾಕಿದ ಬಗ್ಗೆ ತಮ್ಮ ಬೆರಳನ್ನು ಎತ್ತಿ ಹಿಡಿದುಕೊಂಡು ಹೊರಬರುತ್ತಿದ್ದುದ್ದು ವಿಶೇಷವಾಗಿತು.
ಇಲ್ಲಿನ ಬರುವೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ಮೂರು ಮತಗಟ್ಟೆಗಳಿದ್ದು ಈ ಎಲ್ಲ ಮತದಾನ ಕೇಂದ್ರದಲ್ಲಿ ಮತದಾನ ಮಾಡಲು ಬಂದು ಹೋಗುವವರನ್ನು ರಾಷ್ಟ್ರೀಯ ಪಕ್ಷಗಳಾ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರುಗಳು ಹಸ್ತಲಾಘವ ಮಾಡಿ ಶುಭಕೋರುತ್ತಿದ್ದರು.
ಇನ್ನೂ ಪಕ್ಷೇತರ ಅಭ್ಯರ್ಥಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ ಕಡೆಯವರು ನಾವುಗಳು ಏನು ಕಡಿಮೆ ಎಂಬಂತೆ ಮತದಾನಕ್ಕೆ ಬರುವವರನ್ನು ಸ್ವಾಗತಿಸಿ ತಮ್ಮ ಪರ ಮತಮಾಡಲು ಪ್ರೇರಪಿಸುತ್ತಿರುವುದು ಕಂಡು ಬಂತು.
ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಮತಗಟ್ಟೆಯಲ್ಲಿ 96 ವರ್ಷದ ನಾಗಮ್ಮ ಶಿವಪ್ಪಗೌಡ ಕಗ್ಗಲಿ ರವರು ಮತಗಟ್ಟೆಗೆ ಬಂದು ಮತ ಚಲಾಯಿಸಿ ತಮ್ಮ 96 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು ವಿಶೇಷವಾಗಿತ್ತು.
ರಫ಼ಿ ರಿಪ್ಪನ್ ಪೇಟೆನಮಸ್ಕಾರ, ನಾನು ರಫಿ ರಿಪ್ಪನ್ಪೇಟೆ. 'ಪೋಸ್ಟ್ಮ್ಯಾನ್ ನ್ಯೂಸ್' ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. "ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು" ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್ಮ್ಯಾನ್ ನ್ಯೂಸ್. ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, 'ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ'. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್ಮ್ಯಾನ್ ನ್ಯೂಸ್.” ಇಲ್ಲಿ 'ಸುದ್ದಿ' ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: "ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ." ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ. 'ಪೋಸ್ಟ್ಮ್ಯಾನ್ ನ್ಯೂಸ್' ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ 'ಸೇತುವೆ'ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ. ನಮ್ಮ ಅಂತಿಮ ಗುರಿ ಒಂದೇ — "ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು." ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ. ಸ್ನೇಹಪೂರ್ವಕವಾಗಿ, ರಫಿ ರಿಪ್ಪನ್ಪೇಟೆ ಸಂಪಾದಕರು, ಪೋಸ್ಟ್ಮ್ಯಾನ್ ನ್ಯೂಸ್ 🌐 [www.postmannewskannada.com]